ವಾಲ್ಮೀಕಿ ನಿಗಮ ಹಗರಣ: ಹಣದ ವರ್ಗಾವಣೆಯ ಮೂಲ ಹುಡುಕುತ್ತಿರುವ ತನಿಖಾ ತಂಡ!

ವಾಲ್ಮೀಕಿ ನಿಗಮ ಹಗರಣ: ಹಣದ ವರ್ಗಾವಣೆಯ ಮೂಲ ಹುಡುಕುತ್ತಿರುವ ತನಿಖಾ ತಂಡ!

Published : Jul 17, 2024, 01:24 PM ISTUpdated : Jul 17, 2024, 01:25 PM IST

ನೆಕ್ಕಂಟಿ ನಾಗರಾಜ್ ಸಂಬಂಧಿ ಎನ್ನಲಾದ ವೆಂಕಟರಾವ್ ರೆಡ್ಡಿ
ಒಂದೇ ಕುಟುಂಬದ ‌ನಾಲ್ವರಿಗೆ ಹಣ ಜಮೆ ಮಾಡಿರುವ ನಾಗರಾಜ್
98 ಲಕ್ಷ ರೂಪಾಯಿ ವರ್ಗಾವಣೆ ಮಾಡಿರುವ ನೆಕ್ಕಂಟಿ ನಾಗರಾಜ್
 

ವಾಲ್ಮೀಕಿ ನಿಗಮ ಹಗರಣದ(Valmiki Corporation scam ) ಹಣದ ವರ್ಗಾವಣೆಯ ಮೂಲವನ್ನು ತನಿಖಾ ತಂಡ ಹುಡುಕುತ್ತಿದೆ. ವಾಲ್ಮೀಕಿ ಹಗರಣದ ಗ್ಯಾಂಗ್‌ನಿಂದ ರೈತನ(Farmer) ಖಾತೆಗೆ ಹಣ ವರ್ಗಾವಣೆಯಾಗಿದೆ ಎನ್ನಲಾಗ್ತಿದೆ. ನಾಗೇಂದ್ರನ ಆಪ್ತನ ಅಕೌಂಟ್‌ನಿಂದಲೇ ಹಣ ವರ್ಗಾವಣೆಯಾಗಿದೆಯಂತೆ. ನೆಕ್ಕಂಟಿ‌ ನಾಗರಾಜ್ ಅಕೌಂಟ್ ಮೂಲಕವೇ ಬೇರೆ ಅಕೌಂಟಿಗೆ ಹಣ ಜಮೆಯಾಗಿದ್ದು, ಸಿಂಧನೂರು ತಾ. ಕೋನಾ ವೆಂಕಟರಾವ್ ರೆಡ್ಡಿ ಹಾಗೂ ಇಬ್ಬರು ಮಕ್ಕಳ ಅಕೌಂಟ್‌ಗೆ ಹಣ ವರ್ಗಾವಣೆಯಾಗಿದೆ. ಓರ್ವ ಮೊಮ್ಮಗನ ಅಕೌಂಟಿಗೆ ಅಕ್ರಮ ಹಣ ವರ್ಗಾವಣೆಯಾಗಿದ್ದು(Illegal money transfer), ಬೂದಿಹಾಳ ಕ್ಯಾಂಪ್ ನಿವಾಸಿ ಕೋನಾ ವೆಂಕಟರಾವ್ ರೆಡ್ಡಿ, ವೆಂಕಟರಾವ್ ರೆಡ್ಡಿಯ ಇಬ್ಬರು ಪುತ್ರಿಯರ  ಅಕೌಂಟ್‌ಗೆ ಹಣ ವರ್ಗಾವಣೆಯಾಗಿದೆ. ವೆಂಕಟರಾವ್ ರೆಡ್ಡಿ ಮೊಮ್ಮಗನ ಅಕೌಂಟಿಗೂ ಲಕ್ಷ ಲಕ್ಷ ಹಣ ಹೋಗಿದೆಯಂತೆ. ಲಕ್ಕಂಸಾನಿ ಲಕ್ಷ್ಮಿ, ರತ್ನಕುಮಾರಿ , ಮೊಮ್ಮಗ‌ ಸುನೀಲ್ , ಕೋನಾ ವೆಂಕಟರಾವ್ ರೆಡ್ಡಿ ಅಕೌಂಟಿಗೆ 12 ಲಕ್ಷ ರೂ. ಜಮೆಯಾಗಿದೆಯಂತೆ. ಪುತ್ರಿ ಲಕ್ಕಂಸಾನಿ ಲಕ್ಷ್ಮಿ ಅಕೌಂಟಿಗೆ 25 ಲಕ್ಷ ರೂ. ಮತ್ತೋರ್ವ ಪುತ್ರಿ ರತ್ನಕುಮಾರಿ ಅಕೌಂಟಿಗೆ  25 ಲಕ್ಷ ರೂ. ಮೊಮ್ಮಗ ಸುನೀಲ್ ಅಲಿಯಾಸ್ ‌ಸಂದೀಪ್ ಅಕೌಂಟಿಗೆ 36 ಲಕ್ಷ ಜಮೆಯಾಗಿದೆ. ಬೂದಿಹಾಳ ಕ್ಯಾಂಪ್ ನ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಖಾತೆಗೆ ಹಣ ವರ್ಗಾವಣೆಯಾಗಿದ್ದು, ನಾಲ್ವರ ಅಕೌಂಟ್‌ಗಳನ್ನೂ ಸದ್ಯಕ್ಕೆ ಸೀಜ್ ಮಾಡಿರುವ ಅಧಿಕಾರಿಗಳು. ಅಕೌಂಟ್ ಸೀಜ್‌ಗೆ ಬೆಂಗಳೂರಿನಿಂದಲೇ ಸಿಐಡಿ , ಸಿಬಿಐ ಬ್ಯಾಂಕ್‌ಗೆ ಸೂಚನೆ ನೀಡಿದೆ.

ಇದನ್ನೂ ವೀಕ್ಷಿಸಿ:  ಅಪೆಕ್ಸ್ ಬ್ಯಾಂಕ್‌ನಲ್ಲಿ ಸಾಲ ನೀಡುವಲ್ಲಿ ಗೋಲ್‌ಮಾಲ್..? ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬ ಸಚಿವನಿಗೆ ಸಂಕಷ್ಟ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more