Karwar: ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹಾಡಿಗೆ ಸಿಬ್ಬಂದಿ ಫಿದಾ!

Karwar: ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹಾಡಿಗೆ ಸಿಬ್ಬಂದಿ ಫಿದಾ!

Published : May 25, 2022, 08:56 PM IST

ಅತ್ಯುತ್ತಮ ಅಧಿಕಾರಿ ಎಂದು ಖ್ಯಾತಿ ಪಡೆದಿರುವ ಉತ್ತರಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್, ತನ್ನ ಕೆಲಸದ ಒತ್ತಡದ ನಡುವೆಯೂ ತಾನೊಬ್ಬ ಉತ್ತಮ ಗಾಯಕ ಎಂದು ತೋರ್ಪಡಿಸಿದ್ದಾರೆ. 

ಕಾರವಾರ (ಮೇ.25): ಅತ್ಯುತ್ತಮ ಅಧಿಕಾರಿ ಎಂದು ಖ್ಯಾತಿ ಪಡೆದಿರುವ ಉತ್ತರಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್, ತನ್ನ ಕೆಲಸದ ಒತ್ತಡದ ನಡುವೆಯೂ ತಾನೊಬ್ಬ ಉತ್ತಮ ಗಾಯಕ ಎಂದು ತೋರ್ಪಡಿಸಿದ್ದಾರೆ. ದಿನವಿಡೀ ಕಚೇರಿ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವ ಜಿಲ್ಲಾಧಿಕಾರಿ ಮೊನ್ನೆ ಮಾತ್ರ ಮಧುರಾ...ಪಿಸು ಮಾತಿಗೆ.., ಊರ್ವಶಿ...ಊರ್ವಶಿ...ಹಮ್ಮಾ...ಹಮ್ಮಾ...ಮುಂತಾದ ಚಲನಚಿತ್ರದ ಹಾಡನ್ನು ಸುಶ್ರಾವ್ಯವಾಗಿ ಹಾಡಿ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಯನ್ನು ರಂಜಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ರವಿವಾರ ನಡೆದ ಕಂದಾಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ, ರಾತ್ರಿ ಡಿಲಕ್ಸ್ ಮೈದಾನದಲ್ಲಿ ನಡೆದ  ಮನೋರಂಜನಾ ಕಾರ್ಯಕ್ರಮದಲ್ಲಿ ಹಾಡನ್ನು ಹೇಳಿ ನೃತ್ಯ ಮಾಡುತ್ತಾ ಸಂಭ್ರಮಿಸಿದರು. 

ಸೇತುವೆ ಕಾಮಗಾರಿ ಮುಗಿದು 2 ವರ್ಷವಾದ್ರೂ ಬ್ರಿಡ್ಜ್‌ಗಿಲ್ಲ ಸಂಪರ್ಕ ರಸ್ತೆ..!

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಡಾ ಡಿಸಿ ಹಾಡಿಗೆ ಶಿಳ್ಳೆ ಹಾಕಿ, ಚಪ್ಪಾಳೆ ತಟ್ಟಿ ಭರ್ಜರಿ ಸ್ಟೆಪ್ ಹಾಕಿ ಕುಣಿದಿದ್ದಾರೆ. ವರ್ಷವಿಡೀ ಕಚೇರಿ, ಅಭಿವೃದ್ಧಿ ಕಾರ್ಯ, ಸಾರ್ವಜನಿಕರ ಸಮಸ್ಯೆ ಪರಿಹಾರದ ಬಗ್ಗೆಯೇ ಕೆಲಸ ಮಾಡುತ್ತಿದ್ದ ಜಿಲ್ಲಾಧಿಕಾರಿ, ಮೊನ್ನೆಯಂತೂ ತಮ್ಮ ಸಹೋದ್ಯೋಗಿಗಳ ಜತೆ ದಿನವಿಡೀ ಕಾಲಕಳೆದರಿದ್ದಾರೆ. ದಾಂಡೇಲಿಯ ಡಿಎಫ್ಎ ಮೈದಾನದಲ್ಲಿ ರೆವಿನ್ಯೂ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ, ಓಟದ ಸ್ಪರ್ಧೆಗಳನ್ನೂ ಆಯೋಜಿಸಲಾಗಿತ್ತು. ಕಾರವಾರ ಉಪವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ, ಭಟ್ಕಳ ಉಪವಿಭಾಗಾಧಿಕಾರಿ ಮಮತಾದೇವಿ ಸೇರಿದಂತೆ ಇತರ ಅಧಿಕಾರಿ ವರ್ಗ ಭಾಗಿಯಾಗಿದ್ದರು. ಬಳಿಕ ಸಂಜೆ ವೇಳೆ ಡಿಲಕ್ಸ್ ಮೈದಾನದಲ್ಲಿ ನಡೆದ ಮನೋರಂಜನಾ ಕಾರ್ಯಕ್ರಮದಲ್ಲಿ ಭರ್ಜರಿ ಹಾಡು ಹಾಡಿ, ಸ್ಟೆಪ್ ಹಾಕಿ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜತೆ ಸಂಭ್ರಮಿಸಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more