ಅಂಬೇಡ್ಕರ್‌ಗೆ ಅಮಿತ್‌ ಶಾ ಅವಮಾನ: ದಲಿತ ಸಂಘಟನೆಗಳಿಂದ ಪ್ರತಿಭಟನೆ, ವಿಜಯಪುರ ಬಂದ್!

ಅಂಬೇಡ್ಕರ್‌ಗೆ ಅಮಿತ್‌ ಶಾ ಅವಮಾನ: ದಲಿತ ಸಂಘಟನೆಗಳಿಂದ ಪ್ರತಿಭಟನೆ, ವಿಜಯಪುರ ಬಂದ್!

Published : Dec 30, 2024, 08:28 PM IST

ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ವಿಜಯಪುರದಲ್ಲಿ ಬಂದ್ ಆಚರಿಸಲಾಗಿದೆ. ದಲಿತ, ಪ್ರಗತಿಪರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮದ್ಯ ಮಾರಾಟ ನಿಷೇಧಿಸಲಾಗಿದೆ.

ವಿಜಯಪುರ (ಡಿ.30): ಗೃಹ ಸಚಿವ ಅಮಿತ್ ಶಾ ಅವರು ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಹಾಗೂ ದಲಿತ ಪರ ಸಂಘಟನೆಗಳಿಂದ ವಿಜಯಪುರ ಜಿಲ್ಲಾ ಬಂದ್ ಮಾಡಲಾಗಿದೆ. ವಿಜಯಪುರ ನಗರ ಬಂದ್‌ಗೆ 50ಕ್ಕೂ ಅಧಿಕ ಸಂಘಟನೆಗಳಿಂದ ಬೆಂಬಲ ನೀಡಲಾಗಿತ್ತು.

ದಲಿತ, ಪ್ರಗತಿಪರ, ಕನ್ನಡಪರ, ರೈತ ಸಂಘಟನೆಗಳಿಂದ ಬಂದ್‌ಗೆ ಬೆಂಬಲ ನೀಡಿದ್ದರಿಂದ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮವಾಗಿ ವಿಜಯಪುರ ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಡಿಡಿಪಿಐ, ಡಿಡಿಪಿಯು ರಿಂದ ಶಾಲಾ‌ಕಾಲೇಜು ರಜೆ ಘೋಷಿಸಿ ಆದೇಶ ಹೊರಡಿಸಿದ್ದರು. ಇತ್ತ ಮದ್ಯ ಮಾರಾಟ ಸಂಗ್ರಹಕ್ಕೂ ಜಿಲ್ಲಾಡಳಿತ ನಿಷೇಧ ಹೇರಿದೆ. ನಿನ್ನೆ ಮದ್ಯರಾತ್ರಿಯಿಂದ ಇಂದು ಮದ್ಯರಾತ್ರಿಯವರೆಗೂ ಮದ್ಯ ಮಾರಾಟ ಮಾಡುವಂತಿಲ್ಲ. ಹೊಸ ವರ್ಷಾಚರಣೆಗೆ ರೆಡಿಯಾಗ್ತಿದ್ದವರಿಗೆ ಬಂದ್ ಶಾಕ್ ನೀಡಿದೆ. ಡಿ.31 ಬೆಳಗಿನಜಾವದವರೆಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಆದೇಶ ಹೊರಡಿಸಿದ್ದಾರೆ.

ಇನ್ನು ನಗರದಾದ್ಯಂತ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್‌ ಮಾಡುವಂತೆ ಕಾಂಗ್ರೆಸ್ ಹಾಗೂ ದಲಿತ, ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದವು. ಕಳೆದ ಡಿ.28ರಂದು ಬಂದ್ ನಡೆಯಬೇಕಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದಿಂದ ಬಂದ್ ಮುಂದೂಡಲಾಗಿತ್ತು. ಹೀಗಾಗಿ, ಎಲ್ಲ ಸಂಘಟನೆಗಳು ಇಂದು ಬಂದ್‌ಗೆ ಕರೆ ನೀಡಿವೆ. ಬಂದ್ ಹಿನ್ನೆಲೆ ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆಯನ್ನೂ ನೀಡಲಾಗಿತ್ತು.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more