ಆನೆಕಾಲು ರೋಗದಿಂದ ಉತ್ತರ ಕನ್ನಡ ಮುಕ್ತ, 2017 ರ ನಂತರ ನೂತನ ಪ್ರಕರಣಗಳಿಲ್ಲ..!

ಆನೆಕಾಲು ರೋಗದಿಂದ ಉತ್ತರ ಕನ್ನಡ ಮುಕ್ತ, 2017 ರ ನಂತರ ನೂತನ ಪ್ರಕರಣಗಳಿಲ್ಲ..!

Published : May 04, 2022, 10:57 AM IST

ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಜನರನ್ನು ಕಾಡುತ್ತಿದ್ದ ಆನೆಕಾಲು ರೋಗ ಇದೀಗ ಕೊಂಚ ಕೊಂಚವೇ ನಿರ್ಮೂಲನೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಯ ಬಳಿಕ ಇದೀಗ ಉತ್ತರಕ‌ನ್ನಡ ಜಿಲ್ಲೆಯೂ ಆನೆ ಕಾಲು ರೋಗದಿಂದ ಮುಕ್ತವಾಗಿದೆ. 
 

ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಜನರನ್ನು ಕಾಡುತ್ತಿದ್ದ ಆನೆಕಾಲು ರೋಗ ಇದೀಗ ಕೊಂಚ ಕೊಂಚವೇ ನಿರ್ಮೂಲನೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಯ ಬಳಿಕ ಇದೀಗ ಉತ್ತರಕ‌ನ್ನಡ ಜಿಲ್ಲೆಯೂ ಆನೆ ಕಾಲು ರೋಗದಿಂದ ಮುಕ್ತವಾಗಿದೆ. 

ಜಿಲ್ಲೆಯ 11 ತಾಲೂಕುಗಳ ಪೈಕಿ ಕರಾವಳಿ ಭಾಗದಲ್ಲಿರುವ 5 ತಾಲೂಕುಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ರೋಗ ಇತ್ತೀಚಿನ ವರ್ಷಗಳಲ್ಲಿ ಯಾವುದೇ ನೂತನ ಪ್ರಕರಣದ ರೂಪದಲ್ಲಿ ಕಾಣದ್ದರಿಂದ ಆರೋಗ್ಯ ಇಲಾಖೆ ಉತ್ತರಕನ್ನಡ ಜಿಲ್ಲೆಯನ್ನು ಆನೆ ಕಾಲು ರೋಗ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡಿದೆ.  ಜಿಲ್ಲೆಯ 11 ತಾಲೂಕುಗಳ ಪೈಕಿ ಕರಾವಳಿ ಭಾಗದಲ್ಲಿರುವ 5 ತಾಲೂಕುಗಳಲ್ಲಿ ಅದರಲ್ಲೂ ಗೋಕರ್ಣ ಹಾಗೂ ಭಟ್ಕಳ ಭಾಗದಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ಪ್ರಕರಣ ಇತ್ತೀಚಿನ ವರ್ಷಗಳಲ್ಲಿ ಯಾವುದೇ ನೂತನ ಪ್ರಕರಣದ ರೂಪದಲ್ಲಿ ಕಾಣಿಸಿಲ್ಲ. 2021ರಲ್ಲಿ ನಡೆಸಲಾದ ಸರ್ವೆಯ ಪ್ರಕಾರ ಉತ್ತರಕನ್ನಡ ಜಿಲ್ಲೆಯಲ್ಲಿ 2017ರಲ್ಲಿ ಕಾಣಿಸಿದ್ದ 173 ಪ್ರಕರಣಗಳು ಮಾತ್ರ ದಾಖಲಾಗಿವೆ ಹೊರತು ಯಾವುದೇ ನೂತನ ಪ್ರಕರಣಗಳು ಆ ಬಳಿಕ ವರದಿಯಾಗಿಲ್ಲ. ಇನ್ನು ಜಿಲ್ಲೆಯ ಕಾರವಾರಲ್ಲಿ 4, ಅಂಕೋಲಾದಲ್ಲಿ 6, ಕುಮಟಾದಲ್ಲಿ 54, ಹೊನ್ನಾವರದಲ್ಲಿ 20, ಭಟ್ಕಳದಲ್ಲಿ 89 ಹಳೇಯ ಪ್ರಕರಣಗಳು ಮಾತ್ರ ಇವೆ ಹೊರತು ಯಾವುದೇ ನೂತನ ಪ್ರಕರಣಗಳು ವರದಿಯಾಗಿಲ್ಲ ಅಂತಾರೆ ಅಧಿಕಾರಿಗಳು. 

ಇನ್ನು ಸೊಳ್ಳೆಯಿಂದ ಹರಡುವ ಆನೆಕಾಲು ರೋಗದಲ್ಲಿ ಗಂಭೀರ ರೂಪವಾದ ಹೈಡ್ರೋಸೀಲ್ ಪ್ರಕರಣಗಳೂ ಕಾಣುತ್ತಿದ್ದು, 2004ರಿಂದ ಇಂತಹ 428 ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗಿದೆ. ಪ್ರತೀ ವರ್ಷ ಆನೆಕಾಲು ರೋಗ ಅಥವಾ ಫೈಲೇರಿಯಾ ಕಾಣಿಸುತ್ತಿದ್ದ ಪ್ರದೇಶ ಹಾಗೂ ಕುಟುಂಬಗಳ ರಕ್ತದ ಮಾದರಿಗಳನ್ನು ಪರೀಕ್ಷಿಸುವ ಮೂಲಕ ಸಮೀಕ್ಷೆ ನಡೆಸಲಾಗುತ್ತಿದೆ. ಈ ವರ್ಷ 60,000 ಜನರ‌ನ್ನು ಪರೀಕ್ಷಿಸಿ ಅವರ ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡೋ ಗುರಿಯನ್ನು‌ ಜಿಲ್ಲಾ ಆರೋಗ್ಯ ಇಲಾಖೆ ಹೊಂದಿದೆ. 

ಈ ಹಿನ್ನೆಲೆ ಪ್ರತೀ ತಿಂಗಳು 6,000 ರಕ್ತದ ಮಾದರಿಗಳನ್ನು ಪರೀಕ್ಷಿಸಿ ಹೊಸ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವ ವ್ಯವಸ್ಥೆ ಮಾಡಲಾಗುತ್ತಿದೆ. ಈಗಾಗಲೇ ಕರಾವಳಿ ತೀರ ಪ್ರದೇಶಗಳಲ್ಲಿ ಎಲ್ಲೆಲ್ಲಿ ಈ ಸೋಂಕು ಹಬ್ಬುತ್ತದೆ ಎಂದು ಗುರುತು ಮಾಡಲಾಗಿದ್ದು, ಆ ಪ್ರದೇಶದಲ್ಲಿ ರಾತ್ರಿ ವೇಳೆ ರಕ್ತ ನಡೆಸಿದ ರಕ್ತ ಪರೀಕ್ಷೆಯಲ್ಲಿ ಮಾತ್ರ ಕ್ರಿಮಿ ಕಾಣೋದ್ರಿಂದ ತಪಾಸಣೆಗೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more