ಕಾರವಾರ: ಸುರಕ್ಷತೆ, ಬಿಗಿ ಭದ್ರತೆ, ತುರ್ತು ಸಂದರ್ಭ ಸನ್ನದ್ಧತೆಗೆ ಸಾಗರಕವಚ ಅಣಕು ಕಾರ್ಯಾಚರಣೆ

ಕಾರವಾರ: ಸುರಕ್ಷತೆ, ಬಿಗಿ ಭದ್ರತೆ, ತುರ್ತು ಸಂದರ್ಭ ಸನ್ನದ್ಧತೆಗೆ ಸಾಗರಕವಚ ಅಣಕು ಕಾರ್ಯಾಚರಣೆ

Published : May 04, 2022, 11:11 AM ISTUpdated : May 04, 2022, 06:42 PM IST

ನೌಕಾನೆಲೆ, ಕೈಗಾ ಅಣುವಿದ್ಯುತ್ ಸ್ಥಾವರದಂತಹ ಮಹತ್ತರ ಯೋಜನೆಗಳನ್ನು ಹೊಂದಿರುವ ಉತ್ತರಕನ್ನಡ ಜಿಲ್ಲೆ ಅತ್ಯಂತ ಸೂಕ್ಷ್ಮ  ಪ್ರದೇಶವೂ ಆಗಿರೋದ್ರಿಂದ ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಕಾರ್ಯಾಚರಣೆ ನಡೆಸಬೇಕು ಅನ್ನೋದನ್ನ ಅಭ್ಯಾಸ ಮಾಡುವ ನಿಟ್ಟಿನಲ್ಲಿ ಎರಡು ದಿನಗಳ ಸಾಗರ ಕವಚ ಅಣಕು ಕಾರ್ಯಾಚರಣೆಯನ್ನು ನಡೆಸಲಾಗಿದೆ. 

ನೌಕಾನೆಲೆ, ಕೈಗಾ ಅಣುವಿದ್ಯುತ್ ಸ್ಥಾವರದಂತಹ ಮಹತ್ತರ ಯೋಜನೆಗಳನ್ನು ಹೊಂದಿರುವ ಉತ್ತರಕನ್ನಡ ಜಿಲ್ಲೆ ಅತ್ಯಂತ ಸೂಕ್ಷ್ಮ  ಪ್ರದೇಶವೂ ಆಗಿರೋದ್ರಿಂದ ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಕಾರ್ಯಾಚರಣೆ ನಡೆಸಬೇಕು ಅನ್ನೋದನ್ನ ಅಭ್ಯಾಸ ಮಾಡುವ ನಿಟ್ಟಿನಲ್ಲಿ ಎರಡು ದಿನಗಳ ಸಾಗರ ಕವಚ ಅಣಕು ಕಾರ್ಯಾಚರಣೆಯನ್ನು ನಡೆಸಲಾಗಿದೆ. 

ಜಿಲ್ಲೆಯ ಕರಾವಳಿ ಭಾಗದ ಭದ್ರತೆ ದೃಷ್ಠಿಯಲ್ಲಿ ಪೊಲೀಸ್ ಇಲಾಖೆ, ಕೋಸ್ಟಲ್ ಪೊಲೀಸ್, ಕೋಸ್ಟ್ ಗಾರ್ಡ್ಸ್, ನೌಕಾದಳ ಹಾಗೂ ಮೀನುಗಾರಿಕಾ ಇಲಾಖೆಯ ಸಹಯೋಗದಲ್ಲಿ ಈ ಸಾಗರಕವಚ ಅಣುಕು ಕಾರ್ಯಾಚರಣೆ ನಡೆಸಲಾಗಿದ್ದು, ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ, ಸಮುದ್ರ ಮಾರ್ಗದಲ್ಲಿ ತಿರುಗಾಡಿ ಜಿಲ್ಲೆ ನುಸುಳಲೆತ್ನಿಸುವ ಉಗ್ರರನ್ನು ಯಾವ ರೀತಿಯಲ್ಲಿ ಹತ್ತಿಕ್ಕಬಹುದು ಅನ್ನೋದರ ಬಗ್ಗೆ ಅಭ್ಯಾಸ ನಡೆಸುವುದು ಇದರ ಪ್ರಮುಖ ಉದ್ದೇಶ. ಈ ನಿಟ್ಟಿನಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿವಿಧೆಡೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಜಿಲ್ಲೆಯ ಒಳಗೆ ಹಾಗೂ ಹೊರಗೆ ಹೋಗುವ ವಾಹನಗಳನ್ನು ತಡೆದು ತಪಾಸಣೆ ನಡೆಸಲಾಯಿತು. 

ಉಗ್ರರು ರಕ್ಷಣಾ ಸಿಬ್ಬಂದಿಯ ಕಣ್ತಪ್ಪಿಸಿ ಜಿಲ್ಲೆಯ ಒಳಪ್ರವೇಶಿಸದಂತೆ ತಡೆಯುವುದು ಭದ್ರತಾ ಸಿಬ್ಬಂದಿ ಕಾರ್ಯವಾಗಿರೋದ್ರಿಂದ ಅಣುಕು ಕಾರ್ಯಾಚರಣೆಯಲ್ಲಿ ನಕಲಿ ಉಗ್ರರರನ್ನು ಹಿಡಿದು ಬಂಧಿಸುವ ಪ್ರಕ್ರಿಯೆಯೂ ನಡೆಯಿತು. ಈ  ಕಾರ್ಯಾಚರಣೆಯಲ್ಲಿ ಪರಿಶೀಲನೆ ವೇಳೆ ಅರಬ್ಬೀ ಸಮುದ್ರ ವ್ಯಾಪ್ತಿಯ ಕೂರ್ಮಗಡ ದ್ವೀಪದ ಬಳಿ ಒಟ್ಟು 18 ಮಂದಿ ನುಸುಳುಕೋರರನ್ನು ಭದ್ರತಾ ಸಿಬ್ಬಂದಿ ಪತ್ತೆಹಚ್ಚಿದ್ದು, ಅವರಿಂದ ನಕಲಿ ಬಾಂಬ್‌ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮೂಲಕ ಸಮುದ್ರದ ಮಾರ್ಗದ ಭಿಗಿ ಬಂದೋಬಸ್ತ್ ಬಗ್ಗೆ ಕೋಸ್ಟಲ್ ಪೊಲೀಸ್, ಕೋಸ್ಟ್‌ಗಾರ್ಡ್ಸ್ ಹಾಗೂ ನೌಕಾದಳ ತೋರಿಸಿಕೊಟ್ಟಿದ್ದಾರೆ. 

ಅಣಕು ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪಡೆ, ನೌಕಾದಳ, ಸಿಐಎಸ್ಎಫ್, ಗುಪ್ತಚರ ಇಲಾಖೆಗಳ ಭದ್ರತಾ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತದೆ. ಬಳಿಕ ಕಾರ್ಯಾಚರಣೆ ಯಾವ ರೀತಿ ನಡೆಯಿತು ಎನ್ನುವುದನ್ನು ಪರಿಶೀಲಿಸಿ ತೊಡಕುಗಳಿದ್ದಲ್ಲಿ ಅವುಗಳನ್ನ ಸುಧಾರಿಸಿ ಭದ್ರತೆಯನ್ನು ಬಲಪಡಿಸುವ ಕುರಿತು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇನ್ನು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಕೈಗೊಂಡ ಸಾಗರ ಕವಚ ಅಣಕು ಕಾರ್ಯಾಚರಣೆಗೆ ಸಾರ್ವಜನಿಕರಿಂದಲೂ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಈ ರೀತಿಯ ಕ್ರಮ ಒಂದೆರಡು ದಿನಕ್ಕೆ ಸೀಮಿತವಾಗದೇ ನಿರಂತರವಾಗಿ ಕಾರ್ಯೋನ್ಮುಖರಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more