ಕಾರವಾರ: ಟೋಲ್‌ಗೇಟ್ ಬಳಿ ಬೀಡು, ತಾಯಿಯ ಕೊಂದವರ ಮೇಲೆ ಶ್ವಾನದ ಸೇಡು!

ಕಾರವಾರ: ಟೋಲ್‌ಗೇಟ್ ಬಳಿ ಬೀಡು, ತಾಯಿಯ ಕೊಂದವರ ಮೇಲೆ ಶ್ವಾನದ ಸೇಡು!

Published : May 14, 2022, 05:05 PM IST

ಅಂಕೋಲಾ (Ankola) ತಾಲೂಕಿನ ಹಟ್ಟಿಕೇರಿ ಟೋಲ್ ಗೇಟ್ ಬಳಿ ಬೀಡು ಬಿಟ್ಟಿರುವ ಶ್ವಾನವೊಂದು (Dog) ದಿನಾಲೂ ಬೆಳಗ್ಗೆಯಿಂದ ರಾತ್ರಿಯವರೆಗೆ ತನ್ನ ತಾಯಿಯನ್ನು ಕೊಂದವರ ಮೇಲೆ ಸೇಡು ತೀರಿಸಲು ಹವಣಿಸುತ್ತಿದೆ. 

ಉತ್ತರ ಕನ್ನಡ (ಮೇ.14): ಅಂಕೋಲಾ (Ankola) ತಾಲೂಕಿನ ಹಟ್ಟಿಕೇರಿ ಟೋಲ್ ಗೇಟ್ ಬಳಿ ಬೀಡು ಬಿಟ್ಟಿರುವ ಶ್ವಾನವೊಂದು (Dog) ದಿನಾಲೂ ಬೆಳಗ್ಗೆಯಿಂದ ರಾತ್ರಿಯವರೆಗೆ ತನ್ನ ತಾಯಿಯನ್ನು ಕೊಂದವರ ಮೇಲೆ ಸೇಡು ತೀರಿಸಲು ಹವಣಿಸುತ್ತಿದೆ. ಅಲ್ಲದೇ, ಅದಕ್ಕೆ ಕಾರಣವಾದ ಸಂಬಂಧಿಸಿದ ವಾಹನಗಳನ್ನು ಕಂಡ ಕೂಡಲೇ ಬೆನ್ನಟ್ಟಿಕೊಂಡು ಹೋಗುತ್ತದೆ. 

ಕಳೆದ ಒಂದು ವರ್ಷದ ಹಿಂದೆ ಈ ನಾಯಿಯ (Dog) ತಾಯಿ‌ ತನ್ನ ಮರಿಗಳಿಗೆ ಹಾಲುಣಿಸುವ ಸಂದರ್ಭದಲ್ಲಿ ವಿಐಪಿ  ಲೇನ್ (VIP lane) ನಿಂದ ಬಂದ ಅಂಬ್ಯುಲೆನ್ಸ್ ಗೆ‌ (Ambulence) ಸಿಕ್ಕಿ ಸಾವಿಗೀಡಾಗಿತ್ತು. ಆದರೆ, ಆ ಅಪಘಾತದಲ್ಲಿ ಈ ಗಂಡು ನಾಯಿ ಬದುಕುಳಿದಿತ್ತು. ಈಗ ತಾಯಿಯ ಸಾವಿನ ಸೇಡು ತೀರಿಸಿಕೊಳ್ಳಲು ಈ ಮರಿ ಶ್ವಾನ ಕಾಯುತ್ತಿದೆ. ಸೈರನ್ ಹಾಕಿ ವಿಐಪಿ ಲೇನ್ ನಿಂದ ಬರುವ ಎಲ್ಲಾ ಆ್ಯಂಬ್ಯುಲೆನ್ಸ್ ವಾಹನಗಳು ಮಾತ್ರವಲ್ಲದೇ, ಪೋಲಿಸ್ ವಾಹನಗಳನ್ನೂ ಅಡ್ಡಗಟ್ಟುವ ನಾಯಿ, ಅವುಗಳ ಮೇಲೆ ಎರಗಲು ಪ್ರಾರಂಭಿಸುತ್ತದೆ. 

