ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು: ಗ್ರಾ.ಪಂ. ಅಧ್ಯಕ್ಷ ಭೀಮನಗೌಡನ ಕೊಲೆ ರಹಸ್ಯ ಬಯಲು!

ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು: ಗ್ರಾ.ಪಂ. ಅಧ್ಯಕ್ಷ ಭೀಮನಗೌಡನ ಕೊಲೆ ರಹಸ್ಯ ಬಯಲು!

Published : Sep 04, 2025, 06:09 PM IST

ವಿಜಯಪುರ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ್‌ ಹತ್ಯೆಗೆ ರಾಜಕೀಯ ದ್ವೇಷ ಹಾಗೂ ಅಧಿಕಾರದ ಆಸೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಷೌರದ ಅಂಗಡಿಯಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆಗೈದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ವಿಜಯಪುರ (ಸೆ.04): ಒಂದು ಕಾಲದಲ್ಲಿ ಕುಖ್ಯಾತಿ ಪಡೆದಿದ್ದ ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ್‌ ಅವರ ಹತ್ಯೆ ವಿಜಯಪುರ ಜಿಲ್ಲೆಯಲ್ಲಿ ತೀವ್ರ ಆತಂಕ ಮೂಡಿಸಿದೆ. ಹತ್ಯೆಯ ಹಿಂದಿನ ರಹಸ್ಯವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ, ಕೊಲೆಗೆ ಕಾರಣ ಬಹಿರಂಗಪಡಿಸಿದ್ದಾರೆ.

ಕ್ಷೌರದ ಅಂಗಡಿಯಲ್ಲಿ ನಡೆದಿದ್ದ ಘಟನೆ
ಆಗಸ್ಟ್ 26 ರಂದು ಬೆಳಿಗ್ಗೆ ಭೀಮನಗೌಡರು ಶೇವಿಂಗ್ ಮಾಡಿಸಲು ಕ್ಷೌರದ ಅಂಗಡಿಗೆ ಹೋಗಿದ್ದರು. ಅದೇ ಸಮಯದಲ್ಲಿ ಏಕಾಏಕಿ ಅಲ್ಲಿಗೆ ನುಗ್ಗಿದ ಇಬ್ಬರು ಹಂತಕರು, ಅವರ ಕಣ್ಣಿಗೆ ಖಾರದ ಪುಡಿ ಎರಚಿ, ಪಿಸ್ತೂಲಿನಿಂದ ಗುಂಡು ಹಾರಿಸಿ ಪರಾರಿಯಾಗಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಹಂತಕ ಜಾಕೀರ್‌ ಸೇರಿದಂತೆ ಇಬ್ಬರನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಕೊಲೆಗೆ ಕಾರಣವೇನು?
ಹತ್ಯೆಯ ಹಿಂದಿನ ಉದ್ದೇಶದ ಬಗ್ಗೆ ಪೊಲೀಸರು ಆಳವಾಗಿ ತನಿಖೆ ನಡೆಸಿದಾಗ, ಇದು ರಾಜಕೀಯ ದ್ವೇಷ ಹಾಗೂ ಅಧಿಕಾರದ ಆಸೆಯಿಂದ ನಡೆದ ಕೃತ್ಯ ಎಂಬುದು ಬಯಲಾಗಿದೆ. ಹಂತಕ ಜಾಕೀರ್‌ ಮತ್ತು ಭೀಮನಗೌಡರ ನಡುವೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಕುರಿತು ಕಳೆದ 2 ವರ್ಷಗಳಿಂದ ವೈಷಮ್ಯವಿತ್ತು. ಮುಂದಿನ ದಿನಗಳಲ್ಲಿ ಜಾಕೀರ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದನು. ಆದರೆ, ಭೀಮನಗೌಡರು ಅದಕ್ಕೆ ಅಡ್ಡಬರುತ್ತಾರೆಂಬ ಭಯದಿಂದ ಕೊಲೆಗೆ ಸಂಚು ರೂಪಿಸಿದ್ದಾಗಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಭೀಮಾ ತೀರದಲ್ಲಿ ಹೊಸ ಆತಂಕ
ಭೀಮನಗೌಡರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು. ಅವರ ಕುಟುಂಬವು ಸುಮಾರು 50 ವರ್ಷಗಳಿಂದ ಗ್ರಾಮ ಪಂಚಾಯಿತಿ ಅಧಿಕಾರದಲ್ಲಿದೆ. ಭೀಮನಗೌಡರು 'ಬಡವರ ಬಂಧು' ಎಂದೇ ಜನಪ್ರಿಯರಾಗಿದ್ದರು. ಭೀಮಾ ತೀರ ಇತ್ತೀಚೆಗೆ ಶಾಂತವಾಗಿದ್ದು, ಈ ಘಟನೆಯಿಂದ ಮತ್ತೆ ಆ ಭಾಗದಲ್ಲಿ ಗ್ಯಾಂಗ್‌ ವಾರ್ ಆರಂಭವಾಗುವ ಆತಂಕ ಸೃಷ್ಟಿಸಿದೆ. ಪೊಲೀಸರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more