ಉತ್ತರ ಕನ್ನಡ; ಸಿದ್ದಾಪುರದ ಹಾಲಬ್ಬವೇ ಒಂದು ವಿಶೇಷ!

ಉತ್ತರ ಕನ್ನಡ; ಸಿದ್ದಾಪುರದ ಹಾಲಬ್ಬವೇ ಒಂದು ವಿಶೇಷ!

Published : Jan 18, 2021, 10:49 PM ISTUpdated : Jan 18, 2021, 10:52 PM IST

ಸುಗ್ಗಿ ಹಬ್ಬ ಈ ಹಾಲಬ್ಬ/ ಉತ್ತರ ಕನ್ನಡ ಜಿಲ್ಲೆಯ ವಿಶಿಷ್ಟ ಸಂಪ್ರದಾಯ/ ಹುಲಿದೇವರ ಪೂಜೆ/ ನೃತ್ಯ ಸಮಾಗಮ/ ಕೆಂಡ ಹಾಯುವುದು ಇದೆ/ ಹಾಲಬ್ಬ ನೋಡುವುದಕ್ಕೆ ಸೇರಿದ್ದ ಜನಸ್ತೋಮ

ಕಾರವಾರ(ಜ.  18)  ರೈತರು ಬೆಳೆದ ಹೊಸ ಬೆಳೆಗಳನ್ನು ತಾವು ಬಳಸುವ ಮೊದಲು ದೇವರಿಗೆ ನೈವೇದ್ಯ ಮಾಡುವ ನಿಟ್ಟಿನಲ್ಲಿ ಆಚರಿಸುವ ವಿಶಿಷ್ಟ ರೀತಿಯ ಹಾಲಬ್ಬವೊಂದು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕಟ್ಟೆಕೈ ಗ್ರಾಮದಲ್ಲಿ ನಡೆಯಿತು. ಹೊಸಕ್ಕಿ ಹಬ್ಬ ಇಲ್ಲವೇ ಹಾಲಬ್ಬ ಎಂದೇ ಕರೆಸಿಕೊಳ್ಳುವ ಈ ಹಬ್ಬವು ಸಿದ್ಧಾಪುರದ ಕಟ್ಟೆಕೈ ಗ್ರಾಮದಲ್ಲಿ ಆಚರಿಸುವ ವಿಶಿಷ್ಟ ಹಬ್ಬ. ರೈತಾಪಿ ವರ್ಗದವರೇ ಹೆಚ್ಚಾಗಿ ಇರುವ ಗ್ರಾಮದಲ್ಲಿ ತಾವು ಬೆಳೆದ ಬೆಳೆಗಳನ್ನು ಮೊದಲು ದೇವರಿಗೆ ನೈವೇದ್ಯ ಮಾಡುವ ನಿಟ್ಟಿನಲ್ಲಿ ತಲೆ ತಲಾಂತರಗಳಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ.

ಉಡುಪಿಯಲ್ಲಿ ಮಕರ ಸಂಕ್ರಾಂತಿ ವೈಭವ

ಅದರಂತೆ ಈ ಭಾರಿಯೂ ಮೂರು ದಿನಗಳ ಕಾಲ ಹಬ್ಬ ಅದ್ದೂರಿಯಾಗಿ ನಡೆಯಿತು. ಮೊದಲ ದಿನ ಮಹಾಸತಿ ದೇವಾಲಯದಿಂದ ದೇವರನ್ನು ಹುಲಿದೇವರ ಮನೆಗೆ ತಂದು ಪೂಜೆ ಸಲ್ಲಿಸಿದ ಗ್ರಾಮಸ್ಥರು, ತಾವು ಬೆಳೆದ ಹೊಸ ಬೆಳೆಗಳನ್ನು ದೇವರಿಗೆ ನೈವೇದ್ಯ ಮಾಡಿದ್ರು. ಎರಡನೇ ದಿನ ಬ್ರಹ್ಮ‌ದೇವರ ಕಾನಿನಲ್ಲಿ ಕೆಂಡದ ಸೇವೆಗೆ ಸಿದ್ಧತೆ ಮಾಡಿಕೊಂಡ ಗ್ರಾಮಸ್ಥರು ಸಂಜೆ ಹೊತ್ತಿಗೆ ದೇವರನ್ನು ಕಾನಿಗೆ ಒಯ್ದು ಜಾಗರಣ ನಡೆಸಿದ್ರು. ಮೂರನೇ ದಿನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಗ್ರಾಮಸ್ಥರು ಬಳಿಕ ದೇವರ ಪಾಲಿಕೆಯನ್ನು ಹೊತ್ತು ಸಿದ್ದಗೊಂಡಿದ್ದ ಕೆಂಡದ ರಾಶಿಯ ಸುತ್ತ ಸುತ್ತುವರಿದು ಕೆಂಡ ಹಾಯುವ ಮೂಲಕ ಭಕ್ತಿ ಪರಾಕಾಷ್ಠೆ ಮೆರೆದರು. ಇನ್ನು ಕೆಂಡಹಾಯುವುದನ್ನು ಮತ್ತು ವಿಶಿಷ್ಟ ಹಾಲಬ್ಬ ನೋಡುವುದಕ್ಕಾಗಿಯೇ ಗ್ರಾಮಸ್ಥರಲ್ಲದೇ ಅಕ್ಕಪಕ್ಕದ  ಊರಿನಿಂದ ನೂರಾರು ಮಂದಿ ಆಗಮಿಸಿದ್ದರು. ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಹಬ್ಬ ರೈತ ಮಕ್ಕಳ ಮೊಗದಲ್ಲಿ ಮಂದಹಾಸ ಮೂಡಿಸಿತ್ತು.

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?