Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

Suvarna News   | Asianet News
Published : Feb 19, 2022, 12:15 PM IST

*  ಸೈಯ್ಯದ್ ಹಸನ್ ಶಾ‌ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ‌ ಕಾಲ ನಡೆದ ಉರೂಸ್ 
*  ಮುಸ್ಲಿಮರೊಂದಿಗೆ ಹರಕೆಯ ಚಾದರ್‌ಗಳನ್ನು ಅರ್ಪಿಸಿದ ಹಿಂದೂಗಳು
*  ದರ್ಗಾದಲ್ಲಿ ಅಗರಬತ್ತಿ ಹಚ್ಚಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದ ಭಕ್ತರು
 

ಅಂಕೋಲಾ(ಫೆ.19):  ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಜೈಹಿಂದ್ ಹೈಸ್ಕೂಲ್ ಪಕ್ಕದಲ್ಲಿರುವ ಸೈಯ್ಯದ್ ಹಸನ್ ಶಾ‌ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ‌ ಕಾಲ ನಡೆದ ಉರುಸ್ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿ ನೆರವೇರಿದೆ.‌ ದರ್ಗಾದಲ್ಲಿ ನಡೆದ ಉರೂಸ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದು, ಇದರಲ್ಲಿ ಕೇವಲ ಮುಸ್ಲಿಮರಷ್ಟೇ ಅಲ್ಲದೇ, ಹಿಂದೂಗಳೂ ಕೂಡಾ ಸೇರಿಕೊಂಡದ್ದು ವಿಶೇಷವಾಗಿತ್ತು. 

ದರ್ಗಾದಲ್ಲಿ ಮುಸ್ಲಿಮರೊಂದಿಗೆ ಹಿಂದೂಗಳೂ ಕೂಡ ಹರಕೆಯಾಗಿ ಚಾದರ್‌ಗಳನ್ನು ಹೊದಿಸಿದರು. ರಾತ್ರಿ ನಡೆದ ಅನ್ನಸಂತರ್ಪಣೆಯಲ್ಲೂ ಜಾತಿ, ಧರ್ಮ ಭೇದ ಮರೆತು ಸಾವಿರಾರು ಜನ ಪಾಲ್ಗೊಂಡು ಭಾವೈಕ್ಯತೆ ಮೆರೆದಿದ್ದಾರೆ. 

Hijab Row: ಹಿಜಾಬ್ ತೆಗೆದು ಕ್ಲಾಸ್‌ಗೆ ಹೋಗಿ, ಶಾಂತಿ ಮಂತ್ರ ಜಪಿಸಿದ ಅಂಜುಮನ್ ಸಂಸ್ಥೆ

ಇನ್ನು ಉರುಸ್ ಅಂಗವಾಗಿ ಅಂಕೋಲಾ ಪಟ್ಟಣದಲ್ಲಿ ಮುಸ್ಲಿಮರಿಂದ ಮೆರವಣಿಗೆ ನಡೆಯಿತು. ಈ ವೇಳೆ ಹಿಂದೂಗಳು ಕೂಡ ಮೆರವಣಿಗೆ ವೇಳೆ ಕೈಮುಗಿದು ಪ್ರಾರ್ಥಿಸಿದರು. ದರ್ಗಾದಲ್ಲಿ ಅಗರಬತ್ತಿ ಹಚ್ಚಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಹಿಂದೂ- ಮುಸ್ಲಿಂ ಎಂಬ ಭೇದ ಭಾವ ಸೃಷ್ಟಿಯಾಗಿರುವ ಇತ್ತೀಚಿನ ದಿನಗಳಲ್ಲಿ ಅಂಕೋಲಾದಲ್ಲಿ ನಡೆದ ಈ ಉರೂಸ್ ಎಲ್ಲರನ್ನೂ ಒಗ್ಗೂಡಿಸುವ ಕಾರ್ಯ ಮಾಡಿರುವುದು ಮಾದರಿಯೇ ಸರಿ.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more