ಕಾರವಾರ: ಟೋಲ್‌ಗೇಟ್ ಬಳಿ ಬೀಡು, ತಾಯಿಯ ಕೊಂದವರ ಮೇಲೆ ಶ್ವಾನದ ಸೇಡು!

ಕಾರವಾರ: ಟೋಲ್‌ಗೇಟ್ ಬಳಿ ಬೀಡು, ತಾಯಿಯ ಕೊಂದವರ ಮೇಲೆ ಶ್ವಾನದ ಸೇಡು!

Published : May 14, 2022, 05:05 PM IST

ಅಂಕೋಲಾ (Ankola) ತಾಲೂಕಿನ ಹಟ್ಟಿಕೇರಿ ಟೋಲ್ ಗೇಟ್ ಬಳಿ ಬೀಡು ಬಿಟ್ಟಿರುವ ಶ್ವಾನವೊಂದು (Dog) ದಿನಾಲೂ ಬೆಳಗ್ಗೆಯಿಂದ ರಾತ್ರಿಯವರೆಗೆ ತನ್ನ ತಾಯಿಯನ್ನು ಕೊಂದವರ ಮೇಲೆ ಸೇಡು ತೀರಿಸಲು ಹವಣಿಸುತ್ತಿದೆ. 

ಉತ್ತರ ಕನ್ನಡ (ಮೇ.14): ಅಂಕೋಲಾ (Ankola) ತಾಲೂಕಿನ ಹಟ್ಟಿಕೇರಿ ಟೋಲ್ ಗೇಟ್ ಬಳಿ ಬೀಡು ಬಿಟ್ಟಿರುವ ಶ್ವಾನವೊಂದು (Dog) ದಿನಾಲೂ ಬೆಳಗ್ಗೆಯಿಂದ ರಾತ್ರಿಯವರೆಗೆ ತನ್ನ ತಾಯಿಯನ್ನು ಕೊಂದವರ ಮೇಲೆ ಸೇಡು ತೀರಿಸಲು ಹವಣಿಸುತ್ತಿದೆ. ಅಲ್ಲದೇ, ಅದಕ್ಕೆ ಕಾರಣವಾದ ಸಂಬಂಧಿಸಿದ ವಾಹನಗಳನ್ನು ಕಂಡ ಕೂಡಲೇ ಬೆನ್ನಟ್ಟಿಕೊಂಡು ಹೋಗುತ್ತದೆ. 

ಕಳೆದ ಒಂದು ವರ್ಷದ ಹಿಂದೆ ಈ ನಾಯಿಯ (Dog) ತಾಯಿ‌ ತನ್ನ ಮರಿಗಳಿಗೆ ಹಾಲುಣಿಸುವ ಸಂದರ್ಭದಲ್ಲಿ ವಿಐಪಿ  ಲೇನ್ (VIP lane) ನಿಂದ ಬಂದ ಅಂಬ್ಯುಲೆನ್ಸ್ ಗೆ‌ (Ambulence) ಸಿಕ್ಕಿ ಸಾವಿಗೀಡಾಗಿತ್ತು. ಆದರೆ, ಆ ಅಪಘಾತದಲ್ಲಿ ಈ ಗಂಡು ನಾಯಿ ಬದುಕುಳಿದಿತ್ತು. ಈಗ ತಾಯಿಯ ಸಾವಿನ ಸೇಡು ತೀರಿಸಿಕೊಳ್ಳಲು ಈ ಮರಿ ಶ್ವಾನ ಕಾಯುತ್ತಿದೆ. ಸೈರನ್ ಹಾಕಿ ವಿಐಪಿ ಲೇನ್ ನಿಂದ ಬರುವ ಎಲ್ಲಾ ಆ್ಯಂಬ್ಯುಲೆನ್ಸ್ ವಾಹನಗಳು ಮಾತ್ರವಲ್ಲದೇ, ಪೋಲಿಸ್ ವಾಹನಗಳನ್ನೂ ಅಡ್ಡಗಟ್ಟುವ ನಾಯಿ, ಅವುಗಳ ಮೇಲೆ ಎರಗಲು ಪ್ರಾರಂಭಿಸುತ್ತದೆ. 

