Karwar: ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹಾಡಿಗೆ ಸಿಬ್ಬಂದಿ ಫಿದಾ!

Karwar: ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹಾಡಿಗೆ ಸಿಬ್ಬಂದಿ ಫಿದಾ!

Published : May 25, 2022, 08:56 PM IST

ಅತ್ಯುತ್ತಮ ಅಧಿಕಾರಿ ಎಂದು ಖ್ಯಾತಿ ಪಡೆದಿರುವ ಉತ್ತರಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್, ತನ್ನ ಕೆಲಸದ ಒತ್ತಡದ ನಡುವೆಯೂ ತಾನೊಬ್ಬ ಉತ್ತಮ ಗಾಯಕ ಎಂದು ತೋರ್ಪಡಿಸಿದ್ದಾರೆ. 

ಕಾರವಾರ (ಮೇ.25): ಅತ್ಯುತ್ತಮ ಅಧಿಕಾರಿ ಎಂದು ಖ್ಯಾತಿ ಪಡೆದಿರುವ ಉತ್ತರಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್, ತನ್ನ ಕೆಲಸದ ಒತ್ತಡದ ನಡುವೆಯೂ ತಾನೊಬ್ಬ ಉತ್ತಮ ಗಾಯಕ ಎಂದು ತೋರ್ಪಡಿಸಿದ್ದಾರೆ. ದಿನವಿಡೀ ಕಚೇರಿ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವ ಜಿಲ್ಲಾಧಿಕಾರಿ ಮೊನ್ನೆ ಮಾತ್ರ ಮಧುರಾ...ಪಿಸು ಮಾತಿಗೆ.., ಊರ್ವಶಿ...ಊರ್ವಶಿ...ಹಮ್ಮಾ...ಹಮ್ಮಾ...ಮುಂತಾದ ಚಲನಚಿತ್ರದ ಹಾಡನ್ನು ಸುಶ್ರಾವ್ಯವಾಗಿ ಹಾಡಿ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಯನ್ನು ರಂಜಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ರವಿವಾರ ನಡೆದ ಕಂದಾಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ, ರಾತ್ರಿ ಡಿಲಕ್ಸ್ ಮೈದಾನದಲ್ಲಿ ನಡೆದ  ಮನೋರಂಜನಾ ಕಾರ್ಯಕ್ರಮದಲ್ಲಿ ಹಾಡನ್ನು ಹೇಳಿ ನೃತ್ಯ ಮಾಡುತ್ತಾ ಸಂಭ್ರಮಿಸಿದರು. 

ಸೇತುವೆ ಕಾಮಗಾರಿ ಮುಗಿದು 2 ವರ್ಷವಾದ್ರೂ ಬ್ರಿಡ್ಜ್‌ಗಿಲ್ಲ ಸಂಪರ್ಕ ರಸ್ತೆ..!

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಡಾ ಡಿಸಿ ಹಾಡಿಗೆ ಶಿಳ್ಳೆ ಹಾಕಿ, ಚಪ್ಪಾಳೆ ತಟ್ಟಿ ಭರ್ಜರಿ ಸ್ಟೆಪ್ ಹಾಕಿ ಕುಣಿದಿದ್ದಾರೆ. ವರ್ಷವಿಡೀ ಕಚೇರಿ, ಅಭಿವೃದ್ಧಿ ಕಾರ್ಯ, ಸಾರ್ವಜನಿಕರ ಸಮಸ್ಯೆ ಪರಿಹಾರದ ಬಗ್ಗೆಯೇ ಕೆಲಸ ಮಾಡುತ್ತಿದ್ದ ಜಿಲ್ಲಾಧಿಕಾರಿ, ಮೊನ್ನೆಯಂತೂ ತಮ್ಮ ಸಹೋದ್ಯೋಗಿಗಳ ಜತೆ ದಿನವಿಡೀ ಕಾಲಕಳೆದರಿದ್ದಾರೆ. ದಾಂಡೇಲಿಯ ಡಿಎಫ್ಎ ಮೈದಾನದಲ್ಲಿ ರೆವಿನ್ಯೂ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ, ಓಟದ ಸ್ಪರ್ಧೆಗಳನ್ನೂ ಆಯೋಜಿಸಲಾಗಿತ್ತು. ಕಾರವಾರ ಉಪವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ, ಭಟ್ಕಳ ಉಪವಿಭಾಗಾಧಿಕಾರಿ ಮಮತಾದೇವಿ ಸೇರಿದಂತೆ ಇತರ ಅಧಿಕಾರಿ ವರ್ಗ ಭಾಗಿಯಾಗಿದ್ದರು. ಬಳಿಕ ಸಂಜೆ ವೇಳೆ ಡಿಲಕ್ಸ್ ಮೈದಾನದಲ್ಲಿ ನಡೆದ ಮನೋರಂಜನಾ ಕಾರ್ಯಕ್ರಮದಲ್ಲಿ ಭರ್ಜರಿ ಹಾಡು ಹಾಡಿ, ಸ್ಟೆಪ್ ಹಾಕಿ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜತೆ ಸಂಭ್ರಮಿಸಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more