ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆ ನೋಡಿಯೂ ತಪ್ಪು ಮಾಡಿದ್ರಾ ಸಿದ್ದು..?'ನಾಗ'ಕೋಟೆಯಲ್ಲೇ ಬಂಧಿಯಾದ ನಾಗೇಂದ್ರ..!

ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆ ನೋಡಿಯೂ ತಪ್ಪು ಮಾಡಿದ್ರಾ ಸಿದ್ದು..?'ನಾಗ'ಕೋಟೆಯಲ್ಲೇ ಬಂಧಿಯಾದ ನಾಗೇಂದ್ರ..!

Published : Jul 13, 2024, 05:29 PM IST

ನಾಗೇಂದ್ರ ವಿರುದ್ಧ 10 ಸಾಕ್ಷಿ.. ದದ್ದಲ್‌ಗೆ ಮುಳುವಾಯ್ತಾ ಭಕ್ಷೀಸು..?
"ನಾಗ"ಕೋಟೆಯಲ್ಲಿ ಅಡಗಿದ್ದ ರಹಸ್ಯ ಭೇದಿಸಿದ ಇಡಿ ಅಧಿಕಾರಿಗಳು..!
ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆಯ ಮತ್ತೊಂದು ಅಧ್ಯಾಯ ಅನಾವರಣ..!
 

ಬಳ್ಳಾರಿ ಗಣಿಧಣಿಗಳ ಅಕ್ರಮ, ಅಹಂಕಾರದ ವಿರುದ್ಧ ತೋಳು ತಟ್ಟಿದ್ದ ಸಿದ್ದರಾಮಯ್ಯ (Siddaramaiah), ಬಳ್ಳಾರಿಗೆ ಪಾದಯಾದ್ರೆ ಹೋಗಿ, ಗಣಿಧಣಿಗಳ ಅಟ್ಟಹಾಸವನ್ನು ಮಟ್ಟ ಹಾಕಿದ್ದುಈಗ ಇತಿಹಾಸ. ಯಾವ ಅಕ್ರಮದ ವಿರುದ್ಧ ಸಿದ್ದರಾಮಯ್ಯ ಸಿಡಿದೆದ್ದು ನಿಂತಿದ್ರೋ, ಯಾವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ರೋ, ಅದೇ ಅಕ್ರಮಗಳ ಸರದಾರರಲ್ಲಿ ಒಬ್ಬನನ್ನು ಪಕ್ಷಕ್ಕೆ ಸೇರಿಸಿಕೊಂಡು, ಮಂತ್ರಿಪಟ್ಟ ಕಟ್ಟಿದ್ದ ಸಿದ್ದರಾಮಯ್ಯನವರಿಗೀಗ ಅದೇ ತಿರುಗುಬಾಣವಾಗಿ ಬಿಟ್ಟಿದೆ. ಅಕ್ರಮ ಗಣಿಗಾರಿಕೆ, ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅವತ್ತು ಜೈಲಿಗೆ ಹೋಗಿದ್ದ ಮಾಜಿ ಸಚಿವ ನಾಗೇಂದ್ರ(Nagendra), ಈಗ ಮತ್ತೊಂದು ಅಕ್ರಮದಲ್ಲಿ ಅರೆಸ್ಟ್ ಆಗೋ ಮೂಲಕ ಸಿದ್ದರಾಮಯ್ಯ ಸರ್ಕಾರಕ್ಕೆ ದೊಡ್ಡ ಮುಜುಗರ ತಂದಿದ್ದಾರೆ. ಮಹರ್ಷಿ ವಾಲ್ಮೀಕಿ ನಿಗಮದಲ್ಲಿ(Valmiki Nigam Scam) ನಡೆದಿರೋ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವ್ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬೇಲೇಕೇರಿ ಅದಿರು ಕೇಸ್‌ನಲ್ಲಿ(Belekeri Illegal Iron Ore Export Case) 10 ವರ್ಷಗಳ ಹಿಂದೆ ಜೈಲು ಪಾಲಾಗಿದ್ದ ನಾಗೇಂದ್ರ ಮತ್ತೆ ಜೈಲು ಸೇರುವ ಹಾದಿಯಲ್ಲಿದ್ದಾರೆ. ವಾಲ್ಮೀಕಿ ನಿಗಮದ ಅಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ನಾಗೇಂದ್ರ, ನಿಗಮದ ಅಧ್ಯಕ್ಷ-ಕಾಂಗ್ರೆಸ್ ಶಾಸಕ ಬಸನವನಗೌಡ ದದ್ದಲ್ ಸೇರಿದಂತೆ ಅಧಿಕಾರಿಗಳ ನಿವಾಸಗಳ ಮೇಲೆ ಬುಧವಾರ ಇ.ಡಿ ದಾಳಿ ನಡೆದಿತ್ತು. ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಮನೆ, ಬೆಂಗಳೂರಿನಲ್ಲಿ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. 

ಇದನ್ನೂ ವೀಕ್ಷಿಸಿ:  ಕನ್ನಡದ ಮನೆಮನೆಗಳಲ್ಲೂ ನಗು ಉಕ್ಕಿಸಿದ್ದ ವರಲಕ್ಷ್ಮಿ! ಎಲ್ಲೆಲ್ಲೂ ಮಾರ್ದನಿಸುತ್ತಲೇ ಇರಲಿದೆ ಅಪರ್ಣಾ ಕಲರವ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?