ಕಾರವಾರ: ಸುರಕ್ಷತೆ, ಬಿಗಿ ಭದ್ರತೆ, ತುರ್ತು ಸಂದರ್ಭ ಸನ್ನದ್ಧತೆಗೆ ಸಾಗರಕವಚ ಅಣಕು ಕಾರ್ಯಾಚರಣೆ

ಕಾರವಾರ: ಸುರಕ್ಷತೆ, ಬಿಗಿ ಭದ್ರತೆ, ತುರ್ತು ಸಂದರ್ಭ ಸನ್ನದ್ಧತೆಗೆ ಸಾಗರಕವಚ ಅಣಕು ಕಾರ್ಯಾಚರಣೆ

Published : May 04, 2022, 11:11 AM ISTUpdated : May 04, 2022, 06:42 PM IST

ನೌಕಾನೆಲೆ, ಕೈಗಾ ಅಣುವಿದ್ಯುತ್ ಸ್ಥಾವರದಂತಹ ಮಹತ್ತರ ಯೋಜನೆಗಳನ್ನು ಹೊಂದಿರುವ ಉತ್ತರಕನ್ನಡ ಜಿಲ್ಲೆ ಅತ್ಯಂತ ಸೂಕ್ಷ್ಮ  ಪ್ರದೇಶವೂ ಆಗಿರೋದ್ರಿಂದ ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಕಾರ್ಯಾಚರಣೆ ನಡೆಸಬೇಕು ಅನ್ನೋದನ್ನ ಅಭ್ಯಾಸ ಮಾಡುವ ನಿಟ್ಟಿನಲ್ಲಿ ಎರಡು ದಿನಗಳ ಸಾಗರ ಕವಚ ಅಣಕು ಕಾರ್ಯಾಚರಣೆಯನ್ನು ನಡೆಸಲಾಗಿದೆ. 

ನೌಕಾನೆಲೆ, ಕೈಗಾ ಅಣುವಿದ್ಯುತ್ ಸ್ಥಾವರದಂತಹ ಮಹತ್ತರ ಯೋಜನೆಗಳನ್ನು ಹೊಂದಿರುವ ಉತ್ತರಕನ್ನಡ ಜಿಲ್ಲೆ ಅತ್ಯಂತ ಸೂಕ್ಷ್ಮ  ಪ್ರದೇಶವೂ ಆಗಿರೋದ್ರಿಂದ ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಕಾರ್ಯಾಚರಣೆ ನಡೆಸಬೇಕು ಅನ್ನೋದನ್ನ ಅಭ್ಯಾಸ ಮಾಡುವ ನಿಟ್ಟಿನಲ್ಲಿ ಎರಡು ದಿನಗಳ ಸಾಗರ ಕವಚ ಅಣಕು ಕಾರ್ಯಾಚರಣೆಯನ್ನು ನಡೆಸಲಾಗಿದೆ. 

ಜಿಲ್ಲೆಯ ಕರಾವಳಿ ಭಾಗದ ಭದ್ರತೆ ದೃಷ್ಠಿಯಲ್ಲಿ ಪೊಲೀಸ್ ಇಲಾಖೆ, ಕೋಸ್ಟಲ್ ಪೊಲೀಸ್, ಕೋಸ್ಟ್ ಗಾರ್ಡ್ಸ್, ನೌಕಾದಳ ಹಾಗೂ ಮೀನುಗಾರಿಕಾ ಇಲಾಖೆಯ ಸಹಯೋಗದಲ್ಲಿ ಈ ಸಾಗರಕವಚ ಅಣುಕು ಕಾರ್ಯಾಚರಣೆ ನಡೆಸಲಾಗಿದ್ದು, ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ, ಸಮುದ್ರ ಮಾರ್ಗದಲ್ಲಿ ತಿರುಗಾಡಿ ಜಿಲ್ಲೆ ನುಸುಳಲೆತ್ನಿಸುವ ಉಗ್ರರನ್ನು ಯಾವ ರೀತಿಯಲ್ಲಿ ಹತ್ತಿಕ್ಕಬಹುದು ಅನ್ನೋದರ ಬಗ್ಗೆ ಅಭ್ಯಾಸ ನಡೆಸುವುದು ಇದರ ಪ್ರಮುಖ ಉದ್ದೇಶ. ಈ ನಿಟ್ಟಿನಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿವಿಧೆಡೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಜಿಲ್ಲೆಯ ಒಳಗೆ ಹಾಗೂ ಹೊರಗೆ ಹೋಗುವ ವಾಹನಗಳನ್ನು ತಡೆದು ತಪಾಸಣೆ ನಡೆಸಲಾಯಿತು. 