ಈ ನಾಯಿಯ ಕಿವಿಗೆ ಸೈರನ್ ಶಬ್ದ ಬೀಳುತ್ತಿದ್ದಂತೆ ಎಲ್ಲೇ ಇದ್ರು ಓಡೋಡಿ ಬಂದು, ವಿಐಪಿ ಲೇನ್ ನಿಂದ ಸೈರನ್ ಹಾಕಿ ಬರುವ ವಾಹನಗಳ ಮೇಲೆ ಮಾತ್ರ‌ ದಾಳಿ ಮಾಡುತ್ತದೆ. ತಾಯಿಯ ಸಾವನ್ನು ಕಣ್ಣಾರೆ ಕಂಡಿದ್ದ ಮರಿ ನಾಯಿಯಿಂದ ಪ್ರತೀಕಾರದ ಪ್ರಯತ್ನ ಮುಂದುವರಿದಿದ್ದು, ಆ್ಯಂಬ್ಯುಲೆನ್ಸ್ ವಾಹನಗಳಿಗೆ ಅಡ್ಡಗಟ್ಟಿ ತನ್ನ ಸೇಡಿನ‌ ಪ್ರತೀಕಾರಕ್ಕೆ ಹವಣಿಸುತ್ತಿದೆ. ತಾಯಿ ನಾಯಿ ಸಾವು ಕಂಡ ಸಂದರ್ಭದಲ್ಲಿ ಈ ಮರಿ ನಾಯಿಗೆ ಅನ್ನ ನೀರು ನೀಡಿ ಪೋಷಿಸಿದ್ದು ಟೋಲ್ ಸಿಬ್ಬಂದಿ. ಈ ಕಾರಣದಿಂದ ಅಂಕೋಲಾ ಹಟ್ಟಿಕೇರಿ ಟೋಲ್ ಸಿಬ್ಬಂದಿಯ ಜತೆ ಈ ನಾಯಿ ಅನೋನ್ಯವಾಗಿದೆ. ಆದರೆ, ಕಳೆದ ಏಳೆಂಟು ತಿಂಗಳಿಂದ ನಾಯಿ ದೊಡ್ಡದಾಗುತ್ತ ಬರುತ್ತಿದ್ದಂತೇ ನಾಯಿಯಲ್ಲಿ ಸೇಡು ಕಾಣಿಸಿಕೊಂಡಿದ್ದು, ಈಗಲೂ ಆ್ಯಂಬುಲೆನ್ಸ್ ಹಾಗೂ ಪೊಲೀಸ್ ವಾಹನಗಳನ್ನು ಕಂಡ ಕೂಡಲೇ ಓಡಿಸಿಕೊಂಡು ಹೋಗುತ್ತಾ ತನ್ನ ಪ್ರತೀಕಾರ ತೀರಿಸಲು ಕಾಯುತ್ತಿದೆ. 

ಒಟ್ಟಿನಲ್ಲಿ ಪ್ರತೀಕಾರದ ಹೊಗೆ ಕೇವಲ ಮನುಷ್ಯ ಪ್ರಪಂಚದಲ್ಲಿ ಮಾತ್ರವಲ್ಲದೇ, ಪ್ರಾಣಿ ಪ್ರಪಂಚದಲ್ಲೂ ಭರ್ಜರಿಯಾಗಿ ಆಡುತ್ತದೆ ಅನ್ನೋದಕ್ಕೆ ಅಂಕೋಲಾ ಹಟ್ಟಿಕೇರಿಯ ಈ ಘಟನೆಯೇ ಸಾಕ್ಷಿಯಾಗಿದೆ. ತಾಯಿಯ ಸಾವಿ‌ನ ಸೇಡು ತೀರಿಸಿಕೊಳ್ಳಲು ಹವಣಿಸಿಕೊಳ್ಳುತ್ತಿರುವ ಈ ನಾಯಿ ಇಷ್ಟು ದಿನಗಳ ಕಾಲ ಪಟ್ಟ ನೋವು ಯಾರಿಂದಲೂ ಅರ್ಥಮಾಡಿಕೊಳ್ಳಲೂ ಸಾಧ್ಯವಿಲ್ಲ ಅನ್ನೋದಂತೂ ನಿಜ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more