Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

Suvarna News   | Asianet News
Published : Feb 19, 2022, 12:15 PM IST

*  ಸೈಯ್ಯದ್ ಹಸನ್ ಶಾ‌ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ‌ ಕಾಲ ನಡೆದ ಉರೂಸ್ 
*  ಮುಸ್ಲಿಮರೊಂದಿಗೆ ಹರಕೆಯ ಚಾದರ್‌ಗಳನ್ನು ಅರ್ಪಿಸಿದ ಹಿಂದೂಗಳು
*  ದರ್ಗಾದಲ್ಲಿ ಅಗರಬತ್ತಿ ಹಚ್ಚಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದ ಭಕ್ತರು
 

ಅಂಕೋಲಾ(ಫೆ.19):  ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಜೈಹಿಂದ್ ಹೈಸ್ಕೂಲ್ ಪಕ್ಕದಲ್ಲಿರುವ ಸೈಯ್ಯದ್ ಹಸನ್ ಶಾ‌ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ‌ ಕಾಲ ನಡೆದ ಉರುಸ್ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿ ನೆರವೇರಿದೆ.‌ ದರ್ಗಾದಲ್ಲಿ ನಡೆದ ಉರೂಸ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದು, ಇದರಲ್ಲಿ ಕೇವಲ ಮುಸ್ಲಿಮರಷ್ಟೇ ಅಲ್ಲದೇ, ಹಿಂದೂಗಳೂ ಕೂಡಾ ಸೇರಿಕೊಂಡದ್ದು ವಿಶೇಷವಾಗಿತ್ತು. 

ದರ್ಗಾದಲ್ಲಿ ಮುಸ್ಲಿಮರೊಂದಿಗೆ ಹಿಂದೂಗಳೂ ಕೂಡ ಹರಕೆಯಾಗಿ ಚಾದರ್‌ಗಳನ್ನು ಹೊದಿಸಿದರು. ರಾತ್ರಿ ನಡೆದ ಅನ್ನಸಂತರ್ಪಣೆಯಲ್ಲೂ ಜಾತಿ, ಧರ್ಮ ಭೇದ ಮರೆತು ಸಾವಿರಾರು ಜನ ಪಾಲ್ಗೊಂಡು ಭಾವೈಕ್ಯತೆ ಮೆರೆದಿದ್ದಾರೆ. 

Hijab Row: ಹಿಜಾಬ್ ತೆಗೆದು ಕ್ಲಾಸ್‌ಗೆ ಹೋಗಿ, ಶಾಂತಿ ಮಂತ್ರ ಜಪಿಸಿದ ಅಂಜುಮನ್ ಸಂಸ್ಥೆ

ಇನ್ನು ಉರುಸ್ ಅಂಗವಾಗಿ ಅಂಕೋಲಾ ಪಟ್ಟಣದಲ್ಲಿ ಮುಸ್ಲಿಮರಿಂದ ಮೆರವಣಿಗೆ ನಡೆಯಿತು. ಈ ವೇಳೆ ಹಿಂದೂಗಳು ಕೂಡ ಮೆರವಣಿಗೆ ವೇಳೆ ಕೈಮುಗಿದು ಪ್ರಾರ್ಥಿಸಿದರು. ದರ್ಗಾದಲ್ಲಿ ಅಗರಬತ್ತಿ ಹಚ್ಚಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಹಿಂದೂ- ಮುಸ್ಲಿಂ ಎಂಬ ಭೇದ ಭಾವ ಸೃಷ್ಟಿಯಾಗಿರುವ ಇತ್ತೀಚಿನ ದಿನಗಳಲ್ಲಿ ಅಂಕೋಲಾದಲ್ಲಿ ನಡೆದ ಈ ಉರೂಸ್ ಎಲ್ಲರನ್ನೂ ಒಗ್ಗೂಡಿಸುವ ಕಾರ್ಯ ಮಾಡಿರುವುದು ಮಾದರಿಯೇ ಸರಿ.
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more