Uttara Kannda: ತ್ಯಾಜ್ಯ ವಿಲೇವಾರಿ ಘಟಕದಿಂದ ಅಪಾಯದಲ್ಲಿ ರಾಮತೀರ್ಥ ಗುಡ್ಡ

Uttara Kannda: ತ್ಯಾಜ್ಯ ವಿಲೇವಾರಿ ಘಟಕದಿಂದ ಅಪಾಯದಲ್ಲಿ ರಾಮತೀರ್ಥ ಗುಡ್ಡ

Suvarna News   | Asianet News
Published : Dec 08, 2021, 06:00 PM ISTUpdated : Dec 08, 2021, 06:36 PM IST

- ರಾಮತೀರ್ಥ ಗುಡ್ಡದ ಮೇಲಿರುವ ತ್ಯಾಜ್ಯ ವಿಲೇವಾರಿ ಘಟಕ

- ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ತ್ಯಾಜ್ಯ ವಿಲೇವಾರಿ ಘಟಕ

- ಘಟಕದ ಮಲಿನ ನೀರು ಗುಡ್ಡದ ಕೆಳಭಾಗದಲ್ಲಿರುವ ಕೆರೆಗಳಿಗೆ ಸೇರ್ಪಡೆ
 

 ಉತ್ತರಕನ್ನಡ (ಡಿ.08):  ಹೊನ್ನಾವರ (Honnavara) ತಾಲ್ಲೂಕಿನ ರಾಮತೀರ್ಥ ಗುಡ್ಡದ ಮೇಲೆ ಹೊನ್ನಾವರ ಪಟ್ಟಣ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯವನ್ನು (Garbage) ಅನೇಕ ವರ್ಷಗಳಿಂದ ತಂದು ಸುರಿಯಲಾಗುತ್ತಿದೆ. ಇದರೊಂದಿಗೆ ಕಳೆದ ಆರೇಳು ವರ್ಷಗಳಿಂದ ಕುಮಟಾ ಪುರಸಭೆ ಕೂಡಾ ಅಲ್ಲಿನ ತ್ಯಾಜ್ಯವನ್ನು ಇಲ್ಲಿಗೆ ಕಳುಹಿಸಿಕೊಡುತ್ತಿದೆ. 

ಇದರಿಂದಾಗಿ ರಾಮತೀರ್ಥ ಗುಡ್ಡ ಪೂರ್ತಿ ಕಸದ ರಾಶಿಯಿಂದಲೇ ತುಂಬಿ ಹೋಗಿದೆ. ಆದರೆ, ಇಲ್ಲಿನ ಸಮೀಪದಲ್ಲೇ ರಾಮತೀರ್ಥ ಹಾಗೂ ಅರೆಸಾಮಿ ಕೆರೆಯಿದ್ದು, ತ್ಯಾಜ್ಯ ವಿಲೇವಾರಿ ಘಟಕದಿಂದಾಗಿ ಇವುಗಳು ಮಲಿನಗೊಳ್ಳುತ್ತಿವೆ. ತಾಲೂಕಿನ ಉತ್ತರ ಭಾಗ, ಕರ್ಕಿ, ವಂದೂರು, ತೊಪ್ಪಲಕೇರಿ, ದುಗ್ಗೂರು, ರಾಮತೀರ್ಥ ಮತ್ತು ಸುತ್ತಮುತ್ತಲಿನ ಜನರಿಗೆ ಅರೆಸಾಮಿ ಕೆರೆ ಕುಡಿಯುವ ನೀರಿನ ಮೂಲವಾಗಿದ್ದು, ಇದು ತ್ಯಾಜ್ಯ ವಿಲೇವಾರಿ ಘಟಕದ ಕೆಳಭಾಗದಲ್ಲೇ ಇದೆ. ನೀರಿನ ಮೂಲವಾದ ಕೆರೆ ಕೆಳಭಾಗದಲ್ಲಿ ಇರೋದು ತಿಳಿದಿದ್ದರೂ ಮೇಲ್ಭಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗಿದೆ. ಯಾವತ್ತೂ ಕಸದ ರಾಶಿಯಿಂದ ತುಂಬಿಕೊಂಡಿರುವ ಈ ಪ್ರದೇಶದಿಂದ ಮಲಿನ ನೀರು ಕೆಳಭಾಗದ ಅರೆಸಾಮಿ ಕೆರೆಯನ್ನು ಸೇರಿ ಕಲುಷಿತಗೊಳಿಸುತ್ತಿದೆ.  

2018 ರ ಜೂನ್ ತಿಂಗಳಲ್ಲಿ ಹೊನ್ನಾವರ ಮತ್ತು ಬೆಂಗಳೂರು ಮಟ್ಟದ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ತ್ಯಾಜ್ಯ ವಿಲೇವಾರಿ ಘಟಕ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಬಗ್ಗೆ ಮನವರಿಕೆ ಮಾಡಲಾಗಿದೆ. ಸುತ್ತಲಿನ ಆರೇಳು ಹಳ್ಳಿಗಳಿಗೆ ಈ ಕೆರೆ ಜಲಮೂಲವಾಗಿದ್ದು,‌ ಮುಂದಕ್ಕೆ ಕೆರೆ ಸಂಪೂರ್ಣ ಕಲುಷಿತಗೊಳ್ಳುವುದಕ್ಕೂ ಮುನ್ನ ಈಗಲೇ ಅಧಿಕಾರಿಗಳು ಎಚ್ಚೆತ್ತು ಸೂಕ್ತ ಕ್ರಮ ವಹಿಸಬೇಕಿದೆ ಎಂದು ಆಗ್ರಹಿಸುತ್ತಿದ್ದಾರೆ ಸ್ಥಳೀಯರು. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more