ಉತ್ತರ ಕನ್ನಡ; ಸಿದ್ದಾಪುರದ ಹಾಲಬ್ಬವೇ ಒಂದು ವಿಶೇಷ!

ಉತ್ತರ ಕನ್ನಡ; ಸಿದ್ದಾಪುರದ ಹಾಲಬ್ಬವೇ ಒಂದು ವಿಶೇಷ!

Published : Jan 18, 2021, 10:49 PM ISTUpdated : Jan 18, 2021, 10:52 PM IST

ಸುಗ್ಗಿ ಹಬ್ಬ ಈ ಹಾಲಬ್ಬ/ ಉತ್ತರ ಕನ್ನಡ ಜಿಲ್ಲೆಯ ವಿಶಿಷ್ಟ ಸಂಪ್ರದಾಯ/ ಹುಲಿದೇವರ ಪೂಜೆ/ ನೃತ್ಯ ಸಮಾಗಮ/ ಕೆಂಡ ಹಾಯುವುದು ಇದೆ/ ಹಾಲಬ್ಬ ನೋಡುವುದಕ್ಕೆ ಸೇರಿದ್ದ ಜನಸ್ತೋಮ

ಕಾರವಾರ(ಜ.  18)  ರೈತರು ಬೆಳೆದ ಹೊಸ ಬೆಳೆಗಳನ್ನು ತಾವು ಬಳಸುವ ಮೊದಲು ದೇವರಿಗೆ ನೈವೇದ್ಯ ಮಾಡುವ ನಿಟ್ಟಿನಲ್ಲಿ ಆಚರಿಸುವ ವಿಶಿಷ್ಟ ರೀತಿಯ ಹಾಲಬ್ಬವೊಂದು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕಟ್ಟೆಕೈ ಗ್ರಾಮದಲ್ಲಿ ನಡೆಯಿತು. ಹೊಸಕ್ಕಿ ಹಬ್ಬ ಇಲ್ಲವೇ ಹಾಲಬ್ಬ ಎಂದೇ ಕರೆಸಿಕೊಳ್ಳುವ ಈ ಹಬ್ಬವು ಸಿದ್ಧಾಪುರದ ಕಟ್ಟೆಕೈ ಗ್ರಾಮದಲ್ಲಿ ಆಚರಿಸುವ ವಿಶಿಷ್ಟ ಹಬ್ಬ. ರೈತಾಪಿ ವರ್ಗದವರೇ ಹೆಚ್ಚಾಗಿ ಇರುವ ಗ್ರಾಮದಲ್ಲಿ ತಾವು ಬೆಳೆದ ಬೆಳೆಗಳನ್ನು ಮೊದಲು ದೇವರಿಗೆ ನೈವೇದ್ಯ ಮಾಡುವ ನಿಟ್ಟಿನಲ್ಲಿ ತಲೆ ತಲಾಂತರಗಳಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ.

ಉಡುಪಿಯಲ್ಲಿ ಮಕರ ಸಂಕ್ರಾಂತಿ ವೈಭವ

ಅದರಂತೆ ಈ ಭಾರಿಯೂ ಮೂರು ದಿನಗಳ ಕಾಲ ಹಬ್ಬ ಅದ್ದೂರಿಯಾಗಿ ನಡೆಯಿತು. ಮೊದಲ ದಿನ ಮಹಾಸತಿ ದೇವಾಲಯದಿಂದ ದೇವರನ್ನು ಹುಲಿದೇವರ ಮನೆಗೆ ತಂದು ಪೂಜೆ ಸಲ್ಲಿಸಿದ ಗ್ರಾಮಸ್ಥರು, ತಾವು ಬೆಳೆದ ಹೊಸ ಬೆಳೆಗಳನ್ನು ದೇವರಿಗೆ ನೈವೇದ್ಯ ಮಾಡಿದ್ರು. ಎರಡನೇ ದಿನ ಬ್ರಹ್ಮ‌ದೇವರ ಕಾನಿನಲ್ಲಿ ಕೆಂಡದ ಸೇವೆಗೆ ಸಿದ್ಧತೆ ಮಾಡಿಕೊಂಡ ಗ್ರಾಮಸ್ಥರು ಸಂಜೆ ಹೊತ್ತಿಗೆ ದೇವರನ್ನು ಕಾನಿಗೆ ಒಯ್ದು ಜಾಗರಣ ನಡೆಸಿದ್ರು. ಮೂರನೇ ದಿನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಗ್ರಾಮಸ್ಥರು ಬಳಿಕ ದೇವರ ಪಾಲಿಕೆಯನ್ನು ಹೊತ್ತು ಸಿದ್ದಗೊಂಡಿದ್ದ ಕೆಂಡದ ರಾಶಿಯ ಸುತ್ತ ಸುತ್ತುವರಿದು ಕೆಂಡ ಹಾಯುವ ಮೂಲಕ ಭಕ್ತಿ ಪರಾಕಾಷ್ಠೆ ಮೆರೆದರು. ಇನ್ನು ಕೆಂಡಹಾಯುವುದನ್ನು ಮತ್ತು ವಿಶಿಷ್ಟ ಹಾಲಬ್ಬ ನೋಡುವುದಕ್ಕಾಗಿಯೇ ಗ್ರಾಮಸ್ಥರಲ್ಲದೇ ಅಕ್ಕಪಕ್ಕದ  ಊರಿನಿಂದ ನೂರಾರು ಮಂದಿ ಆಗಮಿಸಿದ್ದರು. ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಹಬ್ಬ ರೈತ ಮಕ್ಕಳ ಮೊಗದಲ್ಲಿ ಮಂದಹಾಸ ಮೂಡಿಸಿತ್ತು.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!