Uttara Kannada: ಕೂರ್ಮಗಡ ದ್ವೀಪದಲ್ಲಿ ನರಸಿಂಹ ದೇವರ ಜಾತ್ರೆ, ಇದಕ್ಕೊಂದು ವಿಶೇಷತೆಯಿದೆ!

Uttara Kannada: ಕೂರ್ಮಗಡ ದ್ವೀಪದಲ್ಲಿ ನರಸಿಂಹ ದೇವರ ಜಾತ್ರೆ, ಇದಕ್ಕೊಂದು ವಿಶೇಷತೆಯಿದೆ!

Published : Jan 19, 2022, 05:29 PM IST

ಮೀನುಗಾರರ ಆರಾಧ್ಯ ದೈವವಾದ ಕೂರ್ಮಗಡ ದ್ವೀಪದ ನರಸಿಂಹ ದೇವರ ಜಾತ್ರೆ ಜರುಗಿದ್ದು ಕೊರೊನಾ ಆತಂಕದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ವಿಜೃಂಭಣೆಯಿಂದ ಜರುಗುತ್ತಿದ್ದ ಜಾತ್ರೆ ಸರಳವಾಗಿ ನಡೆಯಿತು. 

ಉತ್ತರ ಕನ್ನಡ (ಜ. 19):  ಇದು ಕಾರವಾರದ (Karwar) ಬೈತಖೋಲ ಬಂದರಿನಲ್ಲಿ ನಡೆಯುವ ವಿಶೇಷ ಜಾತ್ರೆ (Festival) ಈ ಜಾತ್ರೆಗೆ ದೋಣಿಗಳಲ್ಲಿ ತೆರಳುವುದೇ ಒಂದು ವಿನೂತನ ಅನುಭವವಾದ್ದರಿಂದ ಪ್ರತೀ ವರ್ಷ ಸಾವಿರಾರು ಸಂಖ್ಯೆಯಲ್ಲಿ ಜನರು ಜಾತ್ರೆಗೆ ಆಗಮಿಸುತ್ತಿದ್ದರು. ಆದ್ರೆ, ಈ ಬಾರಿ ಕೊರೊನಾ ಕಾರಣದಿಂದಾಗಿ ಜಾತ್ರೆಯನ್ನು ಕಟ್ಟುನಿಟ್ಟಾಗಿ ಮಾಡಲಾಗಿದ್ದು, ಅನುಮತಿ ಪಡೆದ ಸ್ಥಳೀಯರಿಗೆ ಮಾತ್ರ ಜಾತ್ರೆಗೆ ತೆರಳಲು ಅವಕಾಶ ನೀಡಿದ್ದರಿಂದಾಗಿ ಜಾತ್ರೆ ಅಂದ ಕಳೆದುಕೊಳ್ಳುವಂತಾಗಿದೆ. 

ಮೀನುಗಾರರ ಆರಾಧ್ಯ ದೈವವಾದ ಕೂರ್ಮಗಡ (Koormagadha) ದ್ವೀಪದ ನರಸಿಂಹ ದೇವರ ಜಾತ್ರೆ ಜರುಗಿದ್ದು ಕೊರೊನಾ ಆತಂಕದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ವಿಜೃಂಭಣೆಯಿಂದ ಜರುಗುತ್ತಿದ್ದ ಜಾತ್ರೆ ಸರಳವಾಗಿ ನಡೆಯಿತು. ಕಾರವಾರದಿಂದ ಸುಮಾರು 16 ಕಿಲೋ ಮೀಟರ್ ದೂರದಲ್ಲಿರುವ ಕೂರ್ಮಗಡ ದ್ವೀಪದಲ್ಲಿ ನರಸಿಂಹ ದೇವರ ಜಾತ್ರೆ ಜರುಗುತ್ತದೆ. ವರ್ಷಕ್ಕೊಮ್ಮೆ ಜರುಗುವ ಜಾತ್ರೆಗೆ ಕೇವಲ ಮೀನುಗಾರರಷ್ಟೇ ಅಲ್ಲದೇ ವಿವಿಧೆಡೆಗಳಿಂದಲೂ ಜನರು ಆಗಮಿಸುತ್ತಿದ್ದರು. ಬೋಟಿನಲ್ಲಿ ಜಾತ್ರೆಗೆ ತೆರಳುವುದೇ ಒಂದು ವಿಶಿಷ್ಟ ಅನುಭವವಾಗಿದ್ದು, ದ್ವೀಪದಲ್ಲಿನ ಸುಂದರ ಪರಿಸರ ಜಾತ್ರೆಗೆ ಬಂದವರಿಗೆ ಪ್ರವಾಸದ ಅನುಭವ ನೀಡುತ್ತಿತ್ತು. ಆದ್ರೆ, ಈ ಬಾರಿ ಕೊರೊನಾ ಅಬ್ಬರ ಹೆಚ್ಚಾಗಿರುವ ಹಿನ್ನೆಲೆ ಜಾತ್ರೆಗಳನ್ನು ನಡೆಸದಂತೆ ಸರ್ಕಾರದ ಆದೇಶದಿಂದಾಗಿ ಸ್ಥಳೀಯರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಅಂದಹಾಗೆ, ಪ್ರತೀವರ್ಷ ಜನವರಿ ತಿಂಗಳ ಹುಣ್ಣಿಮೆ ದಿನದಂದು ಕೂರ್ಮಗಢದ ನರಸಿಂಹ ದೇವರ ಜಾತ್ರೆ ನಡೆಯುತ್ತದೆ. ನರಸಿಂಹ ದೇವರಿಗೆ ಬಾಳೆಗೊನೆ ಸೇವೆ ನೀಡುವುದು ವಿಶೇಷವಾಗಿದ್ದು, ದೇವರಲ್ಲಿ ಹರಕೆ ಹೊತ್ತುಕೊಂಡರೆ ಇಷ್ಟಾರ್ಥಗಳು ಈಡೇರುತ್ತವೆ ಎನ್ನುವ ನಂಬಿಕೆ ಇದೆ. ಅಲ್ಲದೇ, ಮೀನುಗಾರರು ಪ್ರತೀವರ್ಷ ಜಾತ್ರೆಗೆ ಆಗಮಿಸಿ ದೇವರಿಗೆ ಬಾಳೆಗೊನೆಯನ್ನು ಅರ್ಪಿಸಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂದು ಬೇಡಿಕೊಳ್ಳುತ್ತಾರೆ. ಇನ್ನು ಕೊರೊನಾ ಆತಂಕ ಹಿನ್ನೆಲೆ ಈ ಬಾರಿ ಗೋವಾ, ಮಹಾರಾಷ್ಟ್ರ ಭಾಗದ ಭಕ್ತರು ಆಗಮಿಸಿಲ್ಲ. ಇದರಿಂದಾಗಿ ಭಕ್ತರ ಸಂಖ್ಯೆ 200ರಿಂದ 300ಕ್ಕೆ ಸೀಮಿತವಾಗಿತ್ತು. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more