Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

Suvarna News   | Asianet News
Published : Feb 19, 2022, 12:15 PM IST

*  ಸೈಯ್ಯದ್ ಹಸನ್ ಶಾ‌ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ‌ ಕಾಲ ನಡೆದ ಉರೂಸ್ 
*  ಮುಸ್ಲಿಮರೊಂದಿಗೆ ಹರಕೆಯ ಚಾದರ್‌ಗಳನ್ನು ಅರ್ಪಿಸಿದ ಹಿಂದೂಗಳು
*  ದರ್ಗಾದಲ್ಲಿ ಅಗರಬತ್ತಿ ಹಚ್ಚಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದ ಭಕ್ತರು
 

ಅಂಕೋಲಾ(ಫೆ.19):  ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಜೈಹಿಂದ್ ಹೈಸ್ಕೂಲ್ ಪಕ್ಕದಲ್ಲಿರುವ ಸೈಯ್ಯದ್ ಹಸನ್ ಶಾ‌ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ‌ ಕಾಲ ನಡೆದ ಉರುಸ್ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿ ನೆರವೇರಿದೆ.‌ ದರ್ಗಾದಲ್ಲಿ ನಡೆದ ಉರೂಸ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದು, ಇದರಲ್ಲಿ ಕೇವಲ ಮುಸ್ಲಿಮರಷ್ಟೇ ಅಲ್ಲದೇ, ಹಿಂದೂಗಳೂ ಕೂಡಾ ಸೇರಿಕೊಂಡದ್ದು ವಿಶೇಷವಾಗಿತ್ತು. 

ದರ್ಗಾದಲ್ಲಿ ಮುಸ್ಲಿಮರೊಂದಿಗೆ ಹಿಂದೂಗಳೂ ಕೂಡ ಹರಕೆಯಾಗಿ ಚಾದರ್‌ಗಳನ್ನು ಹೊದಿಸಿದರು. ರಾತ್ರಿ ನಡೆದ ಅನ್ನಸಂತರ್ಪಣೆಯಲ್ಲೂ ಜಾತಿ, ಧರ್ಮ ಭೇದ ಮರೆತು ಸಾವಿರಾರು ಜನ ಪಾಲ್ಗೊಂಡು ಭಾವೈಕ್ಯತೆ ಮೆರೆದಿದ್ದಾರೆ. 

Hijab Row: ಹಿಜಾಬ್ ತೆಗೆದು ಕ್ಲಾಸ್‌ಗೆ ಹೋಗಿ, ಶಾಂತಿ ಮಂತ್ರ ಜಪಿಸಿದ ಅಂಜುಮನ್ ಸಂಸ್ಥೆ

ಇನ್ನು ಉರುಸ್ ಅಂಗವಾಗಿ ಅಂಕೋಲಾ ಪಟ್ಟಣದಲ್ಲಿ ಮುಸ್ಲಿಮರಿಂದ ಮೆರವಣಿಗೆ ನಡೆಯಿತು. ಈ ವೇಳೆ ಹಿಂದೂಗಳು ಕೂಡ ಮೆರವಣಿಗೆ ವೇಳೆ ಕೈಮುಗಿದು ಪ್ರಾರ್ಥಿಸಿದರು. ದರ್ಗಾದಲ್ಲಿ ಅಗರಬತ್ತಿ ಹಚ್ಚಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಹಿಂದೂ- ಮುಸ್ಲಿಂ ಎಂಬ ಭೇದ ಭಾವ ಸೃಷ್ಟಿಯಾಗಿರುವ ಇತ್ತೀಚಿನ ದಿನಗಳಲ್ಲಿ ಅಂಕೋಲಾದಲ್ಲಿ ನಡೆದ ಈ ಉರೂಸ್ ಎಲ್ಲರನ್ನೂ ಒಗ್ಗೂಡಿಸುವ ಕಾರ್ಯ ಮಾಡಿರುವುದು ಮಾದರಿಯೇ ಸರಿ.
 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more