Hijab Row Vijayapura: ಹಿಜಾಬ್‌ ತೆಗೆಯಲು ನಕಾರ: 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ವಾಪಸ್!

Hijab Row Vijayapura: ಹಿಜಾಬ್‌ ತೆಗೆಯಲು ನಕಾರ: 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ವಾಪಸ್!

Published : Feb 17, 2022, 11:13 AM IST

*ಹೈಕೋರ್ಟ್‌ ಆದೇಶಕ್ಕೂ ಮಣಿಯದ ಹೋರಾಟಗಾರರು
*ಶಾಲೆ ಬಳಿಕ ಈಗ ಕಾಲೇಜಲ್ಲಿ ಹಿಜಾಬ್‌ ಪ್ರತಿಭಟನೆ ತೀವ್ರ
*ವಿಜಯಪುರ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಹಿಜಾಬ್‌ ವಿವಾದ

ವಿಜಯಪುರ (ಫೆ. 17): ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಹಿಜಾಬ್‌ ಗದ್ದಲ ಹೆಚ್ಚಾಗುತ್ತಿದ್ದು, ಶಾಲೆಗಳ ಬಳಿಕ ಇದೀಗ ಬುಧವಾರದಿಂದ ಪ್ರಾರಂಭವಾದ ಕಾಲೇಜುಗಳಿಗೂ ವಿಸ್ತರಿಸಿದೆ. ಇದೀಗೆ ವಿಜಯಪುರದ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ಹಿಜಾಬ್‌ ವಿವಾದ ಮುಂದುವರೆದಿದ್ದು ತರಗತಿಯಲ್ಲಿ ಹಿಜಾಬ್‌ ತೆಗೆಯಳು ವಿದ್ಯಾರ್ಥಿನಿಯರು ನಿರಾಕರಿಸಿದ್ದಾರೆ. ಈ ಬೆನ್ನಲ್ಲೇ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗದೆ ಮನೆಗೆ ತೆರಳಿದ್ದಾರೆ. 

ಇದನ್ನೂ ಓದಿ: Hijab Row: ಹೆಣ್ಮಕ್ಕಳಿಗೆ ಶ್ರೇಷ್ಠ ಸ್ಥಾನ ಇರುವಲ್ಲಿ ಹಿಜಾಬ್ ಅಗತ್ಯವೇನಿದೆ? ವಿವಾದ ಸಂಬಂಧ ಪ್ರಜ್ಞಾ ಠಾಕೂರ್

"ನಮಗೆ ಹೀಜಾಬ್‌ ಮುಖ್ಯ: ಮುಂದಿನ ಪೀಳಿಗೆಗೆ ಬೇಕು, ಹಿಜಾಬ್‌ ತೆಗೆದು ಕ್ಲಾಸ್‌ಗೆ ಹೋಗಿ ಅಂತಾರೆ ನಾವು ಹೋಗಲ್ಲ" ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಸಮವಸ್ತ್ರ ನಿಯಮವಿರುವ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಗೆ-ತೊಡುಗೆಗಳನ್ನು ಧರಿಸುವಂತಿಲ್ಲ ಎಂಬ ಹೈಕೋರ್ಟಿನ ಕಡ್ಡಾಯ ಆದೇಶವನ್ನು ಉಲ್ಲಂಘಿಸಿದ ಪರಿಣಾಮ ಶಾಲಾ-ಕಾಲೇಜುಗಳಲ್ಲಿ ಗೊಂದಲವೇರ್ಪಟ್ಟಿದೆ. 

ಶಿಕ್ಷಕರು, ಪೊಲೀಸರು ಮಾತ್ರವಲ್ಲದೆ ಸ್ಥಳಕ್ಕೆ ತಹಸೀಲ್ದಾರ್‌, ಜಿಲ್ಲಾಧಿಕಾರಿ, ಎಸ್ಪಿಗಳೇ ತೆರಳಿ ತಿಳಿವಳಿಕೆ ಹೇಳಿದರೂ ಕ್ಯಾರೇ ಎನ್ನದ ಕೆಲ ವಿದ್ಯಾರ್ಥಿನಿಯರು ಪ್ರಾಣ ಬಿಟ್ಟರೂ ಹಿಜಾಬ್‌ ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಬೀದರ್‌, ಬಳ್ಳಾರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಗದಗ, ತುಮಕೂರು ಸೇರಿದಂತೆ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬುಧವಾರ ಹಿಜಾಬ್‌ಪರ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದ್ದಾರೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more