ವಿಜಯಪುರದಲ್ಲಿ 1 ವಾರದಿಂದ ಮಳೆ, ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ!

Oct 17, 2020, 3:11 PM IST

ವಿಜಯಪುರ(ಅ.17): ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ ಪ್ರವಾಹ ಬಂದೊದಗಿದೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಮಾತ್ರ ನಾಪತ್ತೆಯಾಗಿದ್ದಾರೆ ಎಂದು ಇಲ್ಲಿನ ಜನತೆ ಹೇಳುತ್ತಿದ್ದಾರೆ. ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಾದ ಸಚಿವರು ಇತ್ತ ಕಡೆ ಬರದೇ ಇರುವುದರಿಂದ ಜಿಲ್ಲೆಯ ಜನರು ಆಕ್ರೋಶಭರಿತರಾಗಿದ್ದಾರೆ. 

ಹೆಸರಿಗೆ ಜಿಲ್ಲಾ ಉಸ್ತುವಾರಿ, ನೆರೆ ಬಂದ್ರೂ ರಾಯಚೂರಿಗೆ ಬಾರದ ಲಕ್ಷ್ಮಣ ಸವದಿ!

ಈವರೆಗೂ ಸಚಿವೆ ಶಶಿಕಲಾ ಜೊಲ್ಲೆ ಅವರು ಸ್ಥಳ ಪರಿಶೀಲನೆ ನಡೆಸಿಲ್ಲ, ಜನರು, ರೈತರು ಯಾವ ರೀತಿ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂಬುದನ್ನೂ ಸಹ ಕೇಳಲು ಆಗಮಿಸಿಲ್ಲ. ಭೀಕರ ಪ್ರವಾಹದಿಂದ ಜಿಲ್ಲೆಯ ಜನರು ಪಡಬಾರದ ಕಷ್ಟಗಳನ್ನ ಎದುರಿಸುತ್ತಿದ್ದಾರೆ.