ಬರ ಪರಿಸ್ಥಿತಿಯಲ್ಲಿ ವಿಜಯಪುರ ರೈತರಿಗೆ ಮತ್ತೊಂದು ಬರೆ: ಡ್ಯಾಂನಿಂದ ಕೆನಾಲ್‌ಗೆ ಬಿಟ್ಟರು ಜಮೀನು ಸೇರದ ನೀರು..!

ಬರ ಪರಿಸ್ಥಿತಿಯಲ್ಲಿ ವಿಜಯಪುರ ರೈತರಿಗೆ ಮತ್ತೊಂದು ಬರೆ: ಡ್ಯಾಂನಿಂದ ಕೆನಾಲ್‌ಗೆ ಬಿಟ್ಟರು ಜಮೀನು ಸೇರದ ನೀರು..!

Published : Sep 07, 2023, 10:32 AM IST

ಅದ್ಯಾಕೋ ಗೊತ್ತಿಲ್ಲ, ಗುಮ್ಮಟನಗರಿಯ ರೈತರ ಹಣೆಬರಹವೇ ಸರಿ ಇದ್ದಂತೆ ಕಾಣ್ತಿಲ್ಲ. ಮಳೆ ಇಲ್ಲದೆ ಬೆಳೆದು ನಿಂತ ಬೆಳೆ ಒಣಗುತ್ತಿದೆ. ಹೀಗಾಗಿಯೇ ರೈತರಿಗೆ ಅನುಕೂಲವಾಗಲಿ ಎಂದು ಆಲಮಟ್ಟಿ ಡ್ಯಾಂ ನಿಂದ ಕೆನ್ಯಾಲ್‌ಗಳಿಗೆ ನೀರು ಹರಿಬಿಡಲಾಗಿದೆ. ಆದ್ರೆ ಡ್ಯಾಂನಿಂದ ಬಿಡಲಾಗಿರುವ ನೀರು ರೈತರ ಹೊಲಗಳಿಗೆ ತಲುಪುತ್ತಿಲ್ಲ. ಈ ನಡುವೆ ಕೆನಾಲ್‌ಗಳ ಕ್ಲೀನಿಂಗ್‌ನಲ್ಲಿ ಗೋಲ್ಮಾಲ್‌ ನಡೆದಿರೋ ಆರೋಪ ಗಟ್ಟಿಯಾಗಿ ಕೇಳಿ ಬರ್ತಿದೆ.

ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಅನ್ನೋ ಗಾದೆ ಗುಮ್ಮಟ ನಗರಿ ರೈತರಿಗೆ(Farmer) ಅನ್ವಯಿಸುವಂತಿದೆ. ಯಾಕಂದ್ರೆ ಸರಿಯಾಗಿ ಮಳೆಯಿಲ್ಲದೆ ಬರ ಪರಸ್ಥಿತಿ ಎದುರಿಸುತ್ತಿದ್ದ ವಿಜಯಪುರ(Vijayapura) ಜಿಲ್ಲೆಯ ರೈತರಿಗೆ ಆಲಮಟ್ಟಿ ಡ್ಯಾಂನಿಂದ(Allamatti Dam) ಕೃಷಿ ಉದ್ದೇಶಕ್ಕಾಗಿ ಕೆನಾಲ್‌ನಿಂದ ನೀರು ಬಿಡುಗಡೆ ಮಾಡಲಾಗಿದೆ. ಆದ್ರೆ ಡ್ಯಾಂನಿಂದ ಕಾಲುವೆಗೆ ನೀರು ಬಿಟ್ಟರು ರೈತರ ಜಮೀನುಗಳಿಗೆ ಸಮರ್ಪಕವಾಗಿ ಮುಟ್ಟುತ್ತಿಲ್ಲ. ಹಾಗಿದ್ದರೆ ಕಾಲುವೆಯಲ್ಲಿ ಬಿಟ್ಟ ನೀರು(Water) ಎಲ್ಲಿಗೆ ಹೋಗುತ್ತೆ ಎನ್ನುವ ಪ್ರಶ್ನೆ ಏಳುತ್ತೆ. ಅದಕ್ಕೆ ಉತ್ತರ ಕಾಲುವೆಯಲ್ಲಿ ಹೂಳು ತುಂಬಿಕೊಂಡಿದ್ದು. ಕೆನಾಲ್‌ ಸ್ವಚ್ಛಗೊಳಿಸದ ಕಾರಣ ಕೆಲವೆಡೆ ಹೂಳು ತುಂಬಿಕೊಂಡಿದೆ. ವಿಜಯಪುರದ ಕೋಲಾರ ತಾಲೂಕಿನ ರೋಣಿಹಾಳ ಗ್ರಾಮದ ರೈತರ ಜಮೀನಿಗೆ ಬಿಡುವ ಕಾಲುವೆಗಳು ಸಂಪೂರ್ಣ ಮುಚ್ಚಿ ಹೋಗಿವೆ. ಇದರಿಂದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಪ್ರತಿ ವರ್ಷ ಆಲಮಟ್ಟಿ ಡ್ಯಾಂ ಭರ್ತಿಯಾದ ಬಳಿಕ ಡ್ಯಾಂನಿಂದ ರೈತರ ಜಮೀನುಗಳಿಗೆ ಅನುಕೂಲವಾಗಲು ಕಾಲುವೆಗಳಿಗೆ ನೀರು ಬಿಡಲಾಗುತ್ತೆ. ಕಾಲುವೆಗಳು ಖಾಲಿ ಇರೋವಾಗ ಅಂದ್ರೆ ಬೇಸಿಗೆ ಸಮಯದಲ್ಲಿ ಕಾಲುವೆಗಳನ್ನ ಸರಿಯಾದ ರೀತಿಯಲ್ಲಿ ಕ್ಲೀನಿಂಗ್‌ ಮಾಡಿಕೊಳ್ಳಬೇಕಾಗಿತ್ತು. ಆದ್ರೆ, ಕಾಲುವೆ ಹೂಳೆತ್ತಲು ಅನುದಾನ ಬಿಡುಗಡೆಯಾದ್ರೂ, ಕೆಲಸ ಮಾಡದೇ  ಹಣ ಪಡೆದಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಆರೋಪಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಅವನ ಕೊಲೆಯ ಹಿಂದಿತ್ತು ತ್ರಿಕೋನ ಪ್ರೇಮ ಕಹಾನಿ ! ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು ಡೆಡ್ಲಿ ಮರ್ಡರ್ !

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!