Uttara Kannada: ಕೂರ್ಮಗಡ ದ್ವೀಪದಲ್ಲಿ ನರಸಿಂಹ ದೇವರ ಜಾತ್ರೆ, ಇದಕ್ಕೊಂದು ವಿಶೇಷತೆಯಿದೆ!

Uttara Kannada: ಕೂರ್ಮಗಡ ದ್ವೀಪದಲ್ಲಿ ನರಸಿಂಹ ದೇವರ ಜಾತ್ರೆ, ಇದಕ್ಕೊಂದು ವಿಶೇಷತೆಯಿದೆ!

Suvarna News   | Asianet News
Published : Jan 19, 2022, 05:29 PM IST

ಮೀನುಗಾರರ ಆರಾಧ್ಯ ದೈವವಾದ ಕೂರ್ಮಗಡ ದ್ವೀಪದ ನರಸಿಂಹ ದೇವರ ಜಾತ್ರೆ ಜರುಗಿದ್ದು ಕೊರೊನಾ ಆತಂಕದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ವಿಜೃಂಭಣೆಯಿಂದ ಜರುಗುತ್ತಿದ್ದ ಜಾತ್ರೆ ಸರಳವಾಗಿ ನಡೆಯಿತು. 

ಉತ್ತರ ಕನ್ನಡ (ಜ. 19):  ಇದು ಕಾರವಾರದ (Karwar) ಬೈತಖೋಲ ಬಂದರಿನಲ್ಲಿ ನಡೆಯುವ ವಿಶೇಷ ಜಾತ್ರೆ (Festival) ಈ ಜಾತ್ರೆಗೆ ದೋಣಿಗಳಲ್ಲಿ ತೆರಳುವುದೇ ಒಂದು ವಿನೂತನ ಅನುಭವವಾದ್ದರಿಂದ ಪ್ರತೀ ವರ್ಷ ಸಾವಿರಾರು ಸಂಖ್ಯೆಯಲ್ಲಿ ಜನರು ಜಾತ್ರೆಗೆ ಆಗಮಿಸುತ್ತಿದ್ದರು. ಆದ್ರೆ, ಈ ಬಾರಿ ಕೊರೊನಾ ಕಾರಣದಿಂದಾಗಿ ಜಾತ್ರೆಯನ್ನು ಕಟ್ಟುನಿಟ್ಟಾಗಿ ಮಾಡಲಾಗಿದ್ದು, ಅನುಮತಿ ಪಡೆದ ಸ್ಥಳೀಯರಿಗೆ ಮಾತ್ರ ಜಾತ್ರೆಗೆ ತೆರಳಲು ಅವಕಾಶ ನೀಡಿದ್ದರಿಂದಾಗಿ ಜಾತ್ರೆ ಅಂದ ಕಳೆದುಕೊಳ್ಳುವಂತಾಗಿದೆ. 

ಮೀನುಗಾರರ ಆರಾಧ್ಯ ದೈವವಾದ ಕೂರ್ಮಗಡ (Koormagadha) ದ್ವೀಪದ ನರಸಿಂಹ ದೇವರ ಜಾತ್ರೆ ಜರುಗಿದ್ದು ಕೊರೊನಾ ಆತಂಕದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ವಿಜೃಂಭಣೆಯಿಂದ ಜರುಗುತ್ತಿದ್ದ ಜಾತ್ರೆ ಸರಳವಾಗಿ ನಡೆಯಿತು. ಕಾರವಾರದಿಂದ ಸುಮಾರು 16 ಕಿಲೋ ಮೀಟರ್ ದೂರದಲ್ಲಿರುವ ಕೂರ್ಮಗಡ ದ್ವೀಪದಲ್ಲಿ ನರಸಿಂಹ ದೇವರ ಜಾತ್ರೆ ಜರುಗುತ್ತದೆ. ವರ್ಷಕ್ಕೊಮ್ಮೆ ಜರುಗುವ ಜಾತ್ರೆಗೆ ಕೇವಲ ಮೀನುಗಾರರಷ್ಟೇ ಅಲ್ಲದೇ ವಿವಿಧೆಡೆಗಳಿಂದಲೂ ಜನರು ಆಗಮಿಸುತ್ತಿದ್ದರು. ಬೋಟಿನಲ್ಲಿ ಜಾತ್ರೆಗೆ ತೆರಳುವುದೇ ಒಂದು ವಿಶಿಷ್ಟ ಅನುಭವವಾಗಿದ್ದು, ದ್ವೀಪದಲ್ಲಿನ ಸುಂದರ ಪರಿಸರ ಜಾತ್ರೆಗೆ ಬಂದವರಿಗೆ ಪ್ರವಾಸದ ಅನುಭವ ನೀಡುತ್ತಿತ್ತು. ಆದ್ರೆ, ಈ ಬಾರಿ ಕೊರೊನಾ ಅಬ್ಬರ ಹೆಚ್ಚಾಗಿರುವ ಹಿನ್ನೆಲೆ ಜಾತ್ರೆಗಳನ್ನು ನಡೆಸದಂತೆ ಸರ್ಕಾರದ ಆದೇಶದಿಂದಾಗಿ ಸ್ಥಳೀಯರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಅಂದಹಾಗೆ, ಪ್ರತೀವರ್ಷ ಜನವರಿ ತಿಂಗಳ ಹುಣ್ಣಿಮೆ ದಿನದಂದು ಕೂರ್ಮಗಢದ ನರಸಿಂಹ ದೇವರ ಜಾತ್ರೆ ನಡೆಯುತ್ತದೆ. ನರಸಿಂಹ ದೇವರಿಗೆ ಬಾಳೆಗೊನೆ ಸೇವೆ ನೀಡುವುದು ವಿಶೇಷವಾಗಿದ್ದು, ದೇವರಲ್ಲಿ ಹರಕೆ ಹೊತ್ತುಕೊಂಡರೆ ಇಷ್ಟಾರ್ಥಗಳು ಈಡೇರುತ್ತವೆ ಎನ್ನುವ ನಂಬಿಕೆ ಇದೆ. ಅಲ್ಲದೇ, ಮೀನುಗಾರರು ಪ್ರತೀವರ್ಷ ಜಾತ್ರೆಗೆ ಆಗಮಿಸಿ ದೇವರಿಗೆ ಬಾಳೆಗೊನೆಯನ್ನು ಅರ್ಪಿಸಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂದು ಬೇಡಿಕೊಳ್ಳುತ್ತಾರೆ. ಇನ್ನು ಕೊರೊನಾ ಆತಂಕ ಹಿನ್ನೆಲೆ ಈ ಬಾರಿ ಗೋವಾ, ಮಹಾರಾಷ್ಟ್ರ ಭಾಗದ ಭಕ್ತರು ಆಗಮಿಸಿಲ್ಲ. ಇದರಿಂದಾಗಿ ಭಕ್ತರ ಸಂಖ್ಯೆ 200ರಿಂದ 300ಕ್ಕೆ ಸೀಮಿತವಾಗಿತ್ತು. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more