Hijab Row Vijayapura: ಹಿಜಾಬ್‌ ತೆಗೆಯಲು ನಕಾರ: 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ವಾಪಸ್!

Hijab Row Vijayapura: ಹಿಜಾಬ್‌ ತೆಗೆಯಲು ನಕಾರ: 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ವಾಪಸ್!

Published : Feb 17, 2022, 11:13 AM IST

*ಹೈಕೋರ್ಟ್‌ ಆದೇಶಕ್ಕೂ ಮಣಿಯದ ಹೋರಾಟಗಾರರು
*ಶಾಲೆ ಬಳಿಕ ಈಗ ಕಾಲೇಜಲ್ಲಿ ಹಿಜಾಬ್‌ ಪ್ರತಿಭಟನೆ ತೀವ್ರ
*ವಿಜಯಪುರ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಹಿಜಾಬ್‌ ವಿವಾದ

ವಿಜಯಪುರ (ಫೆ. 17): ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಹಿಜಾಬ್‌ ಗದ್ದಲ ಹೆಚ್ಚಾಗುತ್ತಿದ್ದು, ಶಾಲೆಗಳ ಬಳಿಕ ಇದೀಗ ಬುಧವಾರದಿಂದ ಪ್ರಾರಂಭವಾದ ಕಾಲೇಜುಗಳಿಗೂ ವಿಸ್ತರಿಸಿದೆ. ಇದೀಗೆ ವಿಜಯಪುರದ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ಹಿಜಾಬ್‌ ವಿವಾದ ಮುಂದುವರೆದಿದ್ದು ತರಗತಿಯಲ್ಲಿ ಹಿಜಾಬ್‌ ತೆಗೆಯಳು ವಿದ್ಯಾರ್ಥಿನಿಯರು ನಿರಾಕರಿಸಿದ್ದಾರೆ. ಈ ಬೆನ್ನಲ್ಲೇ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗದೆ ಮನೆಗೆ ತೆರಳಿದ್ದಾರೆ. 

ಇದನ್ನೂ ಓದಿ: Hijab Row: ಹೆಣ್ಮಕ್ಕಳಿಗೆ ಶ್ರೇಷ್ಠ ಸ್ಥಾನ ಇರುವಲ್ಲಿ ಹಿಜಾಬ್ ಅಗತ್ಯವೇನಿದೆ? ವಿವಾದ ಸಂಬಂಧ ಪ್ರಜ್ಞಾ ಠಾಕೂರ್

"ನಮಗೆ ಹೀಜಾಬ್‌ ಮುಖ್ಯ: ಮುಂದಿನ ಪೀಳಿಗೆಗೆ ಬೇಕು, ಹಿಜಾಬ್‌ ತೆಗೆದು ಕ್ಲಾಸ್‌ಗೆ ಹೋಗಿ ಅಂತಾರೆ ನಾವು ಹೋಗಲ್ಲ" ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಸಮವಸ್ತ್ರ ನಿಯಮವಿರುವ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಗೆ-ತೊಡುಗೆಗಳನ್ನು ಧರಿಸುವಂತಿಲ್ಲ ಎಂಬ ಹೈಕೋರ್ಟಿನ ಕಡ್ಡಾಯ ಆದೇಶವನ್ನು ಉಲ್ಲಂಘಿಸಿದ ಪರಿಣಾಮ ಶಾಲಾ-ಕಾಲೇಜುಗಳಲ್ಲಿ ಗೊಂದಲವೇರ್ಪಟ್ಟಿದೆ. 

ಶಿಕ್ಷಕರು, ಪೊಲೀಸರು ಮಾತ್ರವಲ್ಲದೆ ಸ್ಥಳಕ್ಕೆ ತಹಸೀಲ್ದಾರ್‌, ಜಿಲ್ಲಾಧಿಕಾರಿ, ಎಸ್ಪಿಗಳೇ ತೆರಳಿ ತಿಳಿವಳಿಕೆ ಹೇಳಿದರೂ ಕ್ಯಾರೇ ಎನ್ನದ ಕೆಲ ವಿದ್ಯಾರ್ಥಿನಿಯರು ಪ್ರಾಣ ಬಿಟ್ಟರೂ ಹಿಜಾಬ್‌ ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಬೀದರ್‌, ಬಳ್ಳಾರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಗದಗ, ತುಮಕೂರು ಸೇರಿದಂತೆ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬುಧವಾರ ಹಿಜಾಬ್‌ಪರ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more