ಅಕ್ರಮಗಳ ಸರದಾರನ ವಿಚಾರದಲ್ಲಿ ಸಿದ್ದು ದಾರಿ ತಪ್ಪಿದ್ದು ಹೇಗೆ ? 'ಟಗರು'ರಾಮಯ್ಯಗೆ ಇಂದು 'ನಾಗ'ಕಂಟಕ..!

ಅಕ್ರಮಗಳ ಸರದಾರನ ವಿಚಾರದಲ್ಲಿ ಸಿದ್ದು ದಾರಿ ತಪ್ಪಿದ್ದು ಹೇಗೆ ? 'ಟಗರು'ರಾಮಯ್ಯಗೆ ಇಂದು 'ನಾಗ'ಕಂಟಕ..!

Published : Jul 20, 2024, 04:50 PM IST

ಗಣಿ ಅಕ್ರಮದ ವಿರುದ್ಧ ಅಂದು ಸಿದ್ದು ಘರ್ಜನೆ.. ಬಳ್ಳಾರಿ ಪಾದಯಾತ್ರೆ..!
ವಿಧಾನಸಭೆಯಲ್ಲಿ ಪಟ್ಟು ಹಾಕಿ ತೋಳು ತಟ್ಟಿದ್ದರು 'ಪೈಲ್ವಾನ್'ರಾಮಯ್ಯ!
ಅಂದು ಗಣಿ ಲೂಟಿಕೋರರ ವಿರುದ್ಧ ತೊಡೆ ತಟ್ಟಿದ್ದರು ಸಿಎಂ ಸಿದ್ದರಾಮಯ್ಯ!

ಅಂದಿನ ಒಂದು ನಿರ್ಧಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಅದೇ ಇಂದು ತಿರುಗುಬಾಣವಾಗಿದೆ. ಅಂದು ತಲೆಯ ಮೇಲೆ ಹೊತ್ತು ಮೆರೆಸಿದವರೇ ಇಂದು ಸಿದ್ದರಾಮಯ್ಯನವರ ತಲೆಗೆ ಹದ್ದಾಗಿ ಕುಕ್ಕುತ್ತಿದ್ದಾರೆ. ಅಕ್ರಮದ ಕೋಟೆಯನ್ನೇ ನಡುಗಿಸಿದ್ದ ಸಿದ್ದರಾಮಯ್ಯನವರಿಗೀಗ ಅದೇ ಅಕ್ರಮದ ಸರದಾರನಿಂದ ಕಳಂಕ ಬಂದಿದೆ. 14 ವರ್ಷಗಳ ಹಿಂದೆ ಯಾರ ವಿರುದ್ಧ ಸಿದ್ದು ವೀರಾವೇಶದಿಂದ ಅಬ್ಬರಿಸಿದ್ರೋ, ಅದೇ ವ್ಯಕ್ತಿಯಿಂದ ಈಗ ಸಿದ್ದು ಸರ್ಕಾರಕ್ಕೆ ಕಪ್ಪುಚುಕ್ಕೆಯಾಗಿದ್ದಾನೆ. ಇದು ಸಿದ್ದರಾಮಯ್ಯನವರು ಸಾಕಿದ ಗಿಣಿಯೇ ಹದ್ದಾಗಿ ಕುಕ್ಕಿದ ಕಥೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾತ್ರಿ ಕಂಡ ಬಾವಿಗೆ ಹಗಲು ಬಿದ್ದ ಕಥೆಯಿದು. ಕಾಂಗ್ರೆಸ್ ಸರ್ಕಾರ (Congress government)ಇವತ್ತು ವಾಲ್ಮೀಕಿ ಹಗರಣದ (Valmiki corporation scam) ಚಕ್ರವ್ಯೂಹದಲ್ಲಿ ಸಿಲುಕಿ ವಿಲ ವಿಲ ಅಂತ ಒದ್ದಾಡ್ತಾ ಇದೆ ಅಂದ್ರೆ ಅದಕ್ಕೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ ಅದೊಂದು ಪ್ರಮಾದ. ಅವತ್ತು ರಾಜ್ಯದ ಶಕ್ತಿಕೇಂದ್ರ ಅಕ್ಷರಶಃ ರಣರಂಗವಾಗಿ ಬಿಟ್ಟಿತ್ತು. ಬಳ್ಳಾರಿಯ ರೆಡ್ಡಿ ಸಹೋದರರು ಮತ್ತು ಆಗಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ನಡೆದಿದ್ದ ರಣರೋಚಕ ಸಂಘರ್ಷವದು. ಅಕ್ರಮ ಗಣಿಗಾರಿಕೆ ಬಗ್ಗೆ ಸಿದ್ದರಾಮಯ್ಯ ಮಾತಾಡ್ತಾ ಇದ್ದಾಗ, ಶುರುವಾಗಿದ್ದ ಮಾತಿನ ಚಕಮಕಿ ಕೈ ಕೈ ಮಿಲಾಯಿಸುವಷ್ಟರ ಮಟ್ಟಿಗೆ ಹೋಗಿತ್ತು. ತಾಕತ್ತಿದ್ರೆ ಬಳ್ಳಾರಿಗೆ ಬನ್ನಿ, ನಿಮ್ಮನ್ನು ನೋಡ್ಕೋತೀವಿ ಅಂತ ರೆಡ್ಡಿ ಬ್ರದರ್ಸ್ ಸವಾಲ್ ಹಾಕಿದ್ರೆ, ವಿಧಾನಸಭೆಯಲ್ಲೇ ತೋಳು ತಟ್ಟಿ ಅಬ್ಬರಿಸಿದ್ದರು 'ಪೈಲ್ವಾನ್'ರಾಮಯ್ಯ.

ಇದನ್ನೂ ವೀಕ್ಷಿಸಿ:  ಶಿರೂರು ಗುಡ್ಡ ಕುಸಿತ ಪ್ರಕರಣ: ಸ್ಥಳಕ್ಕೆ ಹೆಚ್‌ಡಿಕೆ ಭೇಟಿ.. ಮಾಧ್ಯಮಗಳಿಗೆ ಜಿಲ್ಲಾಡಳಿತದಿಂದ ತಡೆ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more