ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆ ನೋಡಿಯೂ ತಪ್ಪು ಮಾಡಿದ್ರಾ ಸಿದ್ದು..?'ನಾಗ'ಕೋಟೆಯಲ್ಲೇ ಬಂಧಿಯಾದ ನಾಗೇಂದ್ರ..!

ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆ ನೋಡಿಯೂ ತಪ್ಪು ಮಾಡಿದ್ರಾ ಸಿದ್ದು..?'ನಾಗ'ಕೋಟೆಯಲ್ಲೇ ಬಂಧಿಯಾದ ನಾಗೇಂದ್ರ..!

Published : Jul 13, 2024, 05:29 PM IST

ನಾಗೇಂದ್ರ ವಿರುದ್ಧ 10 ಸಾಕ್ಷಿ.. ದದ್ದಲ್‌ಗೆ ಮುಳುವಾಯ್ತಾ ಭಕ್ಷೀಸು..?
"ನಾಗ"ಕೋಟೆಯಲ್ಲಿ ಅಡಗಿದ್ದ ರಹಸ್ಯ ಭೇದಿಸಿದ ಇಡಿ ಅಧಿಕಾರಿಗಳು..!
ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆಯ ಮತ್ತೊಂದು ಅಧ್ಯಾಯ ಅನಾವರಣ..!
 

ಬಳ್ಳಾರಿ ಗಣಿಧಣಿಗಳ ಅಕ್ರಮ, ಅಹಂಕಾರದ ವಿರುದ್ಧ ತೋಳು ತಟ್ಟಿದ್ದ ಸಿದ್ದರಾಮಯ್ಯ (Siddaramaiah), ಬಳ್ಳಾರಿಗೆ ಪಾದಯಾದ್ರೆ ಹೋಗಿ, ಗಣಿಧಣಿಗಳ ಅಟ್ಟಹಾಸವನ್ನು ಮಟ್ಟ ಹಾಕಿದ್ದುಈಗ ಇತಿಹಾಸ. ಯಾವ ಅಕ್ರಮದ ವಿರುದ್ಧ ಸಿದ್ದರಾಮಯ್ಯ ಸಿಡಿದೆದ್ದು ನಿಂತಿದ್ರೋ, ಯಾವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ರೋ, ಅದೇ ಅಕ್ರಮಗಳ ಸರದಾರರಲ್ಲಿ ಒಬ್ಬನನ್ನು ಪಕ್ಷಕ್ಕೆ ಸೇರಿಸಿಕೊಂಡು, ಮಂತ್ರಿಪಟ್ಟ ಕಟ್ಟಿದ್ದ ಸಿದ್ದರಾಮಯ್ಯನವರಿಗೀಗ ಅದೇ ತಿರುಗುಬಾಣವಾಗಿ ಬಿಟ್ಟಿದೆ. ಅಕ್ರಮ ಗಣಿಗಾರಿಕೆ, ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅವತ್ತು ಜೈಲಿಗೆ ಹೋಗಿದ್ದ ಮಾಜಿ ಸಚಿವ ನಾಗೇಂದ್ರ(Nagendra), ಈಗ ಮತ್ತೊಂದು ಅಕ್ರಮದಲ್ಲಿ ಅರೆಸ್ಟ್ ಆಗೋ ಮೂಲಕ ಸಿದ್ದರಾಮಯ್ಯ ಸರ್ಕಾರಕ್ಕೆ ದೊಡ್ಡ ಮುಜುಗರ ತಂದಿದ್ದಾರೆ. ಮಹರ್ಷಿ ವಾಲ್ಮೀಕಿ ನಿಗಮದಲ್ಲಿ(Valmiki Nigam Scam) ನಡೆದಿರೋ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವ್ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬೇಲೇಕೇರಿ ಅದಿರು ಕೇಸ್‌ನಲ್ಲಿ(Belekeri Illegal Iron Ore Export Case) 10 ವರ್ಷಗಳ ಹಿಂದೆ ಜೈಲು ಪಾಲಾಗಿದ್ದ ನಾಗೇಂದ್ರ ಮತ್ತೆ ಜೈಲು ಸೇರುವ ಹಾದಿಯಲ್ಲಿದ್ದಾರೆ. ವಾಲ್ಮೀಕಿ ನಿಗಮದ ಅಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ನಾಗೇಂದ್ರ, ನಿಗಮದ ಅಧ್ಯಕ್ಷ-ಕಾಂಗ್ರೆಸ್ ಶಾಸಕ ಬಸನವನಗೌಡ ದದ್ದಲ್ ಸೇರಿದಂತೆ ಅಧಿಕಾರಿಗಳ ನಿವಾಸಗಳ ಮೇಲೆ ಬುಧವಾರ ಇ.ಡಿ ದಾಳಿ ನಡೆದಿತ್ತು. ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಮನೆ, ಬೆಂಗಳೂರಿನಲ್ಲಿ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. 

ಇದನ್ನೂ ವೀಕ್ಷಿಸಿ:  ಕನ್ನಡದ ಮನೆಮನೆಗಳಲ್ಲೂ ನಗು ಉಕ್ಕಿಸಿದ್ದ ವರಲಕ್ಷ್ಮಿ! ಎಲ್ಲೆಲ್ಲೂ ಮಾರ್ದನಿಸುತ್ತಲೇ ಇರಲಿದೆ ಅಪರ್ಣಾ ಕಲರವ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!