ಸಾರ್ವಜನಿಕ ಕುಂದುಕೊರತೆ ಪರಿಹರಿಸಲು ಉತ್ತರಕನ್ನಡ ಡಿಸಿಯಿಂದ ಹೊಸ ಜನಪರ ಕಾರ್ಯಕ್ರಮ

ಸಾರ್ವಜನಿಕ ಕುಂದುಕೊರತೆ ಪರಿಹರಿಸಲು ಉತ್ತರಕನ್ನಡ ಡಿಸಿಯಿಂದ ಹೊಸ ಜನಪರ ಕಾರ್ಯಕ್ರಮ

Published : Apr 29, 2022, 02:59 PM ISTUpdated : Apr 29, 2022, 03:00 PM IST

- ಸಾರ್ವಜನಿಕರ ಕಂದಾಯ, ಇತರ ಸಂಬಂಧಿತ ಕುಂದು ಕೊರತೆಗೆ ಪರಿಹರಿಸಲು ಪ್ರಯತ್ನ

- ಹೋಬಳಿ ಮಟ್ಟದಲ್ಲೂ ಜನರ ಸಮಸ್ಯೆಗಳನ್ನು ಪರಿಹರಿಸಲು ಹೊಸ ಯೋಜನೆ!

- ಉತ್ತರಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್‌ರಿಂದ ಹೊಸ ಜನಪರ ಕಾರ್ಯಕ್ರಮ

ಕಾರವಾರ (ಏ. 29): ಸಾರ್ವಜನಿಕರ ಕಂದಾಯ ಹಾಗೂ ಇತರ ಸಂಬಂಧಿತ ಕುಂದು ಕೊರತೆಗಳ‌ನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರದ ಸೂಚನೆಯಂತೆ ರಾಜ್ಯದ ಪ್ರತೀ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯವನ್ನು (Gram Vastavya) ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅನ್ನೋ ಈ ಕಾರ್ಯಕ್ರಮದ ಮೂಲಕ ಜನರ ಸಮಸ್ಯೆಗಳ‌ನ್ನು ಪರಿಹರಿಸಲಾಗುತ್ತದೆ. ಆದರೆ, ಇದೀಗ ರಾಜ್ಯದಲ್ಲೇ ವಿಶೇಷವೆಂಬಂತೆ ಉತ್ತರ‌ಕನ್ನಡ (Uttara Kannada) ಜಿಲ್ಲಾಧಿಕಾರಿ ಮತ್ತೊಂದು ಮಹತ್ತರ ಹೆಜ್ಜೆಯಿರಿಸಿದ್ದಾರೆ. ಈ ಮೂಲಕ ಜಿಲ್ಲೆಯ ಪ್ರತೀ ಮೂಲೆ ಮೂಲೆಯ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಯೋಜನೆ ಕೈಗೊಂಡಿದ್ದಾರೆ. 

 ರಾಜ್ಯದ ಪ್ರತೀ ಜಿಲ್ಲೆಗಳ ಜಿಲ್ಲೆಗಳ‌ ಜಿಲ್ಲಾಧಿಕಾರಿ ಮೂರನೇ ಶನಿವಾರ (3rd Saturday) ತನ್ನ ಜತೆ ಇತರ ಇಲಾಖೆಗಳ ಅಧಿಕಾರಿಗಳನ್ನು ಕೂಡಿಕೊಂಡು ಜನರ‌ ಸಂಕಷ್ಟಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ವಿಭಿನ್ನ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಆದರೆ, ರಾಜ್ಯದಲ್ಲೇ ವಿಶೇಷವೆಂಬಂತೆ ಪ್ರಥಮ ಬಾರಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ( Mullai Muhilan)ಮಾತ್ರ ಇನ್ನೂ ಒಂದು ಹೆಜ್ಜೆ ಮುಂದಿರಿಸಿ ಹೋಬಳಿ ಮಟ್ಟದಲ್ಲೂ ಜನರ ಸಮಸ್ಯೆಗಳನ್ನು ಪರಿಹರಿಸಲು ಯೋಜನೆ ಕೈಗೊಂಡಿದ್ದಾರೆ. 

