Uttara Kannada: ಕೂರ್ಮಗಡ ದ್ವೀಪದಲ್ಲಿ ನರಸಿಂಹ ದೇವರ ಜಾತ್ರೆ, ಇದಕ್ಕೊಂದು ವಿಶೇಷತೆಯಿದೆ!

Uttara Kannada: ಕೂರ್ಮಗಡ ದ್ವೀಪದಲ್ಲಿ ನರಸಿಂಹ ದೇವರ ಜಾತ್ರೆ, ಇದಕ್ಕೊಂದು ವಿಶೇಷತೆಯಿದೆ!

Suvarna News   | Asianet News
Published : Jan 19, 2022, 05:29 PM IST

ಮೀನುಗಾರರ ಆರಾಧ್ಯ ದೈವವಾದ ಕೂರ್ಮಗಡ ದ್ವೀಪದ ನರಸಿಂಹ ದೇವರ ಜಾತ್ರೆ ಜರುಗಿದ್ದು ಕೊರೊನಾ ಆತಂಕದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ವಿಜೃಂಭಣೆಯಿಂದ ಜರುಗುತ್ತಿದ್ದ ಜಾತ್ರೆ ಸರಳವಾಗಿ ನಡೆಯಿತು. 

ಉತ್ತರ ಕನ್ನಡ (ಜ. 19):  ಇದು ಕಾರವಾರದ (Karwar) ಬೈತಖೋಲ ಬಂದರಿನಲ್ಲಿ ನಡೆಯುವ ವಿಶೇಷ ಜಾತ್ರೆ (Festival) ಈ ಜಾತ್ರೆಗೆ ದೋಣಿಗಳಲ್ಲಿ ತೆರಳುವುದೇ ಒಂದು ವಿನೂತನ ಅನುಭವವಾದ್ದರಿಂದ ಪ್ರತೀ ವರ್ಷ ಸಾವಿರಾರು ಸಂಖ್ಯೆಯಲ್ಲಿ ಜನರು ಜಾತ್ರೆಗೆ ಆಗಮಿಸುತ್ತಿದ್ದರು. ಆದ್ರೆ, ಈ ಬಾರಿ ಕೊರೊನಾ ಕಾರಣದಿಂದಾಗಿ ಜಾತ್ರೆಯನ್ನು ಕಟ್ಟುನಿಟ್ಟಾಗಿ ಮಾಡಲಾಗಿದ್ದು, ಅನುಮತಿ ಪಡೆದ ಸ್ಥಳೀಯರಿಗೆ ಮಾತ್ರ ಜಾತ್ರೆಗೆ ತೆರಳಲು ಅವಕಾಶ ನೀಡಿದ್ದರಿಂದಾಗಿ ಜಾತ್ರೆ ಅಂದ ಕಳೆದುಕೊಳ್ಳುವಂತಾಗಿದೆ. 

ಮೀನುಗಾರರ ಆರಾಧ್ಯ ದೈವವಾದ ಕೂರ್ಮಗಡ (Koormagadha) ದ್ವೀಪದ ನರಸಿಂಹ ದೇವರ ಜಾತ್ರೆ ಜರುಗಿದ್ದು ಕೊರೊನಾ ಆತಂಕದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ವಿಜೃಂಭಣೆಯಿಂದ ಜರುಗುತ್ತಿದ್ದ ಜಾತ್ರೆ ಸರಳವಾಗಿ ನಡೆಯಿತು. ಕಾರವಾರದಿಂದ ಸುಮಾರು 16 ಕಿಲೋ ಮೀಟರ್ ದೂರದಲ್ಲಿರುವ ಕೂರ್ಮಗಡ ದ್ವೀಪದಲ್ಲಿ ನರಸಿಂಹ ದೇವರ ಜಾತ್ರೆ ಜರುಗುತ್ತದೆ. ವರ್ಷಕ್ಕೊಮ್ಮೆ ಜರುಗುವ ಜಾತ್ರೆಗೆ ಕೇವಲ ಮೀನುಗಾರರಷ್ಟೇ ಅಲ್ಲದೇ ವಿವಿಧೆಡೆಗಳಿಂದಲೂ ಜನರು ಆಗಮಿಸುತ್ತಿದ್ದರು. ಬೋಟಿನಲ್ಲಿ ಜಾತ್ರೆಗೆ ತೆರಳುವುದೇ ಒಂದು ವಿಶಿಷ್ಟ ಅನುಭವವಾಗಿದ್ದು, ದ್ವೀಪದಲ್ಲಿನ ಸುಂದರ ಪರಿಸರ ಜಾತ್ರೆಗೆ ಬಂದವರಿಗೆ ಪ್ರವಾಸದ ಅನುಭವ ನೀಡುತ್ತಿತ್ತು. ಆದ್ರೆ, ಈ ಬಾರಿ ಕೊರೊನಾ ಅಬ್ಬರ ಹೆಚ್ಚಾಗಿರುವ ಹಿನ್ನೆಲೆ ಜಾತ್ರೆಗಳನ್ನು ನಡೆಸದಂತೆ ಸರ್ಕಾರದ ಆದೇಶದಿಂದಾಗಿ ಸ್ಥಳೀಯರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಅಂದಹಾಗೆ, ಪ್ರತೀವರ್ಷ ಜನವರಿ ತಿಂಗಳ ಹುಣ್ಣಿಮೆ ದಿನದಂದು ಕೂರ್ಮಗಢದ ನರಸಿಂಹ ದೇವರ ಜಾತ್ರೆ ನಡೆಯುತ್ತದೆ. ನರಸಿಂಹ ದೇವರಿಗೆ ಬಾಳೆಗೊನೆ ಸೇವೆ ನೀಡುವುದು ವಿಶೇಷವಾಗಿದ್ದು, ದೇವರಲ್ಲಿ ಹರಕೆ ಹೊತ್ತುಕೊಂಡರೆ ಇಷ್ಟಾರ್ಥಗಳು ಈಡೇರುತ್ತವೆ ಎನ್ನುವ ನಂಬಿಕೆ ಇದೆ. ಅಲ್ಲದೇ, ಮೀನುಗಾರರು ಪ್ರತೀವರ್ಷ ಜಾತ್ರೆಗೆ ಆಗಮಿಸಿ ದೇವರಿಗೆ ಬಾಳೆಗೊನೆಯನ್ನು ಅರ್ಪಿಸಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂದು ಬೇಡಿಕೊಳ್ಳುತ್ತಾರೆ. ಇನ್ನು ಕೊರೊನಾ ಆತಂಕ ಹಿನ್ನೆಲೆ ಈ ಬಾರಿ ಗೋವಾ, ಮಹಾರಾಷ್ಟ್ರ ಭಾಗದ ಭಕ್ತರು ಆಗಮಿಸಿಲ್ಲ. ಇದರಿಂದಾಗಿ ಭಕ್ತರ ಸಂಖ್ಯೆ 200ರಿಂದ 300ಕ್ಕೆ ಸೀಮಿತವಾಗಿತ್ತು. 

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
Read more