Karwar: ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹಾಡಿಗೆ ಸಿಬ್ಬಂದಿ ಫಿದಾ!

Karwar: ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹಾಡಿಗೆ ಸಿಬ್ಬಂದಿ ಫಿದಾ!

Published : May 25, 2022, 08:56 PM IST

ಅತ್ಯುತ್ತಮ ಅಧಿಕಾರಿ ಎಂದು ಖ್ಯಾತಿ ಪಡೆದಿರುವ ಉತ್ತರಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್, ತನ್ನ ಕೆಲಸದ ಒತ್ತಡದ ನಡುವೆಯೂ ತಾನೊಬ್ಬ ಉತ್ತಮ ಗಾಯಕ ಎಂದು ತೋರ್ಪಡಿಸಿದ್ದಾರೆ. 

ಕಾರವಾರ (ಮೇ.25): ಅತ್ಯುತ್ತಮ ಅಧಿಕಾರಿ ಎಂದು ಖ್ಯಾತಿ ಪಡೆದಿರುವ ಉತ್ತರಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್, ತನ್ನ ಕೆಲಸದ ಒತ್ತಡದ ನಡುವೆಯೂ ತಾನೊಬ್ಬ ಉತ್ತಮ ಗಾಯಕ ಎಂದು ತೋರ್ಪಡಿಸಿದ್ದಾರೆ. ದಿನವಿಡೀ ಕಚೇರಿ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವ ಜಿಲ್ಲಾಧಿಕಾರಿ ಮೊನ್ನೆ ಮಾತ್ರ ಮಧುರಾ...ಪಿಸು ಮಾತಿಗೆ.., ಊರ್ವಶಿ...ಊರ್ವಶಿ...ಹಮ್ಮಾ...ಹಮ್ಮಾ...ಮುಂತಾದ ಚಲನಚಿತ್ರದ ಹಾಡನ್ನು ಸುಶ್ರಾವ್ಯವಾಗಿ ಹಾಡಿ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಯನ್ನು ರಂಜಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ರವಿವಾರ ನಡೆದ ಕಂದಾಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ, ರಾತ್ರಿ ಡಿಲಕ್ಸ್ ಮೈದಾನದಲ್ಲಿ ನಡೆದ  ಮನೋರಂಜನಾ ಕಾರ್ಯಕ್ರಮದಲ್ಲಿ ಹಾಡನ್ನು ಹೇಳಿ ನೃತ್ಯ ಮಾಡುತ್ತಾ ಸಂಭ್ರಮಿಸಿದರು. 

ಸೇತುವೆ ಕಾಮಗಾರಿ ಮುಗಿದು 2 ವರ್ಷವಾದ್ರೂ ಬ್ರಿಡ್ಜ್‌ಗಿಲ್ಲ ಸಂಪರ್ಕ ರಸ್ತೆ..!

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಡಾ ಡಿಸಿ ಹಾಡಿಗೆ ಶಿಳ್ಳೆ ಹಾಕಿ, ಚಪ್ಪಾಳೆ ತಟ್ಟಿ ಭರ್ಜರಿ ಸ್ಟೆಪ್ ಹಾಕಿ ಕುಣಿದಿದ್ದಾರೆ. ವರ್ಷವಿಡೀ ಕಚೇರಿ, ಅಭಿವೃದ್ಧಿ ಕಾರ್ಯ, ಸಾರ್ವಜನಿಕರ ಸಮಸ್ಯೆ ಪರಿಹಾರದ ಬಗ್ಗೆಯೇ ಕೆಲಸ ಮಾಡುತ್ತಿದ್ದ ಜಿಲ್ಲಾಧಿಕಾರಿ, ಮೊನ್ನೆಯಂತೂ ತಮ್ಮ ಸಹೋದ್ಯೋಗಿಗಳ ಜತೆ ದಿನವಿಡೀ ಕಾಲಕಳೆದರಿದ್ದಾರೆ. ದಾಂಡೇಲಿಯ ಡಿಎಫ್ಎ ಮೈದಾನದಲ್ಲಿ ರೆವಿನ್ಯೂ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ, ಓಟದ ಸ್ಪರ್ಧೆಗಳನ್ನೂ ಆಯೋಜಿಸಲಾಗಿತ್ತು. ಕಾರವಾರ ಉಪವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ, ಭಟ್ಕಳ ಉಪವಿಭಾಗಾಧಿಕಾರಿ ಮಮತಾದೇವಿ ಸೇರಿದಂತೆ ಇತರ ಅಧಿಕಾರಿ ವರ್ಗ ಭಾಗಿಯಾಗಿದ್ದರು. ಬಳಿಕ ಸಂಜೆ ವೇಳೆ ಡಿಲಕ್ಸ್ ಮೈದಾನದಲ್ಲಿ ನಡೆದ ಮನೋರಂಜನಾ ಕಾರ್ಯಕ್ರಮದಲ್ಲಿ ಭರ್ಜರಿ ಹಾಡು ಹಾಡಿ, ಸ್ಟೆಪ್ ಹಾಕಿ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜತೆ ಸಂಭ್ರಮಿಸಿದ್ದಾರೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more