ಮದ್ಯದ ದರ ಹೆಚ್ಚಳ ಬೇಡ, ಮಾಡಿದ್ರೆ ಉಗ್ರ ಹೋರಾಟ ಮಾಡುತ್ತೇವೆ: ವೆಂಕಟೇಶ್‌ ಗೌಡ

ಮದ್ಯದ ದರ ಹೆಚ್ಚಳ ಬೇಡ, ಮಾಡಿದ್ರೆ ಉಗ್ರ ಹೋರಾಟ ಮಾಡುತ್ತೇವೆ: ವೆಂಕಟೇಶ್‌ ಗೌಡ

Published : Jul 09, 2023, 10:32 AM IST

ಮದ್ಯದ ದರವನ್ನು ಹೆಚ್ಚಳ ಮಾಡಬಾರದು. ಒಂದು ವೇಳೆ ಮಾಡಿದ್ರೆ, ಹೋರಾಟವನ್ನು ಮಾಡುತ್ತೇವೆ ಎಂದು ಕರ್ನಾಟಕ ಮದ್ಯಪಾನ ಪ್ರಿಯರ ಸಂಘದ ಅಧ್ಯಕ್ಷ ವೆಂಕಟೇಶ್‌ ಗೌಡ ಎಚ್ಚರಿಕೆಯನ್ನು ನೀಡಿದ್ದಾರೆ.
 

ಹಾಸನ: ಬಜೆಟ್‌ನಲ್ಲಿ ಮದ್ಯದ ಬೆಲೆಯನ್ನು(liquor price hike) ಹೆಚ್ಚಳ ಮಾಡಿರುವುದಕ್ಕೆ ಮದ್ಯಪ್ರಿಯರು ಸಿಡಿದೆದ್ದಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಮದ್ಯಪ್ರಿಯರ ಸಂಘದಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೇ ಒಂದು ವೇಳೆ ದರ ಹೆಚ್ಚಳ ಮಾಡಿದ್ರೆ ಹೋರಾಟವನ್ನು ಮಾಡುವುದಾಗಿ ಕರ್ನಾಟಕ ಮದ್ಯಪಾನ ಪ್ರಿಯರ ಸಂಘ ಎಚ್ಚರಿಕೆಯನ್ನು ನೀಡಿದೆ. ಬಜೆಟ್‌ನಲ್ಲಿ ಅಬಕಾರಿ ಸುಂಕವನ್ನು ಶೇ.20ರಷ್ಟು ಹೆಚ್ಚಳ ಮಾಡಲಾಗಿದೆ. ಸಂಘದ ರಾಜ್ಯಾಧ್ಯಕ್ಷ ವೆಂಕಟೇಶ್‌ ಗೌಡ(Venkatesh Gowda) ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ. ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು, ಅಲ್ಲದೇ ಈಗಿನ ದರದಲ್ಲಿ ಶೇ.10ರಷ್ಟು ಕಡಿಮೆ ಮಾಡಬೇಕು ಎಂದು ವೆಂಕಟೇಶ್‌ ಗೌಡ ಒತ್ತಾಯಿಸಿದ್ದಾರೆ. ಪ್ರತಿ ಬಜೆಟ್‌ನಲ್ಲಿ(Budget) ಮದ್ಯದ ದರ ಹೆಚ್ಚಳ ಮಾಡಿದ್ರೆ ನಾವು ಏನು ಮಾಡಬೇಕು. ಒಂದು ವೇಳೆ ದರ ಹೆಚ್ಚಳವಾದ್ರೆ ರಾಜ್ಯಾದ್ಯಂತ ಹೋರಾಟ(protest) ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ ಸರ್ಕಾರದಿಂದ ಪ್ರಮುಖ ಆರೋಪಿ ರಕ್ಷಣೆ ಮಾಡಲಾಗುತ್ತಿದೆ: ಅಭಯ್ ಪಾಟೀಲ್‌ ಆರೋಪ

  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!