ಅಂಬೇಡ್ಕರ್‌ಗೆ ಅಮಿತ್‌ ಶಾ ಅವಮಾನ: ದಲಿತ ಸಂಘಟನೆಗಳಿಂದ ಪ್ರತಿಭಟನೆ, ವಿಜಯಪುರ ಬಂದ್!

ಅಂಬೇಡ್ಕರ್‌ಗೆ ಅಮಿತ್‌ ಶಾ ಅವಮಾನ: ದಲಿತ ಸಂಘಟನೆಗಳಿಂದ ಪ್ರತಿಭಟನೆ, ವಿಜಯಪುರ ಬಂದ್!

Published : Dec 30, 2024, 08:28 PM IST

ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ವಿಜಯಪುರದಲ್ಲಿ ಬಂದ್ ಆಚರಿಸಲಾಗಿದೆ. ದಲಿತ, ಪ್ರಗತಿಪರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮದ್ಯ ಮಾರಾಟ ನಿಷೇಧಿಸಲಾಗಿದೆ.

ವಿಜಯಪುರ (ಡಿ.30): ಗೃಹ ಸಚಿವ ಅಮಿತ್ ಶಾ ಅವರು ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಹಾಗೂ ದಲಿತ ಪರ ಸಂಘಟನೆಗಳಿಂದ ವಿಜಯಪುರ ಜಿಲ್ಲಾ ಬಂದ್ ಮಾಡಲಾಗಿದೆ. ವಿಜಯಪುರ ನಗರ ಬಂದ್‌ಗೆ 50ಕ್ಕೂ ಅಧಿಕ ಸಂಘಟನೆಗಳಿಂದ ಬೆಂಬಲ ನೀಡಲಾಗಿತ್ತು.

ದಲಿತ, ಪ್ರಗತಿಪರ, ಕನ್ನಡಪರ, ರೈತ ಸಂಘಟನೆಗಳಿಂದ ಬಂದ್‌ಗೆ ಬೆಂಬಲ ನೀಡಿದ್ದರಿಂದ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮವಾಗಿ ವಿಜಯಪುರ ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಡಿಡಿಪಿಐ, ಡಿಡಿಪಿಯು ರಿಂದ ಶಾಲಾ‌ಕಾಲೇಜು ರಜೆ ಘೋಷಿಸಿ ಆದೇಶ ಹೊರಡಿಸಿದ್ದರು. ಇತ್ತ ಮದ್ಯ ಮಾರಾಟ ಸಂಗ್ರಹಕ್ಕೂ ಜಿಲ್ಲಾಡಳಿತ ನಿಷೇಧ ಹೇರಿದೆ. ನಿನ್ನೆ ಮದ್ಯರಾತ್ರಿಯಿಂದ ಇಂದು ಮದ್ಯರಾತ್ರಿಯವರೆಗೂ ಮದ್ಯ ಮಾರಾಟ ಮಾಡುವಂತಿಲ್ಲ. ಹೊಸ ವರ್ಷಾಚರಣೆಗೆ ರೆಡಿಯಾಗ್ತಿದ್ದವರಿಗೆ ಬಂದ್ ಶಾಕ್ ನೀಡಿದೆ. ಡಿ.31 ಬೆಳಗಿನಜಾವದವರೆಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಆದೇಶ ಹೊರಡಿಸಿದ್ದಾರೆ.

ಇನ್ನು ನಗರದಾದ್ಯಂತ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್‌ ಮಾಡುವಂತೆ ಕಾಂಗ್ರೆಸ್ ಹಾಗೂ ದಲಿತ, ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದವು. ಕಳೆದ ಡಿ.28ರಂದು ಬಂದ್ ನಡೆಯಬೇಕಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದಿಂದ ಬಂದ್ ಮುಂದೂಡಲಾಗಿತ್ತು. ಹೀಗಾಗಿ, ಎಲ್ಲ ಸಂಘಟನೆಗಳು ಇಂದು ಬಂದ್‌ಗೆ ಕರೆ ನೀಡಿವೆ. ಬಂದ್ ಹಿನ್ನೆಲೆ ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆಯನ್ನೂ ನೀಡಲಾಗಿತ್ತು.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more