Oct 3, 2019, 10:23 PM IST
ಬೆಂಗಳೂರು (ಅ. 03) ಉತ್ತರ ಕರ್ನಾಟಕ ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ತಾಳಿರುವ ತಾರತಮ್ಯ ಧೋರಣೆ ವಿರೋಧಿಸಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಬೆಂಗಳೂರಿನಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿತು. ರಾಜ್ಯ ಪೊಲೀಸ್ ನಿವೃತ್ತ ಮಹಾನಿರ್ದೇಶಕ ಶಂಕರ್ ಬಿದರಿ ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡಿದರು.