ವಾಲ್ಮೀಕಿ ನಿಗಮ ಹಗರಣ: ಹಣದ ವರ್ಗಾವಣೆಯ ಮೂಲ ಹುಡುಕುತ್ತಿರುವ ತನಿಖಾ ತಂಡ!

ವಾಲ್ಮೀಕಿ ನಿಗಮ ಹಗರಣ: ಹಣದ ವರ್ಗಾವಣೆಯ ಮೂಲ ಹುಡುಕುತ್ತಿರುವ ತನಿಖಾ ತಂಡ!

Published : Jul 17, 2024, 01:24 PM ISTUpdated : Jul 17, 2024, 01:25 PM IST

ನೆಕ್ಕಂಟಿ ನಾಗರಾಜ್ ಸಂಬಂಧಿ ಎನ್ನಲಾದ ವೆಂಕಟರಾವ್ ರೆಡ್ಡಿ
ಒಂದೇ ಕುಟುಂಬದ ‌ನಾಲ್ವರಿಗೆ ಹಣ ಜಮೆ ಮಾಡಿರುವ ನಾಗರಾಜ್
98 ಲಕ್ಷ ರೂಪಾಯಿ ವರ್ಗಾವಣೆ ಮಾಡಿರುವ ನೆಕ್ಕಂಟಿ ನಾಗರಾಜ್
 

ವಾಲ್ಮೀಕಿ ನಿಗಮ ಹಗರಣದ(Valmiki Corporation scam ) ಹಣದ ವರ್ಗಾವಣೆಯ ಮೂಲವನ್ನು ತನಿಖಾ ತಂಡ ಹುಡುಕುತ್ತಿದೆ. ವಾಲ್ಮೀಕಿ ಹಗರಣದ ಗ್ಯಾಂಗ್‌ನಿಂದ ರೈತನ(Farmer) ಖಾತೆಗೆ ಹಣ ವರ್ಗಾವಣೆಯಾಗಿದೆ ಎನ್ನಲಾಗ್ತಿದೆ. ನಾಗೇಂದ್ರನ ಆಪ್ತನ ಅಕೌಂಟ್‌ನಿಂದಲೇ ಹಣ ವರ್ಗಾವಣೆಯಾಗಿದೆಯಂತೆ. ನೆಕ್ಕಂಟಿ‌ ನಾಗರಾಜ್ ಅಕೌಂಟ್ ಮೂಲಕವೇ ಬೇರೆ ಅಕೌಂಟಿಗೆ ಹಣ ಜಮೆಯಾಗಿದ್ದು, ಸಿಂಧನೂರು ತಾ. ಕೋನಾ ವೆಂಕಟರಾವ್ ರೆಡ್ಡಿ ಹಾಗೂ ಇಬ್ಬರು ಮಕ್ಕಳ ಅಕೌಂಟ್‌ಗೆ ಹಣ ವರ್ಗಾವಣೆಯಾಗಿದೆ. ಓರ್ವ ಮೊಮ್ಮಗನ ಅಕೌಂಟಿಗೆ ಅಕ್ರಮ ಹಣ ವರ್ಗಾವಣೆಯಾಗಿದ್ದು(Illegal money transfer), ಬೂದಿಹಾಳ ಕ್ಯಾಂಪ್ ನಿವಾಸಿ ಕೋನಾ ವೆಂಕಟರಾವ್ ರೆಡ್ಡಿ, ವೆಂಕಟರಾವ್ ರೆಡ್ಡಿಯ ಇಬ್ಬರು ಪುತ್ರಿಯರ  ಅಕೌಂಟ್‌ಗೆ ಹಣ ವರ್ಗಾವಣೆಯಾಗಿದೆ. ವೆಂಕಟರಾವ್ ರೆಡ್ಡಿ ಮೊಮ್ಮಗನ ಅಕೌಂಟಿಗೂ ಲಕ್ಷ ಲಕ್ಷ ಹಣ ಹೋಗಿದೆಯಂತೆ. ಲಕ್ಕಂಸಾನಿ ಲಕ್ಷ್ಮಿ, ರತ್ನಕುಮಾರಿ , ಮೊಮ್ಮಗ‌ ಸುನೀಲ್ , ಕೋನಾ ವೆಂಕಟರಾವ್ ರೆಡ್ಡಿ ಅಕೌಂಟಿಗೆ 12 ಲಕ್ಷ ರೂ. ಜಮೆಯಾಗಿದೆಯಂತೆ. ಪುತ್ರಿ ಲಕ್ಕಂಸಾನಿ ಲಕ್ಷ್ಮಿ ಅಕೌಂಟಿಗೆ 25 ಲಕ್ಷ ರೂ. ಮತ್ತೋರ್ವ ಪುತ್ರಿ ರತ್ನಕುಮಾರಿ ಅಕೌಂಟಿಗೆ  25 ಲಕ್ಷ ರೂ. ಮೊಮ್ಮಗ ಸುನೀಲ್ ಅಲಿಯಾಸ್ ‌ಸಂದೀಪ್ ಅಕೌಂಟಿಗೆ 36 ಲಕ್ಷ ಜಮೆಯಾಗಿದೆ. ಬೂದಿಹಾಳ ಕ್ಯಾಂಪ್ ನ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಖಾತೆಗೆ ಹಣ ವರ್ಗಾವಣೆಯಾಗಿದ್ದು, ನಾಲ್ವರ ಅಕೌಂಟ್‌ಗಳನ್ನೂ ಸದ್ಯಕ್ಕೆ ಸೀಜ್ ಮಾಡಿರುವ ಅಧಿಕಾರಿಗಳು. ಅಕೌಂಟ್ ಸೀಜ್‌ಗೆ ಬೆಂಗಳೂರಿನಿಂದಲೇ ಸಿಐಡಿ , ಸಿಬಿಐ ಬ್ಯಾಂಕ್‌ಗೆ ಸೂಚನೆ ನೀಡಿದೆ.

ಇದನ್ನೂ ವೀಕ್ಷಿಸಿ:  ಅಪೆಕ್ಸ್ ಬ್ಯಾಂಕ್‌ನಲ್ಲಿ ಸಾಲ ನೀಡುವಲ್ಲಿ ಗೋಲ್‌ಮಾಲ್..? ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬ ಸಚಿವನಿಗೆ ಸಂಕಷ್ಟ !

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more