ಬರ ಪರಿಸ್ಥಿತಿಯಲ್ಲಿ ವಿಜಯಪುರ ರೈತರಿಗೆ ಮತ್ತೊಂದು ಬರೆ: ಡ್ಯಾಂನಿಂದ ಕೆನಾಲ್‌ಗೆ ಬಿಟ್ಟರು ಜಮೀನು ಸೇರದ ನೀರು..!

ಬರ ಪರಿಸ್ಥಿತಿಯಲ್ಲಿ ವಿಜಯಪುರ ರೈತರಿಗೆ ಮತ್ತೊಂದು ಬರೆ: ಡ್ಯಾಂನಿಂದ ಕೆನಾಲ್‌ಗೆ ಬಿಟ್ಟರು ಜಮೀನು ಸೇರದ ನೀರು..!

Published : Sep 07, 2023, 10:32 AM IST

ಅದ್ಯಾಕೋ ಗೊತ್ತಿಲ್ಲ, ಗುಮ್ಮಟನಗರಿಯ ರೈತರ ಹಣೆಬರಹವೇ ಸರಿ ಇದ್ದಂತೆ ಕಾಣ್ತಿಲ್ಲ. ಮಳೆ ಇಲ್ಲದೆ ಬೆಳೆದು ನಿಂತ ಬೆಳೆ ಒಣಗುತ್ತಿದೆ. ಹೀಗಾಗಿಯೇ ರೈತರಿಗೆ ಅನುಕೂಲವಾಗಲಿ ಎಂದು ಆಲಮಟ್ಟಿ ಡ್ಯಾಂ ನಿಂದ ಕೆನ್ಯಾಲ್‌ಗಳಿಗೆ ನೀರು ಹರಿಬಿಡಲಾಗಿದೆ. ಆದ್ರೆ ಡ್ಯಾಂನಿಂದ ಬಿಡಲಾಗಿರುವ ನೀರು ರೈತರ ಹೊಲಗಳಿಗೆ ತಲುಪುತ್ತಿಲ್ಲ. ಈ ನಡುವೆ ಕೆನಾಲ್‌ಗಳ ಕ್ಲೀನಿಂಗ್‌ನಲ್ಲಿ ಗೋಲ್ಮಾಲ್‌ ನಡೆದಿರೋ ಆರೋಪ ಗಟ್ಟಿಯಾಗಿ ಕೇಳಿ ಬರ್ತಿದೆ.

ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಅನ್ನೋ ಗಾದೆ ಗುಮ್ಮಟ ನಗರಿ ರೈತರಿಗೆ(Farmer) ಅನ್ವಯಿಸುವಂತಿದೆ. ಯಾಕಂದ್ರೆ ಸರಿಯಾಗಿ ಮಳೆಯಿಲ್ಲದೆ ಬರ ಪರಸ್ಥಿತಿ ಎದುರಿಸುತ್ತಿದ್ದ ವಿಜಯಪುರ(Vijayapura) ಜಿಲ್ಲೆಯ ರೈತರಿಗೆ ಆಲಮಟ್ಟಿ ಡ್ಯಾಂನಿಂದ(Allamatti Dam) ಕೃಷಿ ಉದ್ದೇಶಕ್ಕಾಗಿ ಕೆನಾಲ್‌ನಿಂದ ನೀರು ಬಿಡುಗಡೆ ಮಾಡಲಾಗಿದೆ. ಆದ್ರೆ ಡ್ಯಾಂನಿಂದ ಕಾಲುವೆಗೆ ನೀರು ಬಿಟ್ಟರು ರೈತರ ಜಮೀನುಗಳಿಗೆ ಸಮರ್ಪಕವಾಗಿ ಮುಟ್ಟುತ್ತಿಲ್ಲ. ಹಾಗಿದ್ದರೆ ಕಾಲುವೆಯಲ್ಲಿ ಬಿಟ್ಟ ನೀರು(Water) ಎಲ್ಲಿಗೆ ಹೋಗುತ್ತೆ ಎನ್ನುವ ಪ್ರಶ್ನೆ ಏಳುತ್ತೆ. ಅದಕ್ಕೆ ಉತ್ತರ ಕಾಲುವೆಯಲ್ಲಿ ಹೂಳು ತುಂಬಿಕೊಂಡಿದ್ದು. ಕೆನಾಲ್‌ ಸ್ವಚ್ಛಗೊಳಿಸದ ಕಾರಣ ಕೆಲವೆಡೆ ಹೂಳು ತುಂಬಿಕೊಂಡಿದೆ. ವಿಜಯಪುರದ ಕೋಲಾರ ತಾಲೂಕಿನ ರೋಣಿಹಾಳ ಗ್ರಾಮದ ರೈತರ ಜಮೀನಿಗೆ ಬಿಡುವ ಕಾಲುವೆಗಳು ಸಂಪೂರ್ಣ ಮುಚ್ಚಿ ಹೋಗಿವೆ. ಇದರಿಂದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಪ್ರತಿ ವರ್ಷ ಆಲಮಟ್ಟಿ ಡ್ಯಾಂ ಭರ್ತಿಯಾದ ಬಳಿಕ ಡ್ಯಾಂನಿಂದ ರೈತರ ಜಮೀನುಗಳಿಗೆ ಅನುಕೂಲವಾಗಲು ಕಾಲುವೆಗಳಿಗೆ ನೀರು ಬಿಡಲಾಗುತ್ತೆ. ಕಾಲುವೆಗಳು ಖಾಲಿ ಇರೋವಾಗ ಅಂದ್ರೆ ಬೇಸಿಗೆ ಸಮಯದಲ್ಲಿ ಕಾಲುವೆಗಳನ್ನ ಸರಿಯಾದ ರೀತಿಯಲ್ಲಿ ಕ್ಲೀನಿಂಗ್‌ ಮಾಡಿಕೊಳ್ಳಬೇಕಾಗಿತ್ತು. ಆದ್ರೆ, ಕಾಲುವೆ ಹೂಳೆತ್ತಲು ಅನುದಾನ ಬಿಡುಗಡೆಯಾದ್ರೂ, ಕೆಲಸ ಮಾಡದೇ  ಹಣ ಪಡೆದಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಆರೋಪಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಅವನ ಕೊಲೆಯ ಹಿಂದಿತ್ತು ತ್ರಿಕೋನ ಪ್ರೇಮ ಕಹಾನಿ ! ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು ಡೆಡ್ಲಿ ಮರ್ಡರ್ !

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