Chikkamagaluru: 21 ತಲೆಮಾರುಗಳಿಂದ ನಡೆದುಕೊಂಡು ಬರ್ತಿರೋ ವಿಶಿಷ್ಟ ಗದ್ದೆ ನಾಟಿ ಸಂಪ್ರದಾಯ

Chikkamagaluru: 21 ತಲೆಮಾರುಗಳಿಂದ ನಡೆದುಕೊಂಡು ಬರ್ತಿರೋ ವಿಶಿಷ್ಟ ಗದ್ದೆ ನಾಟಿ ಸಂಪ್ರದಾಯ

Published : Aug 04, 2022, 03:47 PM IST

ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಕಳೆದ 21 ತಲೆಮಾರುಗಳಿಂದ ಅಂದ್ರೆ ಸುಮಾರು 500 ವರ್ಷಗಳಿಂದ ನಡೆದುಕೊಂಡು ಬಂದ ಗ್ರಾಮೀಣ ಭಾಗದ ಸಂಪ್ರದಾಯ ಇಂದಿಗೂ ಜೀವಂತವಾಗಿದೆ.

ಚಿಕ್ಕಮಗಳೂರು (ಆ. 04): ಇಲ್ಲಿನ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಕಳೆದ 21 ತಲೆಮಾರುಗಳಿಂದ ಅಂದ್ರೆ ಸುಮಾರು 500 ವರ್ಷಗಳಿಂದ ನಡೆದುಕೊಂಡು ಬಂದ ಗ್ರಾಮೀಣ ಭಾಗದ ಸಂಪ್ರದಾಯ ಇಂದಿಗೂ ಜೀವಂತವಾಗಿದೆ. ಪ್ರತಿ ವರ್ಷ ಗದ್ದೆ ನಾಟಿ ಮಾಡುವ ಸಮಯದಲ್ಲಿ ಹೊರನಾಡು ಗ್ರಾಮದ ದೊಡ್ಡಮನೆ ರಾಜೇಂದ್ರ ಹೆಗ್ಗಡೆ ಎಂಬುವರ ಮನೆಯ ಗದ್ದೆ ನಾಟಿ ಮಾಡಿದ ಬಳಿಕವೇ ಊರಿನ ಉಳಿದ ಗದ್ದೆಗಳನ್ನ ನಾಟಿ ಮಾಡೋದು. ದೊಡ್ಡಮನೆ ಗದ್ದೆಯ ನಾಟಿ ಮಾಡುವ ದಿನ ಗ್ರಾಮದ ಪ್ರತಿಯೊಂದು ಮನೆಯಿಂದಲೂ ಒಬ್ಬೊಬ್ಬರು ಹೋಗಿ ನಾಟಿ ಮಾಡುವ ಸಂಪ್ರದಾಯಕ್ಕೆ ಐದು ಶತಮಾನಗಳ ಇತಿಹಾಸವಿದೆ. ಅಂದು ಗಂಡಸರು-ಹೆಂಗಸರು ಎಲ್ಲಾರೂ ಗದ್ದೆಯನ್ನ ನಾಟಿ ಮಾಡುತ್ತಾರೆ. ಮರು ದಿನದಿಂದ ಗ್ರಾಮದ ಬೇರೆ ಗದ್ದೆಗಳನ್ನ ನಾಟಿ ಮಾಡುತ್ತಾರೆ. 

ಇನ್ನು ಈ ದೊಡ್ಡ ಮನೆ ಹೆಗ್ಗಡೆಯವರನ್ನ ಅನಾದಿ ಕಾಲದಿಂದ ಗ್ರಾಮದ ಜನ ಗೌರವಿಸಿಕೊಂಡು ಬಂದಿದ್ದಾರೆ. ಇವರನ್ನ ಪಾಳೇಗಾರರು, ಗೌಡರು, ಪಟೇಲರು ಎಂಬ ಮುಂತಾದ ಹೆಸರಿನಿಂದಲೂ ಕರೆಯುತ್ತಾರೆ. ಇಂದು ನಡೆದ ಈ ನಾಟಿ ಕಾರ್ಯಕ್ರಮದಲ್ಲಿ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದರು. ನಾನು ಕಳೆದ ವರ್ಷ ಬರಲು ಸಾಧ್ಯವಾಗಿರಲಿಲ್ಲ. ಈ ವರ್ಷ ಬಂದಿದ್ದೇನೆ. ಈ ದಿನ ಗ್ರಾಮದ ಪ್ರತಿ ಮನೆಯಲ್ಲೂ ಹಬ್ಬದ ವಾತಾವರಣ ಏರ್ಪಟ್ಟಿರುತ್ತೆ. ಭೂಮಿಯ ಅಂತರ್ಜಲ ಹೆಚ್ಚಲು ಹೆಚ್ಚು ಗದ್ದೆಗಳನ್ನ ನಾಟಿ ಮಾಡಬೇಕು. ಇಂತಹಾ ಕಾರ್ಯಕ್ರಮಕ್ಕೆ ಉತ್ತೇಜನ ನೀಡಲು ಈ ದಿನ ನಾನು ಗದ್ದೆಗಿಳಿದು ನಾಟಿ ಮಾಡಿದ್ದೇನೆ ಎಂದು 21 ತಲೆಮಾರಿನ ಈ ಕಾರ್ಯಕ್ರಮವನ್ನ ಶ್ಲಾಘಿಸಿದ್ದಾರೆ. 

 ಜಗತ್ತು ಆಧುನಿಕತೆಗೆ ಕಾಲಿಟ್ಟಂತೆಲ್ಲಾ ಭವ್ಯ ಭಾರತದ ಪುರಾತನ ಸಂಸ್ಕೃತಿ, ರೂಢಿ-ಸಂಪ್ರದಾಯ ಕಣ್ಮರೆಯಾಗುತ್ತಿದೆ. ಅಲ್ಲೊಂದು  ಇಲ್ಲೊಂದು ಹಳ್ಳಿಯಲ್ಲಿ ನಮ್ಮ ಪರಂಪರೆಯ ಹೆಜ್ಜೆ ಗುರುತುಗಳು ಉಳಿದಿವೆ. ಆದ್ರೆ, ಈ ರೀತಿ 500 ವರ್ಷಗಳಿಂದ ಹಳ್ಳಿಯೊಂದರಲ್ಲಿ ಒಂದು ಸಂಪ್ರದಾಯ ಆಧುನಿಕತೆಯ ಭರಾಟೆಯ ಮಧ್ಯೆ ಇಂದಿಗೂ ನಿರಂತರವಾಗಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more