Uttara Kannada: ವಿಷಕಾರಿಯಾಗಿ ಬದಲಾದ ಯಲ್ಲಾಪುರದ ಹೊಸಳ್ಳಿ ಕೆರೆ!

Uttara Kannada: ವಿಷಕಾರಿಯಾಗಿ ಬದಲಾದ ಯಲ್ಲಾಪುರದ ಹೊಸಳ್ಳಿ ಕೆರೆ!

Published : Mar 14, 2022, 02:28 PM ISTUpdated : Mar 14, 2022, 02:38 PM IST

*ಖಾಸಗಿ ಸಂಸ್ಥೆ ಬಿಡುವ ವಿಷಕಾರಿ ನೀರಿನಿಂದ ನೀರು ಸಂಪೂರ್ಣ ಕಲುಷಿತ 
*ವಿಷಕಾರಿ ಕೆರೆ ನೀರಿನಿಂದಾಗಿ ಅಂತರ್ಜಲ ಕೂಡಾ ಕಲುಷಿತ ? 
*28 ಎಕರೆ ಪ್ರದೇಶದಲ್ಲಿ ಹಬ್ಬಿಕೊಂಡಿರುವ ಕಿರುವತ್ತಿಯ ಹೊಸಳ್ಳಿ ಕೆರೆ 
*ಕೆಮಿಕಲ್ ಮಿಶ್ರಿತ ನೀರು,  ತ್ಯಾಜ್ಯ ನೀರು ನೇರವಾಗಿ ಹೊಸಳ್ಳಿ ಕೆರೆಗೆ 
 

ಉತ್ತರ ಕನ್ನಡ (ಮಾ. 14): ಹಳ್ಳಿಯ ಜನರಿಗೆ ಹಾಗೂ ಜಾನುವಾರುಗಳಿಗೆ ಬಳಕೆಯಾಗುತ್ತಿದ್ದ ಉತ್ತರಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿಯ ಹೊಸಳ್ಳಿ ಕೆರೆ ಸಂಪೂರ್ಣ ವಿಷಕಾರಿಯಾಗಿ ಮಾರ್ಪಾಡಾಗಿದೆ. ಐಸ್ ಕ್ರೀಂ ತಯಾರಿಕಾ ಕಂಪನಿ ಹಾಗೂ ಹಾಲು ಉತ್ಪನ್ನಗಳ ತಯಾರಿಕಾ ಕಂಪೆನಿಯಿಂದ ಬಿಡುಗಡೆಯಾಗು ಕೆಮಿಕಲ್ ಮಿಶ್ರಿತ ನೀರು ಹಾಗೂ ಜನರು ಬಿಡುವ ತ್ಯಾಜ್ಯ ನೀರು ನೇರವಾಗಿ ಹೊಸಳ್ಳಿ ಕೆರೆಗೆ ಸೇರುವುದರಿಂದ ಕೆರೆ ನೀರು ಸಂಪೂರ್ಣ ವಿಷವಾಗಿದೆ ಎಂಬ ಆರೋಪಗಳು ಸ್ಥಳೀಯರಿಂದ ಕೇಳಿ ಬರುತ್ತಿವೆ. 

ಇದನ್ನೂ ಓದಿSagarmala ಯೋಜನೆಗೆ ವಿರೋಧ, ಶಾಸಕಿ ಹಾಗೂ ಮೀನುಗಾರರ ನಡುವೆ ವಾಕ್ಸಮರ!

ಈ ಕೆರೆಯ ಬಳಿ ಸುಳಿಯಲು ಕೂಡಾ ಸಾಧ್ಯವಾಗದ ರೀತಿಯಲ್ಲಿ ದುರ್ವಾಸನೆ ಬರುತ್ತಿದ್ದು, ಕಿರುವತ್ತಿಯ ಜನರು ಇದರಿಂದ ಸಾಕಷ್ಟು ರೋಸಿಹೋಗಿದ್ದಾರೆ. ಇದರಿಂದಾಗಿ ಸ್ಥಳೀಯರ ಒತ್ತಾಯದ ಮೇರೆಗೆ ಯಲ್ಲಾಪುರ ತಾಲೂಕು ಆರೋಗ್ಯ ಅಧಿಕಾರಿಯ ಮೂಲಕ ನೀರು ಪರೀಕ್ಷಣೆ ಮಾಡಲಾಗಿದ್ದು, ಈ ಕೆರೆ ನೀರಿನ ಪಿಎಚ್ ಪ್ರಮಾಣ ಭಾರೀ ಹೆಚ್ಚಿದ್ದು, ನೀರಿನಲ್ಲಿ ಪ್ರತೀ 100 ಎಂಎಲ್ ನೀರಿಗೆ 1800 ಪ್ರಮಾಣದಷ್ಟು (MPN Count) ಬ್ಯಾಕ್ಟೀರಿಯಾಗಳು ಕೂಡಾ ಪತ್ತೆಯಾಗಿವೆ. ಈ ಕೆರೆಯ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬುದು ಮಾತ್ರವಲ್ಲದೇ, ಇದರಿಂದಾಗಿ ಅಂತರ್ಜಲ ಮಟ್ಟ ಕೂಡಾ ವಿಷವಾಗುತ್ತಿದೆ ಎಂಬ ಅಂಶ ಆತಂಕಕಾರಿಯಾಗಿದೆ‌. ಈ ಕುರಿತ ವರದಿ ಇಲ್ಲಿದೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more