ಬರ ಪರಿಸ್ಥಿತಿಯಲ್ಲಿ ವಿಜಯಪುರ ರೈತರಿಗೆ ಮತ್ತೊಂದು ಬರೆ: ಡ್ಯಾಂನಿಂದ ಕೆನಾಲ್‌ಗೆ ಬಿಟ್ಟರು ಜಮೀನು ಸೇರದ ನೀರು..!

ಬರ ಪರಿಸ್ಥಿತಿಯಲ್ಲಿ ವಿಜಯಪುರ ರೈತರಿಗೆ ಮತ್ತೊಂದು ಬರೆ: ಡ್ಯಾಂನಿಂದ ಕೆನಾಲ್‌ಗೆ ಬಿಟ್ಟರು ಜಮೀನು ಸೇರದ ನೀರು..!

Published : Sep 07, 2023, 10:32 AM IST

ಅದ್ಯಾಕೋ ಗೊತ್ತಿಲ್ಲ, ಗುಮ್ಮಟನಗರಿಯ ರೈತರ ಹಣೆಬರಹವೇ ಸರಿ ಇದ್ದಂತೆ ಕಾಣ್ತಿಲ್ಲ. ಮಳೆ ಇಲ್ಲದೆ ಬೆಳೆದು ನಿಂತ ಬೆಳೆ ಒಣಗುತ್ತಿದೆ. ಹೀಗಾಗಿಯೇ ರೈತರಿಗೆ ಅನುಕೂಲವಾಗಲಿ ಎಂದು ಆಲಮಟ್ಟಿ ಡ್ಯಾಂ ನಿಂದ ಕೆನ್ಯಾಲ್‌ಗಳಿಗೆ ನೀರು ಹರಿಬಿಡಲಾಗಿದೆ. ಆದ್ರೆ ಡ್ಯಾಂನಿಂದ ಬಿಡಲಾಗಿರುವ ನೀರು ರೈತರ ಹೊಲಗಳಿಗೆ ತಲುಪುತ್ತಿಲ್ಲ. ಈ ನಡುವೆ ಕೆನಾಲ್‌ಗಳ ಕ್ಲೀನಿಂಗ್‌ನಲ್ಲಿ ಗೋಲ್ಮಾಲ್‌ ನಡೆದಿರೋ ಆರೋಪ ಗಟ್ಟಿಯಾಗಿ ಕೇಳಿ ಬರ್ತಿದೆ.

ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಅನ್ನೋ ಗಾದೆ ಗುಮ್ಮಟ ನಗರಿ ರೈತರಿಗೆ(Farmer) ಅನ್ವಯಿಸುವಂತಿದೆ. ಯಾಕಂದ್ರೆ ಸರಿಯಾಗಿ ಮಳೆಯಿಲ್ಲದೆ ಬರ ಪರಸ್ಥಿತಿ ಎದುರಿಸುತ್ತಿದ್ದ ವಿಜಯಪುರ(Vijayapura) ಜಿಲ್ಲೆಯ ರೈತರಿಗೆ ಆಲಮಟ್ಟಿ ಡ್ಯಾಂನಿಂದ(Allamatti Dam) ಕೃಷಿ ಉದ್ದೇಶಕ್ಕಾಗಿ ಕೆನಾಲ್‌ನಿಂದ ನೀರು ಬಿಡುಗಡೆ ಮಾಡಲಾಗಿದೆ. ಆದ್ರೆ ಡ್ಯಾಂನಿಂದ ಕಾಲುವೆಗೆ ನೀರು ಬಿಟ್ಟರು ರೈತರ ಜಮೀನುಗಳಿಗೆ ಸಮರ್ಪಕವಾಗಿ ಮುಟ್ಟುತ್ತಿಲ್ಲ. ಹಾಗಿದ್ದರೆ ಕಾಲುವೆಯಲ್ಲಿ ಬಿಟ್ಟ ನೀರು(Water) ಎಲ್ಲಿಗೆ ಹೋಗುತ್ತೆ ಎನ್ನುವ ಪ್ರಶ್ನೆ ಏಳುತ್ತೆ. ಅದಕ್ಕೆ ಉತ್ತರ ಕಾಲುವೆಯಲ್ಲಿ ಹೂಳು ತುಂಬಿಕೊಂಡಿದ್ದು. ಕೆನಾಲ್‌ ಸ್ವಚ್ಛಗೊಳಿಸದ ಕಾರಣ ಕೆಲವೆಡೆ ಹೂಳು ತುಂಬಿಕೊಂಡಿದೆ. ವಿಜಯಪುರದ ಕೋಲಾರ ತಾಲೂಕಿನ ರೋಣಿಹಾಳ ಗ್ರಾಮದ ರೈತರ ಜಮೀನಿಗೆ ಬಿಡುವ ಕಾಲುವೆಗಳು ಸಂಪೂರ್ಣ ಮುಚ್ಚಿ ಹೋಗಿವೆ. ಇದರಿಂದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಪ್ರತಿ ವರ್ಷ ಆಲಮಟ್ಟಿ ಡ್ಯಾಂ ಭರ್ತಿಯಾದ ಬಳಿಕ ಡ್ಯಾಂನಿಂದ ರೈತರ ಜಮೀನುಗಳಿಗೆ ಅನುಕೂಲವಾಗಲು ಕಾಲುವೆಗಳಿಗೆ ನೀರು ಬಿಡಲಾಗುತ್ತೆ. ಕಾಲುವೆಗಳು ಖಾಲಿ ಇರೋವಾಗ ಅಂದ್ರೆ ಬೇಸಿಗೆ ಸಮಯದಲ್ಲಿ ಕಾಲುವೆಗಳನ್ನ ಸರಿಯಾದ ರೀತಿಯಲ್ಲಿ ಕ್ಲೀನಿಂಗ್‌ ಮಾಡಿಕೊಳ್ಳಬೇಕಾಗಿತ್ತು. ಆದ್ರೆ, ಕಾಲುವೆ ಹೂಳೆತ್ತಲು ಅನುದಾನ ಬಿಡುಗಡೆಯಾದ್ರೂ, ಕೆಲಸ ಮಾಡದೇ  ಹಣ ಪಡೆದಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಆರೋಪಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಅವನ ಕೊಲೆಯ ಹಿಂದಿತ್ತು ತ್ರಿಕೋನ ಪ್ರೇಮ ಕಹಾನಿ ! ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು ಡೆಡ್ಲಿ ಮರ್ಡರ್ !

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!