ಅಕ್ರಮಗಳ ಸರದಾರನ ವಿಚಾರದಲ್ಲಿ ಸಿದ್ದು ದಾರಿ ತಪ್ಪಿದ್ದು ಹೇಗೆ ? 'ಟಗರು'ರಾಮಯ್ಯಗೆ ಇಂದು 'ನಾಗ'ಕಂಟಕ..!

ಅಕ್ರಮಗಳ ಸರದಾರನ ವಿಚಾರದಲ್ಲಿ ಸಿದ್ದು ದಾರಿ ತಪ್ಪಿದ್ದು ಹೇಗೆ ? 'ಟಗರು'ರಾಮಯ್ಯಗೆ ಇಂದು 'ನಾಗ'ಕಂಟಕ..!

Published : Jul 20, 2024, 04:50 PM IST

ಗಣಿ ಅಕ್ರಮದ ವಿರುದ್ಧ ಅಂದು ಸಿದ್ದು ಘರ್ಜನೆ.. ಬಳ್ಳಾರಿ ಪಾದಯಾತ್ರೆ..!
ವಿಧಾನಸಭೆಯಲ್ಲಿ ಪಟ್ಟು ಹಾಕಿ ತೋಳು ತಟ್ಟಿದ್ದರು 'ಪೈಲ್ವಾನ್'ರಾಮಯ್ಯ!
ಅಂದು ಗಣಿ ಲೂಟಿಕೋರರ ವಿರುದ್ಧ ತೊಡೆ ತಟ್ಟಿದ್ದರು ಸಿಎಂ ಸಿದ್ದರಾಮಯ್ಯ!

ಅಂದಿನ ಒಂದು ನಿರ್ಧಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಅದೇ ಇಂದು ತಿರುಗುಬಾಣವಾಗಿದೆ. ಅಂದು ತಲೆಯ ಮೇಲೆ ಹೊತ್ತು ಮೆರೆಸಿದವರೇ ಇಂದು ಸಿದ್ದರಾಮಯ್ಯನವರ ತಲೆಗೆ ಹದ್ದಾಗಿ ಕುಕ್ಕುತ್ತಿದ್ದಾರೆ. ಅಕ್ರಮದ ಕೋಟೆಯನ್ನೇ ನಡುಗಿಸಿದ್ದ ಸಿದ್ದರಾಮಯ್ಯನವರಿಗೀಗ ಅದೇ ಅಕ್ರಮದ ಸರದಾರನಿಂದ ಕಳಂಕ ಬಂದಿದೆ. 14 ವರ್ಷಗಳ ಹಿಂದೆ ಯಾರ ವಿರುದ್ಧ ಸಿದ್ದು ವೀರಾವೇಶದಿಂದ ಅಬ್ಬರಿಸಿದ್ರೋ, ಅದೇ ವ್ಯಕ್ತಿಯಿಂದ ಈಗ ಸಿದ್ದು ಸರ್ಕಾರಕ್ಕೆ ಕಪ್ಪುಚುಕ್ಕೆಯಾಗಿದ್ದಾನೆ. ಇದು ಸಿದ್ದರಾಮಯ್ಯನವರು ಸಾಕಿದ ಗಿಣಿಯೇ ಹದ್ದಾಗಿ ಕುಕ್ಕಿದ ಕಥೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾತ್ರಿ ಕಂಡ ಬಾವಿಗೆ ಹಗಲು ಬಿದ್ದ ಕಥೆಯಿದು. ಕಾಂಗ್ರೆಸ್ ಸರ್ಕಾರ (Congress government)ಇವತ್ತು ವಾಲ್ಮೀಕಿ ಹಗರಣದ (Valmiki corporation scam) ಚಕ್ರವ್ಯೂಹದಲ್ಲಿ ಸಿಲುಕಿ ವಿಲ ವಿಲ ಅಂತ ಒದ್ದಾಡ್ತಾ ಇದೆ ಅಂದ್ರೆ ಅದಕ್ಕೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ ಅದೊಂದು ಪ್ರಮಾದ. ಅವತ್ತು ರಾಜ್ಯದ ಶಕ್ತಿಕೇಂದ್ರ ಅಕ್ಷರಶಃ ರಣರಂಗವಾಗಿ ಬಿಟ್ಟಿತ್ತು. ಬಳ್ಳಾರಿಯ ರೆಡ್ಡಿ ಸಹೋದರರು ಮತ್ತು ಆಗಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ನಡೆದಿದ್ದ ರಣರೋಚಕ ಸಂಘರ್ಷವದು. ಅಕ್ರಮ ಗಣಿಗಾರಿಕೆ ಬಗ್ಗೆ ಸಿದ್ದರಾಮಯ್ಯ ಮಾತಾಡ್ತಾ ಇದ್ದಾಗ, ಶುರುವಾಗಿದ್ದ ಮಾತಿನ ಚಕಮಕಿ ಕೈ ಕೈ ಮಿಲಾಯಿಸುವಷ್ಟರ ಮಟ್ಟಿಗೆ ಹೋಗಿತ್ತು. ತಾಕತ್ತಿದ್ರೆ ಬಳ್ಳಾರಿಗೆ ಬನ್ನಿ, ನಿಮ್ಮನ್ನು ನೋಡ್ಕೋತೀವಿ ಅಂತ ರೆಡ್ಡಿ ಬ್ರದರ್ಸ್ ಸವಾಲ್ ಹಾಕಿದ್ರೆ, ವಿಧಾನಸಭೆಯಲ್ಲೇ ತೋಳು ತಟ್ಟಿ ಅಬ್ಬರಿಸಿದ್ದರು 'ಪೈಲ್ವಾನ್'ರಾಮಯ್ಯ.

ಇದನ್ನೂ ವೀಕ್ಷಿಸಿ:  ಶಿರೂರು ಗುಡ್ಡ ಕುಸಿತ ಪ್ರಕರಣ: ಸ್ಥಳಕ್ಕೆ ಹೆಚ್‌ಡಿಕೆ ಭೇಟಿ.. ಮಾಧ್ಯಮಗಳಿಗೆ ಜಿಲ್ಲಾಡಳಿತದಿಂದ ತಡೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more