Uttara Kannda: ತ್ಯಾಜ್ಯ ವಿಲೇವಾರಿ ಘಟಕದಿಂದ ಅಪಾಯದಲ್ಲಿ ರಾಮತೀರ್ಥ ಗುಡ್ಡ

Uttara Kannda: ತ್ಯಾಜ್ಯ ವಿಲೇವಾರಿ ಘಟಕದಿಂದ ಅಪಾಯದಲ್ಲಿ ರಾಮತೀರ್ಥ ಗುಡ್ಡ

Published : Dec 08, 2021, 06:00 PM ISTUpdated : Dec 08, 2021, 06:36 PM IST

- ರಾಮತೀರ್ಥ ಗುಡ್ಡದ ಮೇಲಿರುವ ತ್ಯಾಜ್ಯ ವಿಲೇವಾರಿ ಘಟಕ

- ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ತ್ಯಾಜ್ಯ ವಿಲೇವಾರಿ ಘಟಕ

- ಘಟಕದ ಮಲಿನ ನೀರು ಗುಡ್ಡದ ಕೆಳಭಾಗದಲ್ಲಿರುವ ಕೆರೆಗಳಿಗೆ ಸೇರ್ಪಡೆ
 

 ಉತ್ತರಕನ್ನಡ (ಡಿ.08):  ಹೊನ್ನಾವರ (Honnavara) ತಾಲ್ಲೂಕಿನ ರಾಮತೀರ್ಥ ಗುಡ್ಡದ ಮೇಲೆ ಹೊನ್ನಾವರ ಪಟ್ಟಣ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯವನ್ನು (Garbage) ಅನೇಕ ವರ್ಷಗಳಿಂದ ತಂದು ಸುರಿಯಲಾಗುತ್ತಿದೆ. ಇದರೊಂದಿಗೆ ಕಳೆದ ಆರೇಳು ವರ್ಷಗಳಿಂದ ಕುಮಟಾ ಪುರಸಭೆ ಕೂಡಾ ಅಲ್ಲಿನ ತ್ಯಾಜ್ಯವನ್ನು ಇಲ್ಲಿಗೆ ಕಳುಹಿಸಿಕೊಡುತ್ತಿದೆ. 

ಇದರಿಂದಾಗಿ ರಾಮತೀರ್ಥ ಗುಡ್ಡ ಪೂರ್ತಿ ಕಸದ ರಾಶಿಯಿಂದಲೇ ತುಂಬಿ ಹೋಗಿದೆ. ಆದರೆ, ಇಲ್ಲಿನ ಸಮೀಪದಲ್ಲೇ ರಾಮತೀರ್ಥ ಹಾಗೂ ಅರೆಸಾಮಿ ಕೆರೆಯಿದ್ದು, ತ್ಯಾಜ್ಯ ವಿಲೇವಾರಿ ಘಟಕದಿಂದಾಗಿ ಇವುಗಳು ಮಲಿನಗೊಳ್ಳುತ್ತಿವೆ. ತಾಲೂಕಿನ ಉತ್ತರ ಭಾಗ, ಕರ್ಕಿ, ವಂದೂರು, ತೊಪ್ಪಲಕೇರಿ, ದುಗ್ಗೂರು, ರಾಮತೀರ್ಥ ಮತ್ತು ಸುತ್ತಮುತ್ತಲಿನ ಜನರಿಗೆ ಅರೆಸಾಮಿ ಕೆರೆ ಕುಡಿಯುವ ನೀರಿನ ಮೂಲವಾಗಿದ್ದು, ಇದು ತ್ಯಾಜ್ಯ ವಿಲೇವಾರಿ ಘಟಕದ ಕೆಳಭಾಗದಲ್ಲೇ ಇದೆ. ನೀರಿನ ಮೂಲವಾದ ಕೆರೆ ಕೆಳಭಾಗದಲ್ಲಿ ಇರೋದು ತಿಳಿದಿದ್ದರೂ ಮೇಲ್ಭಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗಿದೆ. ಯಾವತ್ತೂ ಕಸದ ರಾಶಿಯಿಂದ ತುಂಬಿಕೊಂಡಿರುವ ಈ ಪ್ರದೇಶದಿಂದ ಮಲಿನ ನೀರು ಕೆಳಭಾಗದ ಅರೆಸಾಮಿ ಕೆರೆಯನ್ನು ಸೇರಿ ಕಲುಷಿತಗೊಳಿಸುತ್ತಿದೆ.  

2018 ರ ಜೂನ್ ತಿಂಗಳಲ್ಲಿ ಹೊನ್ನಾವರ ಮತ್ತು ಬೆಂಗಳೂರು ಮಟ್ಟದ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ತ್ಯಾಜ್ಯ ವಿಲೇವಾರಿ ಘಟಕ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಬಗ್ಗೆ ಮನವರಿಕೆ ಮಾಡಲಾಗಿದೆ. ಸುತ್ತಲಿನ ಆರೇಳು ಹಳ್ಳಿಗಳಿಗೆ ಈ ಕೆರೆ ಜಲಮೂಲವಾಗಿದ್ದು,‌ ಮುಂದಕ್ಕೆ ಕೆರೆ ಸಂಪೂರ್ಣ ಕಲುಷಿತಗೊಳ್ಳುವುದಕ್ಕೂ ಮುನ್ನ ಈಗಲೇ ಅಧಿಕಾರಿಗಳು ಎಚ್ಚೆತ್ತು ಸೂಕ್ತ ಕ್ರಮ ವಹಿಸಬೇಕಿದೆ ಎಂದು ಆಗ್ರಹಿಸುತ್ತಿದ್ದಾರೆ ಸ್ಥಳೀಯರು. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more