ಪೂಜೆ ವೇಳೆ ಅಲುಗಾಡುತ್ತೆ 16 ಅಡಿಯ ಹುತ್ತ ..ಕಾಫಿನಾಡಲ್ಲೊಂದು ವಿಸ್ಮಯ ಉತ್ಸವ..!

ಪೂಜೆ ವೇಳೆ ಅಲುಗಾಡುತ್ತೆ 16 ಅಡಿಯ ಹುತ್ತ ..ಕಾಫಿನಾಡಲ್ಲೊಂದು ವಿಸ್ಮಯ ಉತ್ಸವ..!

Published : Nov 28, 2023, 11:16 AM IST

ಈ ಊರಿನ ಜಾತ್ರೆ ವಿಸ್ಮಯಕಾರಿ.. ಹುತ್ತದ ಸುತ್ತಲೂ ಕಲ್ಲು -ಸಿಮೆಂಟ್‌ಗಳಿಂದ ಬಂದೋಬಸ್ತ್ ಮಾಡಿದ್ರು ಹುಣ್ಣೆಮೆ ದಿನ ಅಲುಗಾಡುತ್ತದೆ. 4 ಶತಕಗಳ ಇತಿಹಾಸಕ್ಕೆ ಇದು ಸಾಕ್ಷಿಯಾಗಿದೆ.

ಪ್ರಕೃತಿಯ ವೈಚಿತ್ರ್ಯವೇ ಹಾಗೆ ಭೂಗರ್ಭದ ಒಡಲಾಳದ ಅದೆಷ್ಟೋ ಸತ್ಯಗಳಿಗೆ ಕಾರಣ ಸಿಗಲ್ಲ. ಪ್ರಕೃತಿಯ ವಿಚಿತ್ರವನ್ನ ಕಂಡು ಮೂಕವಿಸ್ಮಿತವಾಗಬೇಕು. ಅಂತಹದ್ದೆ ಘಟನೆಗೆ ಚಿಕ್ಕಮಗಳೂರು(Chikkamagaluru) ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಉಣ್ಣಕ್ಕಿ ಉತ್ಸವ ಸಾಕ್ಷಿಯಾಗಿದೆ. ದನ ಕಾಯೋ ಹುಡುಗರು ಕಟ್ಟಿದ ಮಣ್ಣಿನ ಗೂಡು ಇಂದು ಸಾವಿರಾರು ಭಕ್ತರ ಇಷ್ಟದೈವವಾಗಿದೆ. ಹೊಯ್ಸಳರ ಕಾಲದಿಂದಲೂ ನಡೆದು ಬರುತ್ತಿರುವ ಆಚರಣೆಗೆ 400 ವರ್ಷಗಳ ಇತಿಹಾಸವಿದೆ. ಪ್ರತಿ ವರ್ಷ ದೀಪಾವಳಿ ಅಮಾವಸ್ಯೆಯ( Diwali Amavasya) ನಂತರದ ಹುಣ್ಣೆಮೆಯಂದು ಉಣ್ಣಕ್ಕಿ ಉತ್ಸವ(Unnakki Utsav) ನಡೆಯುತ್ತೆ. ಈ ಉತ್ಸವದಲ್ಲಿ ಮಹಾಮಂಗಳಾರತಿ ವೇಳೆ ಹುತ್ತ 10 ರಿಂದ 15 ಡಿಗ್ರಿ ಅಂತರದಲ್ಲಿ ಅಲುಗಾಡಲಿದೆ.ಈ ಹುತ್ತ ಬರೀ ಮಣ್ಣಿನ ಗೂಡಲ್ಲ. ದೈವಿಶಕ್ತಿಯ ಗುಡಿ.400 ವರ್ಷಗಳ ಹಿಂದೆ  ಚಿಕ್ಕದ್ದಿದ್ದ ಗೂಡು ಇಂದು 16 ಅಡಿಗೂ ಎತ್ತರಕ್ಕೆ ಬೆಳೆದಿದೆ. ಈ ಹುತ್ತ ಮಳೆ-ಗಾಳಿಗೆ ಕರಗಿಲ್ಲ.  ವರ್ಷಪೂರ್ತಿ ಮಣ್ಣಿನ ಗೊಂಬೆಯಂತೆ ನಿಂತ ಹುತ್ತ ವರ್ಷಕ್ಕೊಮ್ಮೆ ಭಕ್ತರನ್ನ ಮೂಕವಿಸ್ಮಿತರನ್ನಾಗಿಸುತ್ತೆ. ಈ ಪವಾಡವನ್ನ ನೋಡಲೆಂದು ಬಂದವರು ನಾಗಪ್ಪನ ಭಕ್ತರಾಗಿ ಪ್ರತಿ ವರ್ಷ ಬರ್ತಿದ್ದಾರೆ. 

