Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

Suvarna News   | Asianet News
Published : Feb 19, 2022, 12:15 PM IST

*  ಸೈಯ್ಯದ್ ಹಸನ್ ಶಾ‌ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ‌ ಕಾಲ ನಡೆದ ಉರೂಸ್ 
*  ಮುಸ್ಲಿಮರೊಂದಿಗೆ ಹರಕೆಯ ಚಾದರ್‌ಗಳನ್ನು ಅರ್ಪಿಸಿದ ಹಿಂದೂಗಳು
*  ದರ್ಗಾದಲ್ಲಿ ಅಗರಬತ್ತಿ ಹಚ್ಚಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದ ಭಕ್ತರು
 

ಅಂಕೋಲಾ(ಫೆ.19):  ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಜೈಹಿಂದ್ ಹೈಸ್ಕೂಲ್ ಪಕ್ಕದಲ್ಲಿರುವ ಸೈಯ್ಯದ್ ಹಸನ್ ಶಾ‌ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ‌ ಕಾಲ ನಡೆದ ಉರುಸ್ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿ ನೆರವೇರಿದೆ.‌ ದರ್ಗಾದಲ್ಲಿ ನಡೆದ ಉರೂಸ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದು, ಇದರಲ್ಲಿ ಕೇವಲ ಮುಸ್ಲಿಮರಷ್ಟೇ ಅಲ್ಲದೇ, ಹಿಂದೂಗಳೂ ಕೂಡಾ ಸೇರಿಕೊಂಡದ್ದು ವಿಶೇಷವಾಗಿತ್ತು. 

ದರ್ಗಾದಲ್ಲಿ ಮುಸ್ಲಿಮರೊಂದಿಗೆ ಹಿಂದೂಗಳೂ ಕೂಡ ಹರಕೆಯಾಗಿ ಚಾದರ್‌ಗಳನ್ನು ಹೊದಿಸಿದರು. ರಾತ್ರಿ ನಡೆದ ಅನ್ನಸಂತರ್ಪಣೆಯಲ್ಲೂ ಜಾತಿ, ಧರ್ಮ ಭೇದ ಮರೆತು ಸಾವಿರಾರು ಜನ ಪಾಲ್ಗೊಂಡು ಭಾವೈಕ್ಯತೆ ಮೆರೆದಿದ್ದಾರೆ. 

Hijab Row: ಹಿಜಾಬ್ ತೆಗೆದು ಕ್ಲಾಸ್‌ಗೆ ಹೋಗಿ, ಶಾಂತಿ ಮಂತ್ರ ಜಪಿಸಿದ ಅಂಜುಮನ್ ಸಂಸ್ಥೆ

ಇನ್ನು ಉರುಸ್ ಅಂಗವಾಗಿ ಅಂಕೋಲಾ ಪಟ್ಟಣದಲ್ಲಿ ಮುಸ್ಲಿಮರಿಂದ ಮೆರವಣಿಗೆ ನಡೆಯಿತು. ಈ ವೇಳೆ ಹಿಂದೂಗಳು ಕೂಡ ಮೆರವಣಿಗೆ ವೇಳೆ ಕೈಮುಗಿದು ಪ್ರಾರ್ಥಿಸಿದರು. ದರ್ಗಾದಲ್ಲಿ ಅಗರಬತ್ತಿ ಹಚ್ಚಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಹಿಂದೂ- ಮುಸ್ಲಿಂ ಎಂಬ ಭೇದ ಭಾವ ಸೃಷ್ಟಿಯಾಗಿರುವ ಇತ್ತೀಚಿನ ದಿನಗಳಲ್ಲಿ ಅಂಕೋಲಾದಲ್ಲಿ ನಡೆದ ಈ ಉರೂಸ್ ಎಲ್ಲರನ್ನೂ ಒಗ್ಗೂಡಿಸುವ ಕಾರ್ಯ ಮಾಡಿರುವುದು ಮಾದರಿಯೇ ಸರಿ.
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more