ಈ ನಾಯಿಯ ಕಿವಿಗೆ ಸೈರನ್ ಶಬ್ದ ಬೀಳುತ್ತಿದ್ದಂತೆ ಎಲ್ಲೇ ಇದ್ರು ಓಡೋಡಿ ಬಂದು, ವಿಐಪಿ ಲೇನ್ ನಿಂದ ಸೈರನ್ ಹಾಕಿ ಬರುವ ವಾಹನಗಳ ಮೇಲೆ ಮಾತ್ರ‌ ದಾಳಿ ಮಾಡುತ್ತದೆ. ತಾಯಿಯ ಸಾವನ್ನು ಕಣ್ಣಾರೆ ಕಂಡಿದ್ದ ಮರಿ ನಾಯಿಯಿಂದ ಪ್ರತೀಕಾರದ ಪ್ರಯತ್ನ ಮುಂದುವರಿದಿದ್ದು, ಆ್ಯಂಬ್ಯುಲೆನ್ಸ್ ವಾಹನಗಳಿಗೆ ಅಡ್ಡಗಟ್ಟಿ ತನ್ನ ಸೇಡಿನ‌ ಪ್ರತೀಕಾರಕ್ಕೆ ಹವಣಿಸುತ್ತಿದೆ. ತಾಯಿ ನಾಯಿ ಸಾವು ಕಂಡ ಸಂದರ್ಭದಲ್ಲಿ ಈ ಮರಿ ನಾಯಿಗೆ ಅನ್ನ ನೀರು ನೀಡಿ ಪೋಷಿಸಿದ್ದು ಟೋಲ್ ಸಿಬ್ಬಂದಿ. ಈ ಕಾರಣದಿಂದ ಅಂಕೋಲಾ ಹಟ್ಟಿಕೇರಿ ಟೋಲ್ ಸಿಬ್ಬಂದಿಯ ಜತೆ ಈ ನಾಯಿ ಅನೋನ್ಯವಾಗಿದೆ. ಆದರೆ, ಕಳೆದ ಏಳೆಂಟು ತಿಂಗಳಿಂದ ನಾಯಿ ದೊಡ್ಡದಾಗುತ್ತ ಬರುತ್ತಿದ್ದಂತೇ ನಾಯಿಯಲ್ಲಿ ಸೇಡು ಕಾಣಿಸಿಕೊಂಡಿದ್ದು, ಈಗಲೂ ಆ್ಯಂಬುಲೆನ್ಸ್ ಹಾಗೂ ಪೊಲೀಸ್ ವಾಹನಗಳನ್ನು ಕಂಡ ಕೂಡಲೇ ಓಡಿಸಿಕೊಂಡು ಹೋಗುತ್ತಾ ತನ್ನ ಪ್ರತೀಕಾರ ತೀರಿಸಲು ಕಾಯುತ್ತಿದೆ. 

ಒಟ್ಟಿನಲ್ಲಿ ಪ್ರತೀಕಾರದ ಹೊಗೆ ಕೇವಲ ಮನುಷ್ಯ ಪ್ರಪಂಚದಲ್ಲಿ ಮಾತ್ರವಲ್ಲದೇ, ಪ್ರಾಣಿ ಪ್ರಪಂಚದಲ್ಲೂ ಭರ್ಜರಿಯಾಗಿ ಆಡುತ್ತದೆ ಅನ್ನೋದಕ್ಕೆ ಅಂಕೋಲಾ ಹಟ್ಟಿಕೇರಿಯ ಈ ಘಟನೆಯೇ ಸಾಕ್ಷಿಯಾಗಿದೆ. ತಾಯಿಯ ಸಾವಿ‌ನ ಸೇಡು ತೀರಿಸಿಕೊಳ್ಳಲು ಹವಣಿಸಿಕೊಳ್ಳುತ್ತಿರುವ ಈ ನಾಯಿ ಇಷ್ಟು ದಿನಗಳ ಕಾಲ ಪಟ್ಟ ನೋವು ಯಾರಿಂದಲೂ ಅರ್ಥಮಾಡಿಕೊಳ್ಳಲೂ ಸಾಧ್ಯವಿಲ್ಲ ಅನ್ನೋದಂತೂ ನಿಜ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more