ಉತ್ತರ ಕನ್ನಡ; ಸಿದ್ದಾಪುರದ ಹಾಲಬ್ಬವೇ ಒಂದು ವಿಶೇಷ!

ಉತ್ತರ ಕನ್ನಡ; ಸಿದ್ದಾಪುರದ ಹಾಲಬ್ಬವೇ ಒಂದು ವಿಶೇಷ!

Published : Jan 18, 2021, 10:49 PM ISTUpdated : Jan 18, 2021, 10:52 PM IST

ಸುಗ್ಗಿ ಹಬ್ಬ ಈ ಹಾಲಬ್ಬ/ ಉತ್ತರ ಕನ್ನಡ ಜಿಲ್ಲೆಯ ವಿಶಿಷ್ಟ ಸಂಪ್ರದಾಯ/ ಹುಲಿದೇವರ ಪೂಜೆ/ ನೃತ್ಯ ಸಮಾಗಮ/ ಕೆಂಡ ಹಾಯುವುದು ಇದೆ/ ಹಾಲಬ್ಬ ನೋಡುವುದಕ್ಕೆ ಸೇರಿದ್ದ ಜನಸ್ತೋಮ

ಕಾರವಾರ(ಜ.  18)  ರೈತರು ಬೆಳೆದ ಹೊಸ ಬೆಳೆಗಳನ್ನು ತಾವು ಬಳಸುವ ಮೊದಲು ದೇವರಿಗೆ ನೈವೇದ್ಯ ಮಾಡುವ ನಿಟ್ಟಿನಲ್ಲಿ ಆಚರಿಸುವ ವಿಶಿಷ್ಟ ರೀತಿಯ ಹಾಲಬ್ಬವೊಂದು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕಟ್ಟೆಕೈ ಗ್ರಾಮದಲ್ಲಿ ನಡೆಯಿತು. ಹೊಸಕ್ಕಿ ಹಬ್ಬ ಇಲ್ಲವೇ ಹಾಲಬ್ಬ ಎಂದೇ ಕರೆಸಿಕೊಳ್ಳುವ ಈ ಹಬ್ಬವು ಸಿದ್ಧಾಪುರದ ಕಟ್ಟೆಕೈ ಗ್ರಾಮದಲ್ಲಿ ಆಚರಿಸುವ ವಿಶಿಷ್ಟ ಹಬ್ಬ. ರೈತಾಪಿ ವರ್ಗದವರೇ ಹೆಚ್ಚಾಗಿ ಇರುವ ಗ್ರಾಮದಲ್ಲಿ ತಾವು ಬೆಳೆದ ಬೆಳೆಗಳನ್ನು ಮೊದಲು ದೇವರಿಗೆ ನೈವೇದ್ಯ ಮಾಡುವ ನಿಟ್ಟಿನಲ್ಲಿ ತಲೆ ತಲಾಂತರಗಳಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ.

ಉಡುಪಿಯಲ್ಲಿ ಮಕರ ಸಂಕ್ರಾಂತಿ ವೈಭವ

ಅದರಂತೆ ಈ ಭಾರಿಯೂ ಮೂರು ದಿನಗಳ ಕಾಲ ಹಬ್ಬ ಅದ್ದೂರಿಯಾಗಿ ನಡೆಯಿತು. ಮೊದಲ ದಿನ ಮಹಾಸತಿ ದೇವಾಲಯದಿಂದ ದೇವರನ್ನು ಹುಲಿದೇವರ ಮನೆಗೆ ತಂದು ಪೂಜೆ ಸಲ್ಲಿಸಿದ ಗ್ರಾಮಸ್ಥರು, ತಾವು ಬೆಳೆದ ಹೊಸ ಬೆಳೆಗಳನ್ನು ದೇವರಿಗೆ ನೈವೇದ್ಯ ಮಾಡಿದ್ರು. ಎರಡನೇ ದಿನ ಬ್ರಹ್ಮ‌ದೇವರ ಕಾನಿನಲ್ಲಿ ಕೆಂಡದ ಸೇವೆಗೆ ಸಿದ್ಧತೆ ಮಾಡಿಕೊಂಡ ಗ್ರಾಮಸ್ಥರು ಸಂಜೆ ಹೊತ್ತಿಗೆ ದೇವರನ್ನು ಕಾನಿಗೆ ಒಯ್ದು ಜಾಗರಣ ನಡೆಸಿದ್ರು. ಮೂರನೇ ದಿನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಗ್ರಾಮಸ್ಥರು ಬಳಿಕ ದೇವರ ಪಾಲಿಕೆಯನ್ನು ಹೊತ್ತು ಸಿದ್ದಗೊಂಡಿದ್ದ ಕೆಂಡದ ರಾಶಿಯ ಸುತ್ತ ಸುತ್ತುವರಿದು ಕೆಂಡ ಹಾಯುವ ಮೂಲಕ ಭಕ್ತಿ ಪರಾಕಾಷ್ಠೆ ಮೆರೆದರು. ಇನ್ನು ಕೆಂಡಹಾಯುವುದನ್ನು ಮತ್ತು ವಿಶಿಷ್ಟ ಹಾಲಬ್ಬ ನೋಡುವುದಕ್ಕಾಗಿಯೇ ಗ್ರಾಮಸ್ಥರಲ್ಲದೇ ಅಕ್ಕಪಕ್ಕದ  ಊರಿನಿಂದ ನೂರಾರು ಮಂದಿ ಆಗಮಿಸಿದ್ದರು. ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಹಬ್ಬ ರೈತ ಮಕ್ಕಳ ಮೊಗದಲ್ಲಿ ಮಂದಹಾಸ ಮೂಡಿಸಿತ್ತು.

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್