Feb 23, 2023, 4:08 PM IST
ಮಂಡ್ಯದ ಕೆ.ಎಂ ದೊಡ್ಡಿ ಗ್ರಾಮದ ವೆಂಕಟೇಶ್ವರ ದೇವಸ್ಥಾನದಿಂದ, ಬ್ರಹ್ಮಚಾರಿಗಳ ನಡೆ ಮಾದಪ್ಪನ ಬೆಟ್ಟದ ಕಡೆ ಎಂಬ ಘೋಷ ವಾಕ್ಯದೊಂದಿಗೆ ಕಾಲ್ನಡಿಗೆ ಆರಂಭವಾಗಿದೆ. ಅವಿವಾಹಿತ ಯುವಕರ ಪಾದಯಾತ್ರೆಗೆ ನಟ ಡಾಲಿ ಧನಂಜಯ್ ಚಾಲನೆ ನೀಡಿದ್ದಾರೆ. ಸ್ವಲ್ಪ ದೂರು ಪಾದಯಾತ್ರಿಗಳೊಂದಿಗೆ ಹೆಜ್ಜೆ ಹಾಕಿದ ಡಾಲಿ,ಮುಂದಿನ ವರ್ಷದೊಳಗೆ ಮದುವೆ ಆಗಲಿ ಅಂತ ಶುಭ ಹಾರೈಸಿದರು.