Uttara Kannda: ತ್ಯಾಜ್ಯ ವಿಲೇವಾರಿ ಘಟಕದಿಂದ ಅಪಾಯದಲ್ಲಿ ರಾಮತೀರ್ಥ ಗುಡ್ಡ

Uttara Kannda: ತ್ಯಾಜ್ಯ ವಿಲೇವಾರಿ ಘಟಕದಿಂದ ಅಪಾಯದಲ್ಲಿ ರಾಮತೀರ್ಥ ಗುಡ್ಡ

Suvarna News   | Asianet News
Published : Dec 08, 2021, 06:00 PM ISTUpdated : Dec 08, 2021, 06:36 PM IST

- ರಾಮತೀರ್ಥ ಗುಡ್ಡದ ಮೇಲಿರುವ ತ್ಯಾಜ್ಯ ವಿಲೇವಾರಿ ಘಟಕ

- ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ತ್ಯಾಜ್ಯ ವಿಲೇವಾರಿ ಘಟಕ

- ಘಟಕದ ಮಲಿನ ನೀರು ಗುಡ್ಡದ ಕೆಳಭಾಗದಲ್ಲಿರುವ ಕೆರೆಗಳಿಗೆ ಸೇರ್ಪಡೆ
 

 ಉತ್ತರಕನ್ನಡ (ಡಿ.08):  ಹೊನ್ನಾವರ (Honnavara) ತಾಲ್ಲೂಕಿನ ರಾಮತೀರ್ಥ ಗುಡ್ಡದ ಮೇಲೆ ಹೊನ್ನಾವರ ಪಟ್ಟಣ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯವನ್ನು (Garbage) ಅನೇಕ ವರ್ಷಗಳಿಂದ ತಂದು ಸುರಿಯಲಾಗುತ್ತಿದೆ. ಇದರೊಂದಿಗೆ ಕಳೆದ ಆರೇಳು ವರ್ಷಗಳಿಂದ ಕುಮಟಾ ಪುರಸಭೆ ಕೂಡಾ ಅಲ್ಲಿನ ತ್ಯಾಜ್ಯವನ್ನು ಇಲ್ಲಿಗೆ ಕಳುಹಿಸಿಕೊಡುತ್ತಿದೆ. 

ಇದರಿಂದಾಗಿ ರಾಮತೀರ್ಥ ಗುಡ್ಡ ಪೂರ್ತಿ ಕಸದ ರಾಶಿಯಿಂದಲೇ ತುಂಬಿ ಹೋಗಿದೆ. ಆದರೆ, ಇಲ್ಲಿನ ಸಮೀಪದಲ್ಲೇ ರಾಮತೀರ್ಥ ಹಾಗೂ ಅರೆಸಾಮಿ ಕೆರೆಯಿದ್ದು, ತ್ಯಾಜ್ಯ ವಿಲೇವಾರಿ ಘಟಕದಿಂದಾಗಿ ಇವುಗಳು ಮಲಿನಗೊಳ್ಳುತ್ತಿವೆ. ತಾಲೂಕಿನ ಉತ್ತರ ಭಾಗ, ಕರ್ಕಿ, ವಂದೂರು, ತೊಪ್ಪಲಕೇರಿ, ದುಗ್ಗೂರು, ರಾಮತೀರ್ಥ ಮತ್ತು ಸುತ್ತಮುತ್ತಲಿನ ಜನರಿಗೆ ಅರೆಸಾಮಿ ಕೆರೆ ಕುಡಿಯುವ ನೀರಿನ ಮೂಲವಾಗಿದ್ದು, ಇದು ತ್ಯಾಜ್ಯ ವಿಲೇವಾರಿ ಘಟಕದ ಕೆಳಭಾಗದಲ್ಲೇ ಇದೆ. ನೀರಿನ ಮೂಲವಾದ ಕೆರೆ ಕೆಳಭಾಗದಲ್ಲಿ ಇರೋದು ತಿಳಿದಿದ್ದರೂ ಮೇಲ್ಭಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗಿದೆ. ಯಾವತ್ತೂ ಕಸದ ರಾಶಿಯಿಂದ ತುಂಬಿಕೊಂಡಿರುವ ಈ ಪ್ರದೇಶದಿಂದ ಮಲಿನ ನೀರು ಕೆಳಭಾಗದ ಅರೆಸಾಮಿ ಕೆರೆಯನ್ನು ಸೇರಿ ಕಲುಷಿತಗೊಳಿಸುತ್ತಿದೆ.  

2018 ರ ಜೂನ್ ತಿಂಗಳಲ್ಲಿ ಹೊನ್ನಾವರ ಮತ್ತು ಬೆಂಗಳೂರು ಮಟ್ಟದ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ತ್ಯಾಜ್ಯ ವಿಲೇವಾರಿ ಘಟಕ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಬಗ್ಗೆ ಮನವರಿಕೆ ಮಾಡಲಾಗಿದೆ. ಸುತ್ತಲಿನ ಆರೇಳು ಹಳ್ಳಿಗಳಿಗೆ ಈ ಕೆರೆ ಜಲಮೂಲವಾಗಿದ್ದು,‌ ಮುಂದಕ್ಕೆ ಕೆರೆ ಸಂಪೂರ್ಣ ಕಲುಷಿತಗೊಳ್ಳುವುದಕ್ಕೂ ಮುನ್ನ ಈಗಲೇ ಅಧಿಕಾರಿಗಳು ಎಚ್ಚೆತ್ತು ಸೂಕ್ತ ಕ್ರಮ ವಹಿಸಬೇಕಿದೆ ಎಂದು ಆಗ್ರಹಿಸುತ್ತಿದ್ದಾರೆ ಸ್ಥಳೀಯರು. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more