ಅಕ್ರಮಗಳ ಸರದಾರನ ವಿಚಾರದಲ್ಲಿ ಸಿದ್ದು ದಾರಿ ತಪ್ಪಿದ್ದು ಹೇಗೆ ? 'ಟಗರು'ರಾಮಯ್ಯಗೆ ಇಂದು 'ನಾಗ'ಕಂಟಕ..!

ಅಕ್ರಮಗಳ ಸರದಾರನ ವಿಚಾರದಲ್ಲಿ ಸಿದ್ದು ದಾರಿ ತಪ್ಪಿದ್ದು ಹೇಗೆ ? 'ಟಗರು'ರಾಮಯ್ಯಗೆ ಇಂದು 'ನಾಗ'ಕಂಟಕ..!

Published : Jul 20, 2024, 04:50 PM IST

ಗಣಿ ಅಕ್ರಮದ ವಿರುದ್ಧ ಅಂದು ಸಿದ್ದು ಘರ್ಜನೆ.. ಬಳ್ಳಾರಿ ಪಾದಯಾತ್ರೆ..!
ವಿಧಾನಸಭೆಯಲ್ಲಿ ಪಟ್ಟು ಹಾಕಿ ತೋಳು ತಟ್ಟಿದ್ದರು 'ಪೈಲ್ವಾನ್'ರಾಮಯ್ಯ!
ಅಂದು ಗಣಿ ಲೂಟಿಕೋರರ ವಿರುದ್ಧ ತೊಡೆ ತಟ್ಟಿದ್ದರು ಸಿಎಂ ಸಿದ್ದರಾಮಯ್ಯ!

ಅಂದಿನ ಒಂದು ನಿರ್ಧಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಅದೇ ಇಂದು ತಿರುಗುಬಾಣವಾಗಿದೆ. ಅಂದು ತಲೆಯ ಮೇಲೆ ಹೊತ್ತು ಮೆರೆಸಿದವರೇ ಇಂದು ಸಿದ್ದರಾಮಯ್ಯನವರ ತಲೆಗೆ ಹದ್ದಾಗಿ ಕುಕ್ಕುತ್ತಿದ್ದಾರೆ. ಅಕ್ರಮದ ಕೋಟೆಯನ್ನೇ ನಡುಗಿಸಿದ್ದ ಸಿದ್ದರಾಮಯ್ಯನವರಿಗೀಗ ಅದೇ ಅಕ್ರಮದ ಸರದಾರನಿಂದ ಕಳಂಕ ಬಂದಿದೆ. 14 ವರ್ಷಗಳ ಹಿಂದೆ ಯಾರ ವಿರುದ್ಧ ಸಿದ್ದು ವೀರಾವೇಶದಿಂದ ಅಬ್ಬರಿಸಿದ್ರೋ, ಅದೇ ವ್ಯಕ್ತಿಯಿಂದ ಈಗ ಸಿದ್ದು ಸರ್ಕಾರಕ್ಕೆ ಕಪ್ಪುಚುಕ್ಕೆಯಾಗಿದ್ದಾನೆ. ಇದು ಸಿದ್ದರಾಮಯ್ಯನವರು ಸಾಕಿದ ಗಿಣಿಯೇ ಹದ್ದಾಗಿ ಕುಕ್ಕಿದ ಕಥೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾತ್ರಿ ಕಂಡ ಬಾವಿಗೆ ಹಗಲು ಬಿದ್ದ ಕಥೆಯಿದು. ಕಾಂಗ್ರೆಸ್ ಸರ್ಕಾರ (Congress government)ಇವತ್ತು ವಾಲ್ಮೀಕಿ ಹಗರಣದ (Valmiki corporation scam) ಚಕ್ರವ್ಯೂಹದಲ್ಲಿ ಸಿಲುಕಿ ವಿಲ ವಿಲ ಅಂತ ಒದ್ದಾಡ್ತಾ ಇದೆ ಅಂದ್ರೆ ಅದಕ್ಕೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ ಅದೊಂದು ಪ್ರಮಾದ. ಅವತ್ತು ರಾಜ್ಯದ ಶಕ್ತಿಕೇಂದ್ರ ಅಕ್ಷರಶಃ ರಣರಂಗವಾಗಿ ಬಿಟ್ಟಿತ್ತು. ಬಳ್ಳಾರಿಯ ರೆಡ್ಡಿ ಸಹೋದರರು ಮತ್ತು ಆಗಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ನಡೆದಿದ್ದ ರಣರೋಚಕ ಸಂಘರ್ಷವದು. ಅಕ್ರಮ ಗಣಿಗಾರಿಕೆ ಬಗ್ಗೆ ಸಿದ್ದರಾಮಯ್ಯ ಮಾತಾಡ್ತಾ ಇದ್ದಾಗ, ಶುರುವಾಗಿದ್ದ ಮಾತಿನ ಚಕಮಕಿ ಕೈ ಕೈ ಮಿಲಾಯಿಸುವಷ್ಟರ ಮಟ್ಟಿಗೆ ಹೋಗಿತ್ತು. ತಾಕತ್ತಿದ್ರೆ ಬಳ್ಳಾರಿಗೆ ಬನ್ನಿ, ನಿಮ್ಮನ್ನು ನೋಡ್ಕೋತೀವಿ ಅಂತ ರೆಡ್ಡಿ ಬ್ರದರ್ಸ್ ಸವಾಲ್ ಹಾಕಿದ್ರೆ, ವಿಧಾನಸಭೆಯಲ್ಲೇ ತೋಳು ತಟ್ಟಿ ಅಬ್ಬರಿಸಿದ್ದರು 'ಪೈಲ್ವಾನ್'ರಾಮಯ್ಯ.

ಇದನ್ನೂ ವೀಕ್ಷಿಸಿ:  ಶಿರೂರು ಗುಡ್ಡ ಕುಸಿತ ಪ್ರಕರಣ: ಸ್ಥಳಕ್ಕೆ ಹೆಚ್‌ಡಿಕೆ ಭೇಟಿ.. ಮಾಧ್ಯಮಗಳಿಗೆ ಜಿಲ್ಲಾಡಳಿತದಿಂದ ತಡೆ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more