ಅಕ್ರಮಗಳ ಸರದಾರನ ವಿಚಾರದಲ್ಲಿ ಸಿದ್ದು ದಾರಿ ತಪ್ಪಿದ್ದು ಹೇಗೆ ? 'ಟಗರು'ರಾಮಯ್ಯಗೆ ಇಂದು 'ನಾಗ'ಕಂಟಕ..!

ಅಕ್ರಮಗಳ ಸರದಾರನ ವಿಚಾರದಲ್ಲಿ ಸಿದ್ದು ದಾರಿ ತಪ್ಪಿದ್ದು ಹೇಗೆ ? 'ಟಗರು'ರಾಮಯ್ಯಗೆ ಇಂದು 'ನಾಗ'ಕಂಟಕ..!

Published : Jul 20, 2024, 04:50 PM IST

ಗಣಿ ಅಕ್ರಮದ ವಿರುದ್ಧ ಅಂದು ಸಿದ್ದು ಘರ್ಜನೆ.. ಬಳ್ಳಾರಿ ಪಾದಯಾತ್ರೆ..!
ವಿಧಾನಸಭೆಯಲ್ಲಿ ಪಟ್ಟು ಹಾಕಿ ತೋಳು ತಟ್ಟಿದ್ದರು 'ಪೈಲ್ವಾನ್'ರಾಮಯ್ಯ!
ಅಂದು ಗಣಿ ಲೂಟಿಕೋರರ ವಿರುದ್ಧ ತೊಡೆ ತಟ್ಟಿದ್ದರು ಸಿಎಂ ಸಿದ್ದರಾಮಯ್ಯ!

ಅಂದಿನ ಒಂದು ನಿರ್ಧಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಅದೇ ಇಂದು ತಿರುಗುಬಾಣವಾಗಿದೆ. ಅಂದು ತಲೆಯ ಮೇಲೆ ಹೊತ್ತು ಮೆರೆಸಿದವರೇ ಇಂದು ಸಿದ್ದರಾಮಯ್ಯನವರ ತಲೆಗೆ ಹದ್ದಾಗಿ ಕುಕ್ಕುತ್ತಿದ್ದಾರೆ. ಅಕ್ರಮದ ಕೋಟೆಯನ್ನೇ ನಡುಗಿಸಿದ್ದ ಸಿದ್ದರಾಮಯ್ಯನವರಿಗೀಗ ಅದೇ ಅಕ್ರಮದ ಸರದಾರನಿಂದ ಕಳಂಕ ಬಂದಿದೆ. 14 ವರ್ಷಗಳ ಹಿಂದೆ ಯಾರ ವಿರುದ್ಧ ಸಿದ್ದು ವೀರಾವೇಶದಿಂದ ಅಬ್ಬರಿಸಿದ್ರೋ, ಅದೇ ವ್ಯಕ್ತಿಯಿಂದ ಈಗ ಸಿದ್ದು ಸರ್ಕಾರಕ್ಕೆ ಕಪ್ಪುಚುಕ್ಕೆಯಾಗಿದ್ದಾನೆ. ಇದು ಸಿದ್ದರಾಮಯ್ಯನವರು ಸಾಕಿದ ಗಿಣಿಯೇ ಹದ್ದಾಗಿ ಕುಕ್ಕಿದ ಕಥೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾತ್ರಿ ಕಂಡ ಬಾವಿಗೆ ಹಗಲು ಬಿದ್ದ ಕಥೆಯಿದು. ಕಾಂಗ್ರೆಸ್ ಸರ್ಕಾರ (Congress government)ಇವತ್ತು ವಾಲ್ಮೀಕಿ ಹಗರಣದ (Valmiki corporation scam) ಚಕ್ರವ್ಯೂಹದಲ್ಲಿ ಸಿಲುಕಿ ವಿಲ ವಿಲ ಅಂತ ಒದ್ದಾಡ್ತಾ ಇದೆ ಅಂದ್ರೆ ಅದಕ್ಕೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ ಅದೊಂದು ಪ್ರಮಾದ. ಅವತ್ತು ರಾಜ್ಯದ ಶಕ್ತಿಕೇಂದ್ರ ಅಕ್ಷರಶಃ ರಣರಂಗವಾಗಿ ಬಿಟ್ಟಿತ್ತು. ಬಳ್ಳಾರಿಯ ರೆಡ್ಡಿ ಸಹೋದರರು ಮತ್ತು ಆಗಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ನಡೆದಿದ್ದ ರಣರೋಚಕ ಸಂಘರ್ಷವದು. ಅಕ್ರಮ ಗಣಿಗಾರಿಕೆ ಬಗ್ಗೆ ಸಿದ್ದರಾಮಯ್ಯ ಮಾತಾಡ್ತಾ ಇದ್ದಾಗ, ಶುರುವಾಗಿದ್ದ ಮಾತಿನ ಚಕಮಕಿ ಕೈ ಕೈ ಮಿಲಾಯಿಸುವಷ್ಟರ ಮಟ್ಟಿಗೆ ಹೋಗಿತ್ತು. ತಾಕತ್ತಿದ್ರೆ ಬಳ್ಳಾರಿಗೆ ಬನ್ನಿ, ನಿಮ್ಮನ್ನು ನೋಡ್ಕೋತೀವಿ ಅಂತ ರೆಡ್ಡಿ ಬ್ರದರ್ಸ್ ಸವಾಲ್ ಹಾಕಿದ್ರೆ, ವಿಧಾನಸಭೆಯಲ್ಲೇ ತೋಳು ತಟ್ಟಿ ಅಬ್ಬರಿಸಿದ್ದರು 'ಪೈಲ್ವಾನ್'ರಾಮಯ್ಯ.

ಇದನ್ನೂ ವೀಕ್ಷಿಸಿ:  ಶಿರೂರು ಗುಡ್ಡ ಕುಸಿತ ಪ್ರಕರಣ: ಸ್ಥಳಕ್ಕೆ ಹೆಚ್‌ಡಿಕೆ ಭೇಟಿ.. ಮಾಧ್ಯಮಗಳಿಗೆ ಜಿಲ್ಲಾಡಳಿತದಿಂದ ತಡೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more