ಉಗ್ರರು ರಕ್ಷಣಾ ಸಿಬ್ಬಂದಿಯ ಕಣ್ತಪ್ಪಿಸಿ ಜಿಲ್ಲೆಯ ಒಳಪ್ರವೇಶಿಸದಂತೆ ತಡೆಯುವುದು ಭದ್ರತಾ ಸಿಬ್ಬಂದಿ ಕಾರ್ಯವಾಗಿರೋದ್ರಿಂದ ಅಣುಕು ಕಾರ್ಯಾಚರಣೆಯಲ್ಲಿ ನಕಲಿ ಉಗ್ರರರನ್ನು ಹಿಡಿದು ಬಂಧಿಸುವ ಪ್ರಕ್ರಿಯೆಯೂ ನಡೆಯಿತು. ಈ  ಕಾರ್ಯಾಚರಣೆಯಲ್ಲಿ ಪರಿಶೀಲನೆ ವೇಳೆ ಅರಬ್ಬೀ ಸಮುದ್ರ ವ್ಯಾಪ್ತಿಯ ಕೂರ್ಮಗಡ ದ್ವೀಪದ ಬಳಿ ಒಟ್ಟು 18 ಮಂದಿ ನುಸುಳುಕೋರರನ್ನು ಭದ್ರತಾ ಸಿಬ್ಬಂದಿ ಪತ್ತೆಹಚ್ಚಿದ್ದು, ಅವರಿಂದ ನಕಲಿ ಬಾಂಬ್‌ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮೂಲಕ ಸಮುದ್ರದ ಮಾರ್ಗದ ಭಿಗಿ ಬಂದೋಬಸ್ತ್ ಬಗ್ಗೆ ಕೋಸ್ಟಲ್ ಪೊಲೀಸ್, ಕೋಸ್ಟ್‌ಗಾರ್ಡ್ಸ್ ಹಾಗೂ ನೌಕಾದಳ ತೋರಿಸಿಕೊಟ್ಟಿದ್ದಾರೆ. 

ಅಣಕು ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪಡೆ, ನೌಕಾದಳ, ಸಿಐಎಸ್ಎಫ್, ಗುಪ್ತಚರ ಇಲಾಖೆಗಳ ಭದ್ರತಾ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತದೆ. ಬಳಿಕ ಕಾರ್ಯಾಚರಣೆ ಯಾವ ರೀತಿ ನಡೆಯಿತು ಎನ್ನುವುದನ್ನು ಪರಿಶೀಲಿಸಿ ತೊಡಕುಗಳಿದ್ದಲ್ಲಿ ಅವುಗಳನ್ನ ಸುಧಾರಿಸಿ ಭದ್ರತೆಯನ್ನು ಬಲಪಡಿಸುವ ಕುರಿತು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇನ್ನು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಕೈಗೊಂಡ ಸಾಗರ ಕವಚ ಅಣಕು ಕಾರ್ಯಾಚರಣೆಗೆ ಸಾರ್ವಜನಿಕರಿಂದಲೂ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಈ ರೀತಿಯ ಕ್ರಮ ಒಂದೆರಡು ದಿನಕ್ಕೆ ಸೀಮಿತವಾಗದೇ ನಿರಂತರವಾಗಿ ಕಾರ್ಯೋನ್ಮುಖರಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more