Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

Suvarna News   | Asianet News
Published : Feb 19, 2022, 12:15 PM IST

*  ಸೈಯ್ಯದ್ ಹಸನ್ ಶಾ‌ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ‌ ಕಾಲ ನಡೆದ ಉರೂಸ್ 
*  ಮುಸ್ಲಿಮರೊಂದಿಗೆ ಹರಕೆಯ ಚಾದರ್‌ಗಳನ್ನು ಅರ್ಪಿಸಿದ ಹಿಂದೂಗಳು
*  ದರ್ಗಾದಲ್ಲಿ ಅಗರಬತ್ತಿ ಹಚ್ಚಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದ ಭಕ್ತರು
 

ಅಂಕೋಲಾ(ಫೆ.19):  ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಜೈಹಿಂದ್ ಹೈಸ್ಕೂಲ್ ಪಕ್ಕದಲ್ಲಿರುವ ಸೈಯ್ಯದ್ ಹಸನ್ ಶಾ‌ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ‌ ಕಾಲ ನಡೆದ ಉರುಸ್ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿ ನೆರವೇರಿದೆ.‌ ದರ್ಗಾದಲ್ಲಿ ನಡೆದ ಉರೂಸ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದು, ಇದರಲ್ಲಿ ಕೇವಲ ಮುಸ್ಲಿಮರಷ್ಟೇ ಅಲ್ಲದೇ, ಹಿಂದೂಗಳೂ ಕೂಡಾ ಸೇರಿಕೊಂಡದ್ದು ವಿಶೇಷವಾಗಿತ್ತು. 

ದರ್ಗಾದಲ್ಲಿ ಮುಸ್ಲಿಮರೊಂದಿಗೆ ಹಿಂದೂಗಳೂ ಕೂಡ ಹರಕೆಯಾಗಿ ಚಾದರ್‌ಗಳನ್ನು ಹೊದಿಸಿದರು. ರಾತ್ರಿ ನಡೆದ ಅನ್ನಸಂತರ್ಪಣೆಯಲ್ಲೂ ಜಾತಿ, ಧರ್ಮ ಭೇದ ಮರೆತು ಸಾವಿರಾರು ಜನ ಪಾಲ್ಗೊಂಡು ಭಾವೈಕ್ಯತೆ ಮೆರೆದಿದ್ದಾರೆ. 

Hijab Row: ಹಿಜಾಬ್ ತೆಗೆದು ಕ್ಲಾಸ್‌ಗೆ ಹೋಗಿ, ಶಾಂತಿ ಮಂತ್ರ ಜಪಿಸಿದ ಅಂಜುಮನ್ ಸಂಸ್ಥೆ

ಇನ್ನು ಉರುಸ್ ಅಂಗವಾಗಿ ಅಂಕೋಲಾ ಪಟ್ಟಣದಲ್ಲಿ ಮುಸ್ಲಿಮರಿಂದ ಮೆರವಣಿಗೆ ನಡೆಯಿತು. ಈ ವೇಳೆ ಹಿಂದೂಗಳು ಕೂಡ ಮೆರವಣಿಗೆ ವೇಳೆ ಕೈಮುಗಿದು ಪ್ರಾರ್ಥಿಸಿದರು. ದರ್ಗಾದಲ್ಲಿ ಅಗರಬತ್ತಿ ಹಚ್ಚಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಹಿಂದೂ- ಮುಸ್ಲಿಂ ಎಂಬ ಭೇದ ಭಾವ ಸೃಷ್ಟಿಯಾಗಿರುವ ಇತ್ತೀಚಿನ ದಿನಗಳಲ್ಲಿ ಅಂಕೋಲಾದಲ್ಲಿ ನಡೆದ ಈ ಉರೂಸ್ ಎಲ್ಲರನ್ನೂ ಒಗ್ಗೂಡಿಸುವ ಕಾರ್ಯ ಮಾಡಿರುವುದು ಮಾದರಿಯೇ ಸರಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more