ಉತ್ಸವದಂದು ಯಾವುದೇ ಗಾಯವಾಗದ ಕರುವಿನ ಕಿವಿಯನ್ನ ಕತ್ತರಿಸಿ ದೇವರ ಕರುವೆಂದು ಕಾಡಿಗೆ ಬಿಡ್ತಾರೆ. ಇದರಿಂದ ಊರಿನ ದನಕರುಗಳು ಆರೋಗ್ಯದಿಂದಿದ್ದು, ಯಾವುದೇ ಅನಾಹುತಗಳು ನಡೆಯೋದಿಲ್ಲ ಅನ್ನೋದು ಭಕ್ತರ ನಂಬಿಕೆ. ದನ ಕಾಯೋ ಹುಡುಗರು ಕಟ್ಟಿದ ಹುತ್ತವಾದ್ರಿಂದ ಕರುವನ್ನ ಕಾಡಿಗೆ ಹೊಡೆಯೋ ಆಚರಣೆ ಬೆಳೆದು ಬಂದಿದೆ. ಉತ್ಸವದ ದಿನ ಕರುವನ್ನ ಹುತ್ತಕ್ಕೆ ಸುತ್ತಿಸುವ ವೇಳೆ ಕರುವಿನ ಮೇಲೆ ಮಂಡಕ್ಕಿ ಹಾಕ್ತೇವೆಂದು ಹರಕೆ ಕಟ್ಟಿಕೊಂಡ್ರೆ ಎಂತಹಾ ಕಷ್ಟವಾದ್ರೂ ನಿವಾರಣೆಯಾಗುತ್ತಂತೆ. ಪ್ರತಿವರ್ಷ ದೀಪಾವಳಿಯ ನಂತರದ ಮಕ್ಕಳ ಹುಣ್ಣಿಮೆಯ ಗುರುವಾರ ಅಥವಾ ಭಾನುವಾರದ ತಡರಾತ್ರಿ ಈ ಉತ್ಸವ ನಡೆಯಲಿದೆ. ಚರ್ಮರೋಗ, ಮಕ್ಕಳಾಗದವರು, ದನಕರು ಸಾಯ್ತಿದ್ರೆ ಅಥವಾ ಆರೋಗ್ಯ ಹದಗೆಟ್ತಿದ್ರೆ ಹರಕೆ ಕಟ್ಟಿಕೊಳ್ಳಲಿದ್ದಾರೆ. ಇಲ್ಲಿಗೆ ಹರಕೆ ಕಟ್ಟಿಕೊಂಡರೇ ವರ್ಷದೊಳಗೆ ಆ ಹರಕೆ ಈಡೇರುತ್ತಂತೆ.

ಇದನ್ನೂ ವೀಕ್ಷಿಸಿ:  ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ..ಲಕ್ಷಾಂತರ ಭಕ್ತರಿಂದ ತುಂಬಿ ತುಳುಕಿದ ರಾಯರ ಮಠ

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more