ಪ್ರಾಥಮಿಕ ಹಂತವಾಗಿ ನಾಲ್ಕು ವಾರಗಳ ಕಾಲ ಪ್ರತೀ ಶುಕ್ರವಾರ ಈ ಯೋಜನೆಯನ್ನು ಕೈಗೊಳ್ಳಲಾಗುತ್ತಿದ್ದು, ಫಲಿತಾಂಶವನ್ನು ಕಂಡು ಬಳಿಕ ಈ ಕಾರ್ಯಕ್ರಮ ಮುಂದುವರಿಸಲಾಗುತ್ತದೆ. ಕಾರ್ಯಕ್ರಮದ ಆರಂಭದ ಭಾಗವಾಗಿ ಅಂಕೋಲಾದ ಕೊಡ್ಕಣಿಯಲ್ಲಿ ಇದೇ 29ರಂದು ಜಿಲ್ಲಾಧಿಕಾರಿ ಹೋಬಳಿ ಮಟ್ಟದ ಕಾರ್ಯಕ್ರ‌ಮ ನಡೆಸಲಿದ್ದಾರೆ. ಉತ್ತರಕನ್ನಡ ಜಿಲ್ಲೆ ಶೇ.75ರಷ್ಟು ಕಾಡು ಭಾಗದಿಂದಲೇ ಆವೃತವಾಗಿರುವುದರಿಂದ ಜನರಿಗೆ ರಸ್ತೆ, ವಿದ್ಯುತ್, ನೆರೆ ಹಾಗೂ ವಿವಿಧ ಸೌಲಭ್ಯಗಳು ದೊರೆಯದ ಸಾಕಷ್ಟು ಸಮಸ್ಯೆಗಳಿವೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಒಂದು ಹಂತದ ಸಮಸ್ಯೆಗಳಿಗೆ ಪರಿಹಾರ ದೊರಕಿದರೂ ಎಲ್ಲಾ ವಿಚಾರಗಳನ್ನು ತಲುಪೋದು ಅಸಾಧ್ಯ. ಈ ಕಾರಣದಿಂದ ಹೋಬಳಿ ಮಟ್ಟದಲ್ಲೂ ಕಾರ್ಯಕ್ರಮ ನಡೆಸಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ನಿರ್ಧರಿಸಿದ್ದಾರೆ. 

ಜಿಲ್ಲೆಯ ಪ್ರತೀ ಹೋಬಳಿಯಲ್ಲಿ ಮುಂಬರುವ ಮಳೆಗಾಲಕ್ಕೆ ಬೇಕಾದ ಸಿದ್ಧತೆ ಹಾಗೂ ಜನರಿಗೆ ಸಮಸ್ಯೆ ಎದುರಾಗದಂತೆ ವ್ಯವಸ್ಥೆ, ಪೆನ್ಶನ್, ಜಿಲ್ಲೆಯಲ್ಲಿ ಸ್ಥಳೀಯವಾಗಿ ಹೆಚ್ಚಿರುವ ಗನ್ ಲೈಸೆನ್ಸ್ ಕುರಿತ ವಿಚಾರ, ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತಹ ವ್ಯವಸ್ಥೆ ಕೂಡಾ ಹೋಬಳಿ ಮಟ್ಟದ ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಹಾಗೂ ಪ್ರತೀ ತಾಲೂಕುಗಳ ವಿವಿಧ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು, ಶಿರಸ್ತೇದಾರರು ಕೂಡಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಜಿಲ್ಲಾಧಿಕಾರಿಗಳ ಈ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜನರ ಸಮಸ್ಯೆಗಳಿಗೆ ಪೂರ್ಣ ರೀತಿಯಲ್ಲಿ ಪರಿಹಾರ ದೊರೆಯಲು ಇದರಿಂದ ಸಾಧ್ಯವಾಗುತ್ತದೆ ಅನ್ನೋ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more