ಉತ್ತರ ಕನ್ನಡ; ಸಿದ್ದಾಪುರದ ಹಾಲಬ್ಬವೇ ಒಂದು ವಿಶೇಷ!

ಉತ್ತರ ಕನ್ನಡ; ಸಿದ್ದಾಪುರದ ಹಾಲಬ್ಬವೇ ಒಂದು ವಿಶೇಷ!

Published : Jan 18, 2021, 10:49 PM ISTUpdated : Jan 18, 2021, 10:52 PM IST

ಸುಗ್ಗಿ ಹಬ್ಬ ಈ ಹಾಲಬ್ಬ/ ಉತ್ತರ ಕನ್ನಡ ಜಿಲ್ಲೆಯ ವಿಶಿಷ್ಟ ಸಂಪ್ರದಾಯ/ ಹುಲಿದೇವರ ಪೂಜೆ/ ನೃತ್ಯ ಸಮಾಗಮ/ ಕೆಂಡ ಹಾಯುವುದು ಇದೆ/ ಹಾಲಬ್ಬ ನೋಡುವುದಕ್ಕೆ ಸೇರಿದ್ದ ಜನಸ್ತೋಮ

ಕಾರವಾರ(ಜ.  18)  ರೈತರು ಬೆಳೆದ ಹೊಸ ಬೆಳೆಗಳನ್ನು ತಾವು ಬಳಸುವ ಮೊದಲು ದೇವರಿಗೆ ನೈವೇದ್ಯ ಮಾಡುವ ನಿಟ್ಟಿನಲ್ಲಿ ಆಚರಿಸುವ ವಿಶಿಷ್ಟ ರೀತಿಯ ಹಾಲಬ್ಬವೊಂದು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕಟ್ಟೆಕೈ ಗ್ರಾಮದಲ್ಲಿ ನಡೆಯಿತು. ಹೊಸಕ್ಕಿ ಹಬ್ಬ ಇಲ್ಲವೇ ಹಾಲಬ್ಬ ಎಂದೇ ಕರೆಸಿಕೊಳ್ಳುವ ಈ ಹಬ್ಬವು ಸಿದ್ಧಾಪುರದ ಕಟ್ಟೆಕೈ ಗ್ರಾಮದಲ್ಲಿ ಆಚರಿಸುವ ವಿಶಿಷ್ಟ ಹಬ್ಬ. ರೈತಾಪಿ ವರ್ಗದವರೇ ಹೆಚ್ಚಾಗಿ ಇರುವ ಗ್ರಾಮದಲ್ಲಿ ತಾವು ಬೆಳೆದ ಬೆಳೆಗಳನ್ನು ಮೊದಲು ದೇವರಿಗೆ ನೈವೇದ್ಯ ಮಾಡುವ ನಿಟ್ಟಿನಲ್ಲಿ ತಲೆ ತಲಾಂತರಗಳಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ.

ಉಡುಪಿಯಲ್ಲಿ ಮಕರ ಸಂಕ್ರಾಂತಿ ವೈಭವ

ಅದರಂತೆ ಈ ಭಾರಿಯೂ ಮೂರು ದಿನಗಳ ಕಾಲ ಹಬ್ಬ ಅದ್ದೂರಿಯಾಗಿ ನಡೆಯಿತು. ಮೊದಲ ದಿನ ಮಹಾಸತಿ ದೇವಾಲಯದಿಂದ ದೇವರನ್ನು ಹುಲಿದೇವರ ಮನೆಗೆ ತಂದು ಪೂಜೆ ಸಲ್ಲಿಸಿದ ಗ್ರಾಮಸ್ಥರು, ತಾವು ಬೆಳೆದ ಹೊಸ ಬೆಳೆಗಳನ್ನು ದೇವರಿಗೆ ನೈವೇದ್ಯ ಮಾಡಿದ್ರು. ಎರಡನೇ ದಿನ ಬ್ರಹ್ಮ‌ದೇವರ ಕಾನಿನಲ್ಲಿ ಕೆಂಡದ ಸೇವೆಗೆ ಸಿದ್ಧತೆ ಮಾಡಿಕೊಂಡ ಗ್ರಾಮಸ್ಥರು ಸಂಜೆ ಹೊತ್ತಿಗೆ ದೇವರನ್ನು ಕಾನಿಗೆ ಒಯ್ದು ಜಾಗರಣ ನಡೆಸಿದ್ರು. ಮೂರನೇ ದಿನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಗ್ರಾಮಸ್ಥರು ಬಳಿಕ ದೇವರ ಪಾಲಿಕೆಯನ್ನು ಹೊತ್ತು ಸಿದ್ದಗೊಂಡಿದ್ದ ಕೆಂಡದ ರಾಶಿಯ ಸುತ್ತ ಸುತ್ತುವರಿದು ಕೆಂಡ ಹಾಯುವ ಮೂಲಕ ಭಕ್ತಿ ಪರಾಕಾಷ್ಠೆ ಮೆರೆದರು. ಇನ್ನು ಕೆಂಡಹಾಯುವುದನ್ನು ಮತ್ತು ವಿಶಿಷ್ಟ ಹಾಲಬ್ಬ ನೋಡುವುದಕ್ಕಾಗಿಯೇ ಗ್ರಾಮಸ್ಥರಲ್ಲದೇ ಅಕ್ಕಪಕ್ಕದ  ಊರಿನಿಂದ ನೂರಾರು ಮಂದಿ ಆಗಮಿಸಿದ್ದರು. ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಹಬ್ಬ ರೈತ ಮಕ್ಕಳ ಮೊಗದಲ್ಲಿ ಮಂದಹಾಸ ಮೂಡಿಸಿತ್ತು.

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!