Uttara Kannda: ತ್ಯಾಜ್ಯ ವಿಲೇವಾರಿ ಘಟಕದಿಂದ ಅಪಾಯದಲ್ಲಿ ರಾಮತೀರ್ಥ ಗುಡ್ಡ

Uttara Kannda: ತ್ಯಾಜ್ಯ ವಿಲೇವಾರಿ ಘಟಕದಿಂದ ಅಪಾಯದಲ್ಲಿ ರಾಮತೀರ್ಥ ಗುಡ್ಡ

Suvarna News   | Asianet News
Published : Dec 08, 2021, 06:00 PM ISTUpdated : Dec 08, 2021, 06:36 PM IST

- ರಾಮತೀರ್ಥ ಗುಡ್ಡದ ಮೇಲಿರುವ ತ್ಯಾಜ್ಯ ವಿಲೇವಾರಿ ಘಟಕ

- ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ತ್ಯಾಜ್ಯ ವಿಲೇವಾರಿ ಘಟಕ

- ಘಟಕದ ಮಲಿನ ನೀರು ಗುಡ್ಡದ ಕೆಳಭಾಗದಲ್ಲಿರುವ ಕೆರೆಗಳಿಗೆ ಸೇರ್ಪಡೆ
 

 ಉತ್ತರಕನ್ನಡ (ಡಿ.08):  ಹೊನ್ನಾವರ (Honnavara) ತಾಲ್ಲೂಕಿನ ರಾಮತೀರ್ಥ ಗುಡ್ಡದ ಮೇಲೆ ಹೊನ್ನಾವರ ಪಟ್ಟಣ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯವನ್ನು (Garbage) ಅನೇಕ ವರ್ಷಗಳಿಂದ ತಂದು ಸುರಿಯಲಾಗುತ್ತಿದೆ. ಇದರೊಂದಿಗೆ ಕಳೆದ ಆರೇಳು ವರ್ಷಗಳಿಂದ ಕುಮಟಾ ಪುರಸಭೆ ಕೂಡಾ ಅಲ್ಲಿನ ತ್ಯಾಜ್ಯವನ್ನು ಇಲ್ಲಿಗೆ ಕಳುಹಿಸಿಕೊಡುತ್ತಿದೆ. 

ಇದರಿಂದಾಗಿ ರಾಮತೀರ್ಥ ಗುಡ್ಡ ಪೂರ್ತಿ ಕಸದ ರಾಶಿಯಿಂದಲೇ ತುಂಬಿ ಹೋಗಿದೆ. ಆದರೆ, ಇಲ್ಲಿನ ಸಮೀಪದಲ್ಲೇ ರಾಮತೀರ್ಥ ಹಾಗೂ ಅರೆಸಾಮಿ ಕೆರೆಯಿದ್ದು, ತ್ಯಾಜ್ಯ ವಿಲೇವಾರಿ ಘಟಕದಿಂದಾಗಿ ಇವುಗಳು ಮಲಿನಗೊಳ್ಳುತ್ತಿವೆ. ತಾಲೂಕಿನ ಉತ್ತರ ಭಾಗ, ಕರ್ಕಿ, ವಂದೂರು, ತೊಪ್ಪಲಕೇರಿ, ದುಗ್ಗೂರು, ರಾಮತೀರ್ಥ ಮತ್ತು ಸುತ್ತಮುತ್ತಲಿನ ಜನರಿಗೆ ಅರೆಸಾಮಿ ಕೆರೆ ಕುಡಿಯುವ ನೀರಿನ ಮೂಲವಾಗಿದ್ದು, ಇದು ತ್ಯಾಜ್ಯ ವಿಲೇವಾರಿ ಘಟಕದ ಕೆಳಭಾಗದಲ್ಲೇ ಇದೆ. ನೀರಿನ ಮೂಲವಾದ ಕೆರೆ ಕೆಳಭಾಗದಲ್ಲಿ ಇರೋದು ತಿಳಿದಿದ್ದರೂ ಮೇಲ್ಭಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗಿದೆ. ಯಾವತ್ತೂ ಕಸದ ರಾಶಿಯಿಂದ ತುಂಬಿಕೊಂಡಿರುವ ಈ ಪ್ರದೇಶದಿಂದ ಮಲಿನ ನೀರು ಕೆಳಭಾಗದ ಅರೆಸಾಮಿ ಕೆರೆಯನ್ನು ಸೇರಿ ಕಲುಷಿತಗೊಳಿಸುತ್ತಿದೆ.  

2018 ರ ಜೂನ್ ತಿಂಗಳಲ್ಲಿ ಹೊನ್ನಾವರ ಮತ್ತು ಬೆಂಗಳೂರು ಮಟ್ಟದ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ತ್ಯಾಜ್ಯ ವಿಲೇವಾರಿ ಘಟಕ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಬಗ್ಗೆ ಮನವರಿಕೆ ಮಾಡಲಾಗಿದೆ. ಸುತ್ತಲಿನ ಆರೇಳು ಹಳ್ಳಿಗಳಿಗೆ ಈ ಕೆರೆ ಜಲಮೂಲವಾಗಿದ್ದು,‌ ಮುಂದಕ್ಕೆ ಕೆರೆ ಸಂಪೂರ್ಣ ಕಲುಷಿತಗೊಳ್ಳುವುದಕ್ಕೂ ಮುನ್ನ ಈಗಲೇ ಅಧಿಕಾರಿಗಳು ಎಚ್ಚೆತ್ತು ಸೂಕ್ತ ಕ್ರಮ ವಹಿಸಬೇಕಿದೆ ಎಂದು ಆಗ್ರಹಿಸುತ್ತಿದ್ದಾರೆ ಸ್ಥಳೀಯರು. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more