ಚೇತರಿಸುತ್ತಿರುವ ಪ್ರವಾಸೋದ್ಯಮ, ಪ್ರವಾಸಿಗರನ್ನು ಸ್ವಾಗತಿಸುತ್ತಿರುವ ರೆಸಾರ್ಟ್, ಹೋಂ ಸ್ಟೇ ಮಾಲೀಕರು

ಚೇತರಿಸುತ್ತಿರುವ ಪ್ರವಾಸೋದ್ಯಮ, ಪ್ರವಾಸಿಗರನ್ನು ಸ್ವಾಗತಿಸುತ್ತಿರುವ ರೆಸಾರ್ಟ್, ಹೋಂ ಸ್ಟೇ ಮಾಲೀಕರು

Published : Feb 10, 2022, 02:24 PM ISTUpdated : Feb 10, 2022, 05:33 PM IST

ಕೊರೊನಾ ಮಹಾಮಾರಿ ಕಾಟ ಕಳೆದ ಮೂರು ವರ್ಷಗಳಿಂದ ಪದೇ ಪದೇ ವಕ್ಕರಿಸಿದ್ರಿಂದ ಪ್ರವಾಸೋದ್ಯಮಕ್ಕೆ ಭಾರೀ ಏಟು ಬಿದ್ದಿತ್ತು. ಹೋಂ ಸ್ಟೇ, ರೆಸಾರ್ಟ್ ಹಾಗೂ ಹೋಟೆಲ್ ಮಾಲಕರು ಕೂಡಾ ಭಾರೀ ನಷ್ಟದಲ್ಲಿ ದಿನದೂಡುತ್ತಿದ್ದರು. ಆದರೆ, ಇದೀಗ ಕೊಂಚ ಕೊಂಚವೇ ಪ್ರವಾಸೋದ್ಯಮ ಗರಿಗೆದರಲು ಆರಂಭಿಸಿದೆ. 

ಕೊರೊನಾ ಮಹಾಮಾರಿ ಕಾಟ ಕಳೆದ ಮೂರು ವರ್ಷಗಳಿಂದ ಪದೇ ಪದೇ ವಕ್ಕರಿಸಿದ್ರಿಂದ ಪ್ರವಾಸೋದ್ಯಮಕ್ಕೆ ಭಾರೀ ಏಟು ಬಿದ್ದಿತ್ತು. ಹೋಂ ಸ್ಟೇ, ರೆಸಾರ್ಟ್ ಹಾಗೂ ಹೋಟೆಲ್ ಮಾಲಕರು ಕೂಡಾ ಭಾರೀ ನಷ್ಟದಲ್ಲಿ ದಿನದೂಡುತ್ತಿದ್ದರು. ಆದರೆ, ಇದೀಗ ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡಲಾರಂಭಿಸಿದ್ದು, ಕೊಂಚ ಕೊಂಚವೇ ಪ್ರವಾಸೋದ್ಯಮ ಗರಿಗೆದರಲು ಆರಂಭಿಸಿದೆ. ಈ ಕಾರಣದಿಂದ ರೆಸಾರ್ಟ್ ಹಾಗೂ ಹೋಂ ಸ್ಟೇ ಮಾಲಕರು ಇನ್ನಷ್ಟು ಪ್ರವಾಸಿಗರನ್ನು ಸ್ವಾಗತಿಸಲಾರಂಭಿಸಿದ್ದಾರೆ. 

ಕೊರೊನಾ ಮಹಾಮಾರಿ ಪ್ರತಿಯೊಂದು ಕ್ಷೇತ್ರಕ್ಕೂ ಭಾರೀ ಏಟು ನೀಡಿದ್ದು, ಕಳೆದ 3 ವರ್ಷಗಳಿಂದ ಹೋಂ ಸ್ಟೇ, ರೆಸಾರ್ಟ್ ಹಾಗೂ ಹೋಟೆಲ್ ಮಾಲಕರು ಭಾರೀ ನಷ್ಟ ಎದುರಿಸಿದ್ದರು. ತಮ್ಮ ಕಾರ್ಮಿಕರಿಗೂ ವೇತನ ನೀಡದಂತಹ ಸ್ಥಿತಿ ನಿರ್ಮಾಣವಾಗಿತ್ತು. ಈ ಬಾರಿ ಜನವರಿ ತಿಂಗಳಲ್ಲಿ ಮತ್ತೆ ವಕ್ಕರಿಸಿದ್ದ ಕೊರೊನಾ ಪೂರ್ಣ ಲಾಕ್‌ಡೌನ್‌ಗೆ ಕಾರಣವಾಗುತ್ತದೆ ಎಂದು ಭೀತಿ ಸೃಷ್ಠಿಸಿದ್ದರಿಂದ ಮತ್ತೆ ಪ್ರವಾಸಿಗರ ಎಂಟ್ರಿ ಕಡಿಮೆಯಾಗಿತ್ತು. ಆದರೆ, ಇದೀಗ ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗವಾದ ಗೋಕರ್ಣ, ಮುರುಡೇಶ್ವರ, ಕುಮಟಾ, ಕಾರವಾರ ಹಾಗೂ ಮಲೆನಾಡು ಭಾಗವಾದ ಜೊಯಿಡಾ ಮತ್ತು ದಾಂಡೇಲಿಗೆ ಕೊಂಚ ಕೊಂಚವೇ ಪ್ರವಾಸಿಗರು ಭೇಟಿ ನೀಡಲು ಪ್ರಾರಂಭಿಸಿದ್ದಾರೆ.

ರಾಜ್ಯ ಹಾಗೂ ಹೊರ ರಾಜ್ಯದಿಂದ ಆಗಮಿಸಿದ ಪ್ರವಾಸಿಗರು ಬೋಟಿಂಗ್, ರಿವರ್ ರ್ಯಾಫ್ಟಿಂಗ್, ಟ್ರಕ್ಕಿಂಗ್ ಹಾಗೂ ಜಂಗಲ್ ವಾಕ್ ನಡೆಸುತ್ತಾ ಗೆಳೆಯರು ಹಾಗೂ ಕುಟುಂಬದ ಜತೆ ಉತ್ತಮ ಸಮಯ ಕಳೆಯುತ್ತಿದ್ದಾರೆ. ಇದರಿಂದಾಗಿ ನಷ್ಟದಲ್ಲಿದ್ದ ಪ್ರವಾಸೋದ್ಯಮ ಕ್ಷೇತ್ರ ಮತ್ತೆ ರಿಕವರಿಯಾಗುತ್ತಿದ್ದು, ಹೋಂ ಸ್ಟೇ, ರೆಸಾರ್ಟ್ ಮಾಲಕರು ಪ್ರವಾಸಿರನ್ನು ಸ್ವಾಗತಿಸಲಾರಂಭಿಸಿದ್ದಾರೆ. 

ಈ ಹಿಂದೆ ಕೊರೊನಾ ಕಾಟ ಜೋರಿದ್ದರಿಂದ ಉತ್ತರಕನ್ನಡ ಜಿಲ್ಲಾಡಳಿತ ಜಿಲ್ಲೆಗೆ ಆಗಮಿಸುವ ಪ್ರತಿಯೋರ್ವ ಪ್ರವಾಸಿಗರಿಗೂ ಹಾಗೂ ರೆಸಾರ್ಟ್, ಹೋಂ ಸ್ಟೇ ಮಾಲಕರಿಗೂ ಪ್ರತೀ 10ದಿನಕ್ಕೊಮ್ಮೆ ಟೆಸ್ಟಿಂಗ್ ನಡೆಸುವುದಾಗಿ ಸೂಚಿಸಿತ್ತು. ಆದ್ರೆ, ಸರಕಾರ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ತೆರವುಗೊಳಿಸಿದ ಬಳಿಕ ಟೆಸ್ಟಿಂಗ್ ವಿಚಾರವನ್ನೂ ಕೈಬಿಟ್ಟಿತ್ತು. ಸದ್ಯಕ್ಕೆ ಬಾರ್ಡರ್‌ಗಳಲ್ಲಿ ಕೇರಳ, ಮಹಾರಾಷ್ಟ್ರ ಹಾಗೂ ಗೋವಾದಿಂದ ಬರುವಂತಹ ಪ್ರವಾಸಿಗರಿಗೆ ಮಾತ್ರ ಆರ್‌ಟಿಪಿಸಿಆರ್ ರಿಪೋರ್ಟ್ ಕಡ್ಡಾಯ ಅನ್ನೋದು ಮುಂದುವರಿಸಲಾಗಿದೆ. ಈ ಕಾರಣದಿಂದ ವಿವಿಧೆಡೆಯಿಂದ ಪ್ರವಾಸಿಗರು ಇದೀಗ ಜಿಲ್ಲೆಗೆ ಬರಲಾರಂಭಿಸಿದ್ದು, ಇಷ್ಟು ದಿನಗಳ ಪ್ರವಾಸಿಗರಿಲ್ಲದೇ ನಷ್ಟದಿಂದಲೇ ಸಾಗುತ್ತಿದ್ದ ರೆಸಾರ್ಟ್, ಹೋಂ ಸ್ಟೇ ಹಾಗೂ ಹೋಟೆಲ್‌ಗಳು ಇದೀಗ ಮತ್ತೆ ತುಂಬಲಾರಂಭಿಸಿದ್ದು, ಇವುಗಳನ್ನು ನಂಬಿಕೊಂಡಿದ್ದ ಕೆಲವು ಸಣ್ಣ ಸಣ್ಣ ಅಂಗಡಿಗಳು ಕೂಡಾ ಮತ್ತೆ ನಡೆಯಲಾರಂಭಿಸಿವೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more