ಎಲ್ಲಾ ಮರೆತು ಮತ್ತೆ ಪತಿಯ ರಕ್ಷಣೆಗೆ ನಿಂತ ವಿಜಯಲಕ್ಷ್ಮಿ! ಮನುಷತ್ವ ಮರೆತವನನ್ನೇ ಕ್ಷಮಿಸಿದ್ದಳು ಕ್ಷಮಯಾಧರಿತ್ರಿ..!

ಎಲ್ಲಾ ಮರೆತು ಮತ್ತೆ ಪತಿಯ ರಕ್ಷಣೆಗೆ ನಿಂತ ವಿಜಯಲಕ್ಷ್ಮಿ! ಮನುಷತ್ವ ಮರೆತವನನ್ನೇ ಕ್ಷಮಿಸಿದ್ದಳು ಕ್ಷಮಯಾಧರಿತ್ರಿ..!

Published : Jun 19, 2024, 06:01 PM IST

ಮತ್ತೊಮ್ಮೆ ಕ್ಷಮಯಾಧರಿತ್ರಿಯಾದ ದರ್ಶನ್ ಪತ್ನಿ..!
ಕ್ರೌರ್ಯ ಮೆರೆದ ನಟ "ಭಯಂಕರ" ಕಂಬಿ ಹಿಂದೆ..!
ಗಂಡನ ರಕ್ಷಣೆಗೆ ಕಾನೂನು ಹೋರಾಟಕ್ಕಿಳಿದ ಹೆಂಡತಿ!


ಕಟ್ಟಿಕೊಂಡ ಗಂಡ ಕುಡುಕ, ಕೊಲೆಗಾರನೇ ಆಗಿರಲಿ. ಹೆಂಡತಿಯಾದವಳಿಗೆ ಆತನೇ ಸರ್ವಸ್ವ. ಆತ ಹೊಡೆದ್ರೂ ಸರಿ, ಬಡಿದ್ರೂ ಸರಿ. ಪರಸ್ತ್ರೀ ಸಹವಾಸ ಮಾಡಿದ್ರೂ ಸರಿ. ಕೊನೆಗೆ ಆಕೆಯ ಕಾರಣಕ್ಕೆ ಜೈಲು ಸೇರಿದ್ರೂ ಸರಿ. ಎಷ್ಟಾದ್ರೂ ಗಂಡ ಅಲ್ವಾ ಅಂತ ಮತ್ತೊಮ್ಮೆ ಕ್ಷಮಯಾಧರಿತ್ರಿಯ ಅವತಾರ ಎತ್ತಿದ್ದಾರೆ ಕಿಲ್ಲಿಂಗ್ ಸ್ಟಾರ್ ದರ್ಶನ್ ತೂಗುದೀಪನ(Darshan Thoogudeep) ಪತ್ನಿ ವಿಜಯಲಕ್ಷ್ಮಿ. 13 ವರ್ಷಗಳ ಹಿಂದೆ ಸಾಯುವಂತೆ ಹೊಡೆದಿದ್ದ ಗಂಡನನ್ನು ಕ್ಷಮಿಸಿದ್ದ ವಿಜಯಲಕ್ಷ್ಮಿ(Vijayalakshmi), ಈಗ ಮತ್ತೊಮ್ಮೆ ದರ್ಶನ್‌ಗೆ ಕ್ಷಮೆ ನೀಡಲು ಮುಂದಾಗಿದ್ದಾರೆ. 2011ರಲ್ಲಿ ಪತ್ನಿ ಮೇಲೆ ಹಲ್ಲೆ ನಡೆಸಿ ಜೈಲು ಸೇರಿದ್ದ ದರ್ಶನ್. ಆಗಿನ್ನೂ ದರ್ಶನ್ ತೂಗುದೀಪ ದೊಡ್ಡ ಸ್ಟಾರ್ ಆಗಿರ್ಲಿಲ್ಲ. ಆರಕ್ಕೇರದ ಮೂರಕ್ಕಿಳಿಯದ ನಟ ಅನ್ನಬಹುದೇನೋ. ಹಾಗಿತ್ತು ಚಿತ್ರರಂಗದಲ್ಲಿ ದರ್ಶನ್ ಸ್ಥಿತಿಗತಿ. ಒಂದು ದಿನ ಇದೇ ದರ್ಶನ್ ಬೇಡದ ವಿಚಾರಕ್ಕೆ ಸುದ್ದಿಯಾಗಿ ಬಿಡ್ತಾನೆ. ಕುಡಿದ ಮತ್ತಿನಲ್ಲಿ ಪತ್ನಿ ವಿಜಯಲಕ್ಷ್ಮಿಗೆ ಮುಖ-ಮೂತಿ ಅಂತ ನೋಡದೆ ಸಾಯುವ ಹಾಗೆ ಹೊಡೆದು ಬಿಡ್ತಾನೆ. ವಿಜಯಲಕ್ಷ್ಮಿ ಆಸ್ಪತ್ರೆ ಸೇರಿದ್ರೆ, ಪತ್ನಿಗೆ ಹೊಡೆದ ತಪ್ಪಿಗೆ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗ್ತಾನೆ. ಕೊನೆಗೆ ಜೈಲಿನಿಂದ ಬಿಡಿಸಿದ್ದು ಇದೇ ವಿಜಯಲಕ್ಷ್ಮಿ. ಜೈಲಿಂದ ಹೊರ ಬಂದ್ಮೇಲೆ ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ತೂಗುದೀಪ ಜೊತೆ ಮಾಧ್ಯಮಗಳ ಮುಂದೆ ಬಂದಿದ್ದ ದರ್ಶನ್, ಯಾವುದೋ ಕೆಟ್ಟ ಘಳಿಗೆಯಲ್ಲಿ ಇಷ್ಟೆಲ್ಲಾ ನಡೆದು ಹೋಯ್ತು, ಇನ್ನು ಇಂಥಾ ತಪ್ಪು ಮಾಡಲ್ಲ, ನನ್ನನ್ನು ಕ್ಷಮಿಸಿ ಅಂದಿದ್ದ. ಪತ್ನಿಯ ಕ್ಷಮೆಯನ್ನೂ ಕೇಳಿದ್ದ. ಅವತ್ತು ತನ್ನ ಮೇಲೆ ನಡೆದ ಕ್ರೂರ ಹಲ್ಲೆಯನ್ನು ಕ್ಷಮಿಸಿ, ದರ್ಶನ್‌ಗೆ ಸೆಕೆಂಡ್ ಚಾನ್ಸ್ ಕೊಟ್ಟವಳು ಈ ಹೆಣ್ಣು ಮಗಳು ವಿಜಯಲಕ್ಷ್ಮಿ. 

ಇದನ್ನೂ ವೀಕ್ಷಿಸಿ:  ಆನ್ ಸ್ಕ್ರೀನ್ ಹೀರೋ..ಅಸಲಿ ಬದುಕಲ್ಲಿ ವಿಲನ್! ಅಭಿಮಾನಿ ದೇವರುಗಳಿಗಾಗಿ ಡಾ.ರಾಜ್ ಮಾಡಿದ್ದೇನು..